AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನಾ ನೆಹ್ವಾಲ್​ ಬಗ್ಗೆ ಕೆಟ್ಟ ಜೋಕ್​: ಬಹಿರಂಗವಾಗಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಿದ ಸಿದ್ದಾರ್ಥ್​; ಪತ್ರ ವೈರಲ್​​

‘ಡಿಯರ್​ ಸೈನಾ.. ಕೆಲವೇ ದಿನಗಳ ಹಿಂದೆ ನಿಮ್ಮ ಟ್ವೀಟ್​ಗೆ ಪ್ರತಿಯಾಗಿ ನಾನು ಕೆಟ್ಟ ಜೋಕ್​ ಮಾಡಿದ್ದಕ್ಕಾಗಿ ಕ್ಷಮೆ ಕೇಳುತ್ತೇನೆ’ ಎಂದು ಸಿದ್ದಾರ್ಥ್​ ಪತ್ರ ಬರೆದಿದ್ದಾರೆ. ಆ ಲೆಟರ್​ ವೈರಲ್​ ಆಗಿದೆ.

ಸೈನಾ ನೆಹ್ವಾಲ್​ ಬಗ್ಗೆ ಕೆಟ್ಟ ಜೋಕ್​: ಬಹಿರಂಗವಾಗಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಿದ ಸಿದ್ದಾರ್ಥ್​; ಪತ್ರ ವೈರಲ್​​
ಸಿದ್ದಾರ್ಥ್, ಸೈನಾ ನೆಹ್ವಾಲ್​
TV9 Web
| Edited By: |

Updated on: Jan 12, 2022 | 9:29 AM

Share

ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲಿ ಅಭಿನಯಿಸಿರುವ ಖ್ಯಾತ ನಟ ಸಿದ್ದಾರ್ಥ್ (Actor Siddharth)​ ಅವರು ತಮ್ಮ ಸಿದ್ಧಾಂತಗಳ ಕಾರಣಕ್ಕೆ ಆಗಾಗ ಕಿರಿಕ್​ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಬ್ಯಾಡ್ಮಿಂಟನ್​ ಆಟಗಾರ್ತಿ ಸೈನಾ ನೆಹ್ವಾಲ್ (Saina Nehwal)​ ಬಗ್ಗೆ ಆಕ್ಷೇಪಾರ್ಹವಾಗಿ ಟ್ವೀಟ್​ ಮಾಡಿದ್ದರು. ಅದಕ್ಕೆ ಅನೇಕರಿಂದ ಖಂಡನೆ ವ್ಯಕ್ತವಾಗಿತ್ತು. ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಈ ಟ್ವೀಟ್​ ಇದೆ ಎಂದು ಮಹಿಳಾ ಆಯೋಗ ಕೂಡ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿದ್ದಾರ್ಥ್​ ಅವರು ಕ್ಷಮೆ ಕೇಳಿದ್ದಾರೆ. ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡು ಬಹಿರಂಗವಾಗಿಯೇ ಪತ್ರ ಬರೆದಿದ್ದಾರೆ. ಆ ಪತ್ರವನ್ನು ಅವರು ಟ್ವಿಟರ್​ನಲ್ಲಿ (Siddharth Twitter) ಹಂಚಿಕೊಂಡಿದ್ದು, ವೈರಲ್​ ಆಗಿದೆ.

‘ಡಿಯರ್​ ಸೈನಾ.. ಕೆಲವೇ ದಿನಗಳ ಹಿಂದೆ ನಿಮ್ಮ ಟ್ವೀಟ್​ಗೆ ಪ್ರತಿಯಾಗಿ ನಾನು ಕೆಟ್ಟ ಜೋಕ್​ ಮಾಡಿದ್ದಕ್ಕಾಗಿ ಕ್ಷಮೆ ಕೇಳುತ್ತೇನೆ. ನಿಮ್ಮ ಹಲವು ವಿಚಾರಗಳನ್ನು ನಾನು ವಿರೋಧಿಸಬಹುದು. ಆದರೆ ನನ್ನ ವಿರೋಧ ಮತ್ತು ಸಿಟ್ಟು ಕೂಡ ನಾನು ಬಳಸಿದ ಪದಗಳು ಹಾಗೂ ಧಾಟಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಒಂದು ಜೋಕ್​ ಅನ್ನು ವಿವರಿಸಬೇಕಾದ ಸಂದರ್ಭ ಬರುತ್ತದೆ ಎಂದಾದರೆ ಅದು ಒಳ್ಳೆಯ ಜೋಕ್​ ಅಲ್ಲ. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ’ ಎಂದು ಸಿದ್ದಾರ್ಥ್​ ಟ್ವೀಟ್​ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪಂಜಾಬ್​ಗೆ ಭೇಟಿ ನೀಡಿದ್ದಾಗ ಆದ ಭದ್ರತಾ ಲೋಪದ ಕುರಿತು ಕಳವಳ ವ್ಯಕ್ತಪಡಿಸಿ ಸೈನಾ ನೆಹ್ವಾಲ್​ ಅವರು ಟ್ವೀಟ್​ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದಾರ್ಥ್​ ಅವರು ಅವಹೇಳನಕಾರಿ ಪದಗಳನ್ನು ಬಳಸಿದ್ದರು.

ಸೈನಾ ನೆಹ್ವಾಲ್​ ತಂದೆ ಹರ್ವೀರ್ ಸಿಂಗ್ ಕಿಡಿ:

ಸಿದ್ದಾರ್ಥ್​ ಮಾಡಿದ ಅವಹೇಳನಕಾರಿ ಟ್ವೀಟ್ ಕುರಿತಂತೆ ಸೈನಾ ನೆಹ್ವಾಲ್ ತಂದೆ ಹರ್ವೀರ್ ಸಿಂಗ್ ನೆಹ್ವಾಲ್ ಖಾರವಾಗಿ ಪ್ರತಿಕ್ರಿಯಿಸಿದ್ದರು. ‘ಸೈನಾ ದೇಶಕ್ಕೆ ಪದಕಗಳನ್ನು ಗೆದ್ದುಕೊಟ್ಟಿದ್ದಾಳೆ. ಆ ನಟ ದೇಶಕ್ಕೆ ಏನು ಮಾಡಿದ್ದಾರೆ? ಎಂದು ಹರ್ವೀರ್ ಪ್ರಶ್ನಿಸಿದ್ದರು. ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದ ಹರ್ವೀರ್, ‘ನನ್ನ ಮಗಳ ಕುರಿತಾಗಿ ಅಂತಹ ಮಾತುಗಳನ್ನು ಕೇಳಿದಾಗ ಬಹಳ ಬೇಸರವಾಯಿತು. ಆಕೆ ದೇಶದ ಪರ ಆಟವಾಡಿ ಪದಕಗಳನ್ನು ಗೆದ್ದಿದ್ದಾಳೆ. ದೇಶದ ಹೆಮ್ಮೆ ಹೆಚ್ಚಿಸಿದ್ದಾಳೆ. ದೇಶಕ್ಕಾಗಿ ಸಿದ್ದಾರ್ಥ್​ ಏನು ಮಾಡಿದ್ದಾರೆ?’ ಎಂದು ಖಾರವಾಗಿ ಪ್ರಶ್ನಿಸಿದ್ದರು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!