AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನಾ ನೆಹ್ವಾಲ್​ ಬಗ್ಗೆ ಕೆಟ್ಟ ಜೋಕ್​: ಬಹಿರಂಗವಾಗಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಿದ ಸಿದ್ದಾರ್ಥ್​; ಪತ್ರ ವೈರಲ್​​

‘ಡಿಯರ್​ ಸೈನಾ.. ಕೆಲವೇ ದಿನಗಳ ಹಿಂದೆ ನಿಮ್ಮ ಟ್ವೀಟ್​ಗೆ ಪ್ರತಿಯಾಗಿ ನಾನು ಕೆಟ್ಟ ಜೋಕ್​ ಮಾಡಿದ್ದಕ್ಕಾಗಿ ಕ್ಷಮೆ ಕೇಳುತ್ತೇನೆ’ ಎಂದು ಸಿದ್ದಾರ್ಥ್​ ಪತ್ರ ಬರೆದಿದ್ದಾರೆ. ಆ ಲೆಟರ್​ ವೈರಲ್​ ಆಗಿದೆ.

ಸೈನಾ ನೆಹ್ವಾಲ್​ ಬಗ್ಗೆ ಕೆಟ್ಟ ಜೋಕ್​: ಬಹಿರಂಗವಾಗಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಿದ ಸಿದ್ದಾರ್ಥ್​; ಪತ್ರ ವೈರಲ್​​
ಸಿದ್ದಾರ್ಥ್, ಸೈನಾ ನೆಹ್ವಾಲ್​
TV9 Web
| Updated By: ಮದನ್​ ಕುಮಾರ್​|

Updated on: Jan 12, 2022 | 9:29 AM

Share

ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲಿ ಅಭಿನಯಿಸಿರುವ ಖ್ಯಾತ ನಟ ಸಿದ್ದಾರ್ಥ್ (Actor Siddharth)​ ಅವರು ತಮ್ಮ ಸಿದ್ಧಾಂತಗಳ ಕಾರಣಕ್ಕೆ ಆಗಾಗ ಕಿರಿಕ್​ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಬ್ಯಾಡ್ಮಿಂಟನ್​ ಆಟಗಾರ್ತಿ ಸೈನಾ ನೆಹ್ವಾಲ್ (Saina Nehwal)​ ಬಗ್ಗೆ ಆಕ್ಷೇಪಾರ್ಹವಾಗಿ ಟ್ವೀಟ್​ ಮಾಡಿದ್ದರು. ಅದಕ್ಕೆ ಅನೇಕರಿಂದ ಖಂಡನೆ ವ್ಯಕ್ತವಾಗಿತ್ತು. ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಈ ಟ್ವೀಟ್​ ಇದೆ ಎಂದು ಮಹಿಳಾ ಆಯೋಗ ಕೂಡ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿದ್ದಾರ್ಥ್​ ಅವರು ಕ್ಷಮೆ ಕೇಳಿದ್ದಾರೆ. ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡು ಬಹಿರಂಗವಾಗಿಯೇ ಪತ್ರ ಬರೆದಿದ್ದಾರೆ. ಆ ಪತ್ರವನ್ನು ಅವರು ಟ್ವಿಟರ್​ನಲ್ಲಿ (Siddharth Twitter) ಹಂಚಿಕೊಂಡಿದ್ದು, ವೈರಲ್​ ಆಗಿದೆ.

‘ಡಿಯರ್​ ಸೈನಾ.. ಕೆಲವೇ ದಿನಗಳ ಹಿಂದೆ ನಿಮ್ಮ ಟ್ವೀಟ್​ಗೆ ಪ್ರತಿಯಾಗಿ ನಾನು ಕೆಟ್ಟ ಜೋಕ್​ ಮಾಡಿದ್ದಕ್ಕಾಗಿ ಕ್ಷಮೆ ಕೇಳುತ್ತೇನೆ. ನಿಮ್ಮ ಹಲವು ವಿಚಾರಗಳನ್ನು ನಾನು ವಿರೋಧಿಸಬಹುದು. ಆದರೆ ನನ್ನ ವಿರೋಧ ಮತ್ತು ಸಿಟ್ಟು ಕೂಡ ನಾನು ಬಳಸಿದ ಪದಗಳು ಹಾಗೂ ಧಾಟಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಒಂದು ಜೋಕ್​ ಅನ್ನು ವಿವರಿಸಬೇಕಾದ ಸಂದರ್ಭ ಬರುತ್ತದೆ ಎಂದಾದರೆ ಅದು ಒಳ್ಳೆಯ ಜೋಕ್​ ಅಲ್ಲ. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ’ ಎಂದು ಸಿದ್ದಾರ್ಥ್​ ಟ್ವೀಟ್​ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪಂಜಾಬ್​ಗೆ ಭೇಟಿ ನೀಡಿದ್ದಾಗ ಆದ ಭದ್ರತಾ ಲೋಪದ ಕುರಿತು ಕಳವಳ ವ್ಯಕ್ತಪಡಿಸಿ ಸೈನಾ ನೆಹ್ವಾಲ್​ ಅವರು ಟ್ವೀಟ್​ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದಾರ್ಥ್​ ಅವರು ಅವಹೇಳನಕಾರಿ ಪದಗಳನ್ನು ಬಳಸಿದ್ದರು.

ಸೈನಾ ನೆಹ್ವಾಲ್​ ತಂದೆ ಹರ್ವೀರ್ ಸಿಂಗ್ ಕಿಡಿ:

ಸಿದ್ದಾರ್ಥ್​ ಮಾಡಿದ ಅವಹೇಳನಕಾರಿ ಟ್ವೀಟ್ ಕುರಿತಂತೆ ಸೈನಾ ನೆಹ್ವಾಲ್ ತಂದೆ ಹರ್ವೀರ್ ಸಿಂಗ್ ನೆಹ್ವಾಲ್ ಖಾರವಾಗಿ ಪ್ರತಿಕ್ರಿಯಿಸಿದ್ದರು. ‘ಸೈನಾ ದೇಶಕ್ಕೆ ಪದಕಗಳನ್ನು ಗೆದ್ದುಕೊಟ್ಟಿದ್ದಾಳೆ. ಆ ನಟ ದೇಶಕ್ಕೆ ಏನು ಮಾಡಿದ್ದಾರೆ? ಎಂದು ಹರ್ವೀರ್ ಪ್ರಶ್ನಿಸಿದ್ದರು. ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದ ಹರ್ವೀರ್, ‘ನನ್ನ ಮಗಳ ಕುರಿತಾಗಿ ಅಂತಹ ಮಾತುಗಳನ್ನು ಕೇಳಿದಾಗ ಬಹಳ ಬೇಸರವಾಯಿತು. ಆಕೆ ದೇಶದ ಪರ ಆಟವಾಡಿ ಪದಕಗಳನ್ನು ಗೆದ್ದಿದ್ದಾಳೆ. ದೇಶದ ಹೆಮ್ಮೆ ಹೆಚ್ಚಿಸಿದ್ದಾಳೆ. ದೇಶಕ್ಕಾಗಿ ಸಿದ್ದಾರ್ಥ್​ ಏನು ಮಾಡಿದ್ದಾರೆ?’ ಎಂದು ಖಾರವಾಗಿ ಪ್ರಶ್ನಿಸಿದ್ದರು.

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ