AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರೇ ನನಗೆ ದೇವರು’; ಯುವತಿಯ ಕರಗಿದ ಕನಸಿಗೆ ಮತ್ತೆ ಜೀವ ತುಂಬಿದ ಸೋನು ಸೂದ್

ಆಂಧ್ರಪ್ರದೇಶದ ದೇವಿ ಕುಮಾರಿ ಬಿಎಎಸ್​ಸಿ ಓದುವ ಕನಸು ಕಾಣುತ್ತಿದ್ದರು. ಆದರೆ ಕುಟುಂಬದ ಆರ್ಥಿಕ ಸ್ಥಿತಿ ಆಕೆಯ ವ್ಯಾಸಂಗಕ್ಕೆ ಪೂರಕವಾಗಿರಲಿಲ್ಲ. ಈ ಬಗ್ಗೆ ಅಜಯ್ ಡೇವಿಡ್ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸೋನು ಸೂದ್ ಬಳಿ ಮನವಿ ಮಾಡಿದ್ದರು. ಇದಕ್ಕೆ ಸೋನು ಸೂದ್ ಉತ್ತರಿಸಿದ್ದಾರೆ.

‘ಅವರೇ ನನಗೆ ದೇವರು’; ಯುವತಿಯ ಕರಗಿದ ಕನಸಿಗೆ ಮತ್ತೆ ಜೀವ ತುಂಬಿದ ಸೋನು ಸೂದ್
ಸೋನು ಸೂದ್
TV9 Web
| Edited By: |

Updated on: Jul 22, 2024 | 2:10 PM

Share

ಬಾಲಿವುಡ್​ನ ಖ್ಯಾತ ನಟ ಸೋನು ಸೂದ್ ತಮ್ಮ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬಡ ವಿದ್ಯಾರ್ಥಿನಿಗೆ ಅವರು ಸಹಾಯ ಮಾಡಿದ್ದಾರೆ. ಈ ಮೂಲಕ ಅವರು ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದ್ದಾರೆ. ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ಸೋನು ಸೂದ್ ಜನರ ಸಹಾಯಕ್ಕೆ ನಿಂತರು. ಅಲ್ಲಿಂದ ಇಲ್ಲಿಯವರೆಗೆ ಅವರು ಸಾಮಾಜಿಕ ಕೆಲಸಗಳನ್ನು ಮಾಡುತ್ತಲೇ ಬಂದಿದ್ದಾರೆ.

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆಸ್ಪರಿ ಮಂಡಲದ ಬಾಣವನೂರಿನ ದೇವಿ ಕುಮಾರಿ ಬಿಎಎಸ್​ಸಿ ಓದುವ ಕನಸು ಕಾಣುತ್ತಿದ್ದರು. ಆದರೆ ಕುಟುಂಬದ ಆರ್ಥಿಕ ಸ್ಥಿತಿ ಆಕೆಯ ವ್ಯಾಸಂಗಕ್ಕೆ ಪೂರಕವಾಗಿರಲಿಲ್ಲ. ಈ ಬಗ್ಗೆ ಅಜಯ್ ಡೇವಿಡ್ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸೋನು ಸೂದ್ ಬಳಿ ಮನವಿ ಮಾಡಿದ್ದರು. ಸಹಾಯ ಮಾಡುವಂತೆ ಕೋರಿದ್ದರು.

ಇದನ್ನು ನೋಡಿದ ಸೋನು ಸೂದ್ ತಕ್ಷಣ ಪ್ರತಿಕ್ರಿಯಿಸಿದ್ದಾರೆ. ‘ಯಾವುದೇ ಸಂದರ್ಭದಲ್ಲೂ ನಿಮ್ಮ ಅಧ್ಯಯನವನ್ನು ನಿಲ್ಲಿಸಬೇಡಿ. ಕಾಲೇಜಿಗೆ ಹೋಗಲು ಸಿದ್ಧರಾಗಿರಿ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದರು. ಈಗ ಕೊಟ್ಟ ಮಾತಿನಂತೆ ಸೋನು ಸೂದ್ ದೇವಿ ಕುಮಾರಿಯ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡಿದ್ದಾರೆ. ಇದರಿಂದ ಮನೆಯಲ್ಲಿ ವಿದ್ಯಾರ್ಥಿನಿಯರ ಸಂತಸಕ್ಕೆ ಮಿತಿಯೇ ಇಲ್ಲದಂತಾಗಿದೆ.

ಇದನ್ನೂ ಓದಿ: ಸೋನು ಸೂದ್ ವಾಟ್ಸಾಪ್ ಖಾತೆ ಬ್ಲಾಕ್; ಈ ತಪ್ಪು ಮಾಡಿದರೆ ನಿಮಗೂ ಇದೇ ಗತಿ

ಸೋನು ಸೂದ್ ಅವರ ಭಾವಚಿತ್ರವನ್ನು ಪ್ರಿಂಟ್ ಮಾಡಿಸಿ ಅದನ್ನು ಹಿಡಿದು ದೇವಿ ಕುಮಾರಿ ಅವರು ಧನ್ಯವಾದ ಹೇಳಿದ್ದಾರೆ. ‘ನಮ್ಮ ಕುಟುಂಬ ಆರ್ಥಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ, ನನಗೆ ಅಧ್ಯಯನದಲ್ಲಿ ತುಂಬಾ ಆಸಕ್ತಿ. ಮನೆಯ ಪರಿಸ್ಥಿತಿಯಿಂದಾಗಿ ನನ್ನ ತಂದೆ ತಾಯಿ ನನ್ನ ಓದನ್ನು ಮಧ್ಯದಲ್ಲಿ ನಿಲ್ಲಿಸಲು ಬಯಸಿದ್ದರು. ನನ್ನ ಕನಸುಗಳೆಲ್ಲ ಕರಗಿತು ಎಂದು ಬೇಸರದಲ್ಲಿ ಇದ್ದೆ. ಅಂತಹ ಸಮಯದಲ್ಲಿ ಸೋನು ಸೂದ್ ಅವರು ನನ್ನ ಬೆಂಬಲಕ್ಕೆ ನಿಂತರು. ಅವರು ನನ್ನ ಅಧ್ಯಯನಕ್ಕೆ ಬೇಕಾದ ಸಹಾಯವನ್ನು ಮಾಡಿದರು. ಅವರೀಗ ನನಗೆ ದೇವರ ಸಮಾನ’ ಎಂದು ದೇವಿ ಕುಮಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್