Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಬು, ವಿಶಾಲ್ ಸೇರಿ ಐವರು ನಟರಿಗೆ ರೆಡ್ ಕಾರ್ಡ್​; ಇವರು ಮಾಡಿದ ತಪ್ಪೇನು?

ಸಿಂಬು, ವಿಶಾಲ್, ಎಸ್.ಜೆ.ಸೂರ್ಯ, ಅಥರ್ವ ಹಾಗೂ ಯೋಗಿಬಾಬು ಅವರ ಅಸಹಕಾರದ ಆಧಾರದ ಮೇಲೆ ರೆಡ್ ಕಾರ್ಡ್ ನೀಡಲಾಗಿದೆ ಎಂದು ವರದಿಯಾಗಿದೆ.

ಸಿಂಬು, ವಿಶಾಲ್ ಸೇರಿ ಐವರು ನಟರಿಗೆ ರೆಡ್ ಕಾರ್ಡ್​; ಇವರು ಮಾಡಿದ ತಪ್ಪೇನು?
ಯೋಗಿ ಬಾಬು, ವಿಶಾಲ್, ಸಿಂಬು
Follow us
ರಾಜೇಶ್ ದುಗ್ಗುಮನೆ
|

Updated on:Jun 20, 2023 | 8:32 AM

ತಮಿಳು ಚಿತ್ರರಂಗದ ಕೆಲ ಹೀರೋ ಹಾಗೂ ಕಾಮಿಡಿಯನ್​​ಗಳಿಗೆ ನಿರ್ಮಾಪಕರ ಮಂಡಳಿ ಶಾಕ್ ನೀಡಿದೆ. ಚಿತ್ರರಂಗದ ಪ್ರಮುಖ ಐವರಿಗೆ ರೆಡ್ ಕಾರ್ಡ್ ನೀಡಲಾಗಿದೆ ಎಂದು ವರದಿ ಆಗಿದೆ. ಬೇರೆ ಬೇರೆ ಚಿತ್ರಗಳಿಗೆ ಅಡ್ವಾನ್ಸ್ ಪಡೆದು ಡೇಟ್ಸ್ ಸರಿಯಾಗಿ ನೀಡುತ್ತಿಲ್ಲ ಎಂದು ನಿರ್ಮಾಪಕರ ಪರಿಷತ್ತಿಗೆ ಕೆಲ ಪ್ರೊಡ್ಯೂಸರ್​​ಗಳು ದೂರು ನೀಡಿದ್ದರು. ಇದನ್ನು ಪರಿಗಣಿಸಿರುವ ಪರಿಷತ್ತು ಕಾರ್ಯಪ್ರವೃತ್ತವಾಗಿದೆ. ವಿಶಾಲ್, ಸಿಂಬು, ಅಥರ್ವ, ಎಸ್.ಜೆ.ಸೂರ್ಯ ಮತ್ತು ಯೋಗಿ ಬಾಬು (Yogi Babu) ಅವರು ರೆಡ್ ಕಾರ್ಡ್ ಪಡೆದ ಕಲಾವಿದರು ಎಂದು ವರದಿ ಆಗಿದೆ. ಈ ಬೆಳವಣಿಗೆ ಇವರ ವೃತ್ತಿ ಜೀವನಕ್ಕೆ ಸಾಕಷ್ಟು ಹೊಡೆತ ನೀಡುವ ಸಾಧ್ಯತೆ ಇದೆ.

ಸಿಂಬು ಅವರು ಹೀರೋ ಆಗಿ ತಮಿಳುನಾಡಿನಲ್ಲಿ ಮಿಂಚುತ್ತಿದ್ದಾರೆ. ‘ಮಾನಾಡು’ ಸೂಪರ್ ಹಿಟ್ ಆದ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಿದೆ. ಎಸ್​.ಜೆ. ಸೂರ್ಯ ಅವರು ‘ಮಾನಾಡು’ ಚಿತ್ರದಲ್ಲಿ ನೆಗೆಟಿವ್ ಶೇಡ್​ನ ಪಾತ್ರ ಮಾಡಿ ಗಮನ ಸೆಳೆದರು. ಯೋಗಿ ಬಾಬು ಅವರು ಕಾಮಿಡಿ ಪಾತ್ರಗಳ ಮೂಲಕ ಜನಮನ ಗೆದ್ದಿದ್ದಾರೆ. ವಿಶಾಲ್ ಅವರು ಮೊದಲಿನಿಂದಲೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಥರ್ವ್​ ಅವರೂ ಕಾಲಿವುಡ್​ನಲ್ಲಿ ಹೆಸರು ಮಾಡಿದ್ದಾರೆ. ಈ ಐವರೂ ನಿರ್ಮಾಪಕರಿಗೆ ಅಸಹಕಾರ ತೋರಿದ್ದಾರೆ ಎನ್ನಲಾಗುತ್ತಿದೆ.

ಸಿಂಬು, ವಿಶಾಲ್, ಎಸ್.ಜೆ.ಸೂರ್ಯ, ಅಥರ್ವ ಹಾಗೂ ಯೋಗಿಬಾಬು ಅವರ ಅಸಹಕಾರದ ಆಧಾರದ ಮೇಲೆ ರೆಡ್ ಕಾರ್ಡ್ ನೀಡಲಾಗಿದೆ ಎಂದು ವರದಿಯಾಗಿದೆ. ಇವರು ಸಿನಿಮಾ ಒಪ್ಪಿಕೊಂಡು ನಿರ್ಮಾಪಕರಿಂದ ಮುಂಗಡ ಹಣ ಪಡೆದಿದ್ದಾರೆ. ಆದರೆ ಶೂಟಿಂಗ್​ ಡೇಟ್ಸ್ ಕೊಡದೇ ಸತಾಯಿಸುತ್ತಿದ್ದಾರೆ. ಈಗ ನಟರು ಇದಕ್ಕೆ ಉತ್ತರಿಸಬೇಕಿದೆ. ಪರಿಷತ್ತು ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Ram Charan: ಹೆಣ್ಣು ಮಗುವಿಗೆ ತಾಯಿಯಾದ ಉಪಾಸನಾ; ರಾಮ್ ಚರಣ್ ಕುಟುಂಬದಲ್ಲಿ ಸಂತಸ

ಈ ಐವರು ಕಲಾವಿದರು ತಮ್ಮ ವಿರುದ್ಧದ ದೂರಿನ ಬಗ್ಗೆ ಸೂಕ್ತ ವಿವರಣೆ ನೀಡಿದರೆ, ಸಿನಿಮಾಗಳಿಗೆ ಸಹಕಾರ ನೀಡುವುದಾಗಿ ಹೇಳಿದರೆ ಇವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಒಂದೊಮ್ಮೆ ಅಲ್ಲಿಯೂ ಅಸಹಕಾರ ಮುಂದುವರಿದರೆ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Tue, 20 June 23

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ