AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಬು, ವಿಶಾಲ್ ಸೇರಿ ಐವರು ನಟರಿಗೆ ರೆಡ್ ಕಾರ್ಡ್​; ಇವರು ಮಾಡಿದ ತಪ್ಪೇನು?

ಸಿಂಬು, ವಿಶಾಲ್, ಎಸ್.ಜೆ.ಸೂರ್ಯ, ಅಥರ್ವ ಹಾಗೂ ಯೋಗಿಬಾಬು ಅವರ ಅಸಹಕಾರದ ಆಧಾರದ ಮೇಲೆ ರೆಡ್ ಕಾರ್ಡ್ ನೀಡಲಾಗಿದೆ ಎಂದು ವರದಿಯಾಗಿದೆ.

ಸಿಂಬು, ವಿಶಾಲ್ ಸೇರಿ ಐವರು ನಟರಿಗೆ ರೆಡ್ ಕಾರ್ಡ್​; ಇವರು ಮಾಡಿದ ತಪ್ಪೇನು?
ಯೋಗಿ ಬಾಬು, ವಿಶಾಲ್, ಸಿಂಬು
ರಾಜೇಶ್ ದುಗ್ಗುಮನೆ
|

Updated on:Jun 20, 2023 | 8:32 AM

Share

ತಮಿಳು ಚಿತ್ರರಂಗದ ಕೆಲ ಹೀರೋ ಹಾಗೂ ಕಾಮಿಡಿಯನ್​​ಗಳಿಗೆ ನಿರ್ಮಾಪಕರ ಮಂಡಳಿ ಶಾಕ್ ನೀಡಿದೆ. ಚಿತ್ರರಂಗದ ಪ್ರಮುಖ ಐವರಿಗೆ ರೆಡ್ ಕಾರ್ಡ್ ನೀಡಲಾಗಿದೆ ಎಂದು ವರದಿ ಆಗಿದೆ. ಬೇರೆ ಬೇರೆ ಚಿತ್ರಗಳಿಗೆ ಅಡ್ವಾನ್ಸ್ ಪಡೆದು ಡೇಟ್ಸ್ ಸರಿಯಾಗಿ ನೀಡುತ್ತಿಲ್ಲ ಎಂದು ನಿರ್ಮಾಪಕರ ಪರಿಷತ್ತಿಗೆ ಕೆಲ ಪ್ರೊಡ್ಯೂಸರ್​​ಗಳು ದೂರು ನೀಡಿದ್ದರು. ಇದನ್ನು ಪರಿಗಣಿಸಿರುವ ಪರಿಷತ್ತು ಕಾರ್ಯಪ್ರವೃತ್ತವಾಗಿದೆ. ವಿಶಾಲ್, ಸಿಂಬು, ಅಥರ್ವ, ಎಸ್.ಜೆ.ಸೂರ್ಯ ಮತ್ತು ಯೋಗಿ ಬಾಬು (Yogi Babu) ಅವರು ರೆಡ್ ಕಾರ್ಡ್ ಪಡೆದ ಕಲಾವಿದರು ಎಂದು ವರದಿ ಆಗಿದೆ. ಈ ಬೆಳವಣಿಗೆ ಇವರ ವೃತ್ತಿ ಜೀವನಕ್ಕೆ ಸಾಕಷ್ಟು ಹೊಡೆತ ನೀಡುವ ಸಾಧ್ಯತೆ ಇದೆ.

ಸಿಂಬು ಅವರು ಹೀರೋ ಆಗಿ ತಮಿಳುನಾಡಿನಲ್ಲಿ ಮಿಂಚುತ್ತಿದ್ದಾರೆ. ‘ಮಾನಾಡು’ ಸೂಪರ್ ಹಿಟ್ ಆದ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಿದೆ. ಎಸ್​.ಜೆ. ಸೂರ್ಯ ಅವರು ‘ಮಾನಾಡು’ ಚಿತ್ರದಲ್ಲಿ ನೆಗೆಟಿವ್ ಶೇಡ್​ನ ಪಾತ್ರ ಮಾಡಿ ಗಮನ ಸೆಳೆದರು. ಯೋಗಿ ಬಾಬು ಅವರು ಕಾಮಿಡಿ ಪಾತ್ರಗಳ ಮೂಲಕ ಜನಮನ ಗೆದ್ದಿದ್ದಾರೆ. ವಿಶಾಲ್ ಅವರು ಮೊದಲಿನಿಂದಲೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಥರ್ವ್​ ಅವರೂ ಕಾಲಿವುಡ್​ನಲ್ಲಿ ಹೆಸರು ಮಾಡಿದ್ದಾರೆ. ಈ ಐವರೂ ನಿರ್ಮಾಪಕರಿಗೆ ಅಸಹಕಾರ ತೋರಿದ್ದಾರೆ ಎನ್ನಲಾಗುತ್ತಿದೆ.

ಸಿಂಬು, ವಿಶಾಲ್, ಎಸ್.ಜೆ.ಸೂರ್ಯ, ಅಥರ್ವ ಹಾಗೂ ಯೋಗಿಬಾಬು ಅವರ ಅಸಹಕಾರದ ಆಧಾರದ ಮೇಲೆ ರೆಡ್ ಕಾರ್ಡ್ ನೀಡಲಾಗಿದೆ ಎಂದು ವರದಿಯಾಗಿದೆ. ಇವರು ಸಿನಿಮಾ ಒಪ್ಪಿಕೊಂಡು ನಿರ್ಮಾಪಕರಿಂದ ಮುಂಗಡ ಹಣ ಪಡೆದಿದ್ದಾರೆ. ಆದರೆ ಶೂಟಿಂಗ್​ ಡೇಟ್ಸ್ ಕೊಡದೇ ಸತಾಯಿಸುತ್ತಿದ್ದಾರೆ. ಈಗ ನಟರು ಇದಕ್ಕೆ ಉತ್ತರಿಸಬೇಕಿದೆ. ಪರಿಷತ್ತು ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Ram Charan: ಹೆಣ್ಣು ಮಗುವಿಗೆ ತಾಯಿಯಾದ ಉಪಾಸನಾ; ರಾಮ್ ಚರಣ್ ಕುಟುಂಬದಲ್ಲಿ ಸಂತಸ

ಈ ಐವರು ಕಲಾವಿದರು ತಮ್ಮ ವಿರುದ್ಧದ ದೂರಿನ ಬಗ್ಗೆ ಸೂಕ್ತ ವಿವರಣೆ ನೀಡಿದರೆ, ಸಿನಿಮಾಗಳಿಗೆ ಸಹಕಾರ ನೀಡುವುದಾಗಿ ಹೇಳಿದರೆ ಇವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಒಂದೊಮ್ಮೆ ಅಲ್ಲಿಯೂ ಅಸಹಕಾರ ಮುಂದುವರಿದರೆ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Tue, 20 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ