Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್

ರಜನಿ 169ನೇ ಚಿತ್ರಕ್ಕೆ ನೆಲ್ಸನ್ ಆ್ಯಕ್ಷನ್​ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ರಜನಿ ಹಾಗೂ ಶಿವರಾಜ್​ಕುಮಾರ್ ಒಟ್ಟಾಗಿ ನಟಿಸುತ್ತಿರುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್
ರಜಿನಿ-ಶಿವಣ್ಣ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 09, 2022 | 3:58 PM

ರಜನಿಕಾಂತ್ (Rajinikanth) 169ನೇ ಚಿತ್ರದ ಬಗ್ಗೆ ಕನ್ನಡಗರಿಗೂ ನಿರೀಕ್ಷೆ ಸೃಷ್ಟಿ ಆಗಿದೆ. ಇದಕ್ಕೆ ಕಾರಣ ಈ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ (Shivarajkumar) ಕೂಡ ನಟಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಈ ಬಗ್ಗೆ ವರದಿ ಬಿತ್ತರವಾಗಿತ್ತು. ಈಗ ಶಿವರಾಜ್​ಕುಮಾರ್ ಅವರು ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಅಷ್ಟೇ ಅಲ್ಲ, ರಜನಿಕಾಂತ್ ಜತೆ ವಿಶೇಷ ಬಾಂಡಿಂಗ್ ಇರುವ ಬಗ್ಗೆ ಅವರು ಮಾತನಾಡಿದ್ದಾರೆ.

ದಳಪತಿ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ ಹೇಳಿಕೊಳ್ಳುವಂತಹ ಉತ್ತಮ ವಿಮರ್ಶೆ ಪಡೆದುಕೊಂಡಿಲ್ಲ. ಈ ಚಿತ್ರಕ್ಕೆ ನೆಲ್ಸನ್ ದಿಲೀಪ್​ಕುಮಾರ್ ಅವರು ಆ್ಯಕ್ಷನ್​ ಕಟ್​ ಹೇಳಿದ್ದರು. ರಜನಿ 169ನೇ ಚಿತ್ರಕ್ಕೆ ನೆಲ್ಸನ್ ಆ್ಯಕ್ಷನ್​ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ರಜನಿ ಹಾಗೂ ಶಿವರಾಜ್​ಕುಮಾರ್ ಒಟ್ಟಾಗಿ ನಟಿಸುತ್ತಿರುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಬಗ್ಗೆ ಶಿವಣ್ಣ ‘ಸಿನಿಮಾ ಎಕ್ಸ್​ಪ್ರೆಸ್’​ಗೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ವಿಚಾರ ಹಂಚಿಕೊಂಡಿದ್ದಾರೆ.

‘ರಜನಿಕಾಂತ್ ಜತೆ ನಟಿಸುವುದು ನಿಜಕ್ಕೂ ಉತ್ತಮ ಅವಕಾಶ. ಈ ಚಿತ್ರದಲ್ಲಿ ಅವರ ಜತೆ ತೆರೆ ಹಂಚಿಕೊಳ್ಳುತ್ತಿರುವುದು ಖುಷಿ ನೀಡಿದೆ. ಅವರು ನನ್ನನ್ನು ಬಾಲ್ಯದಿಂದಲೂ ನೋಡಿದ್ದಾರೆ. ಅವರ ಜತೆ ನನಗೆ ವಿಶೇಷ ಬಾಂಧವ್ಯ ಇದೆ. ಸಿನಿಮಾದಲ್ಲಿ ಪಾತ್ರ ಹೇಗೇ ಇರಲಿ, ಈ ಪ್ರಾಜೆಕ್ಟ್​ನ ಭಾಗವಾಗಲು ನನಗೆ ಖುಷಿ ಇದೆ. ಬೆಳ್ಳಿ ಪರದೆಮೇಲೆ ರಜನಿಕಾಂತ್ ಮತ್ತು ನನ್ನನ್ನು ಒಟ್ಟಿಗೆ ನೋಡಿ ಫ್ಯಾನ್ಸ್ ಖುಷಿಪಡುತ್ತಾರೆ ಎಂಬ ಬಗ್ಗೆ ನನಗೆ ಖಾತ್ರಿ ಇದೆ’ ಎಂದಿದ್ದಾರೆ ಶಿವರಾಜ್​ಕುಮಾರ್. ಅವರ ಭಾಗದ ಶೂಟಿಂಗ್ ಬೆಂಗಳೂರು ಅಥವಾ ಮೈಸೂರಿನಲ್ಲಿ ನಡೆಯಲಿದೆ. ಆಗಸ್ಟ್​ ತಿಂಗಳಿಂದ ಚಿತ್ರೀಕರಣ ಆರಂಭವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ
Image
ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ
Image
ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

ಇದನ್ನೂ ಓದಿ: ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ; ಎಂದ ಕಮಲ್​ ಹಾಸನ್​; ಏನದು?

ಈ ಚಿತ್ರಕ್ಕೆ ಐಶ್ವರ್ಯಾ ರೈ ನಾಯಕಿ

ರಜನಿಕಾಂತ್ ಹಾಗೂ ಐಶ್ವರ್ಯಾ ರೈ ಇಬ್ಬರೂ ‘ರೋಬೋ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಆ ಬಳಿಕ ಐಶ್ವರ್ಯಾ ರೈ ಅವರು ಮತ್ತೆ ದಕ್ಷಿಣದತ್ತ ಮುಖ ಮಾಡಿರಲಿಲ್ಲ. ಈಗ ಅವರು ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸುವುದರಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಐಶ್ವರ್ಯಾ ರೈ ಮತ್ತೆ ದಕ್ಷಿಣ ಭಾರತದತ್ತ ಮುಖ ಮಾಡುತ್ತಿದ್ದಾರೆ. ಅವರು ರಜನಿಕಾಂತ್ ನಟನೆಯ 169ನೇ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದಾರೆ ಎಂದು ವರದಿ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್