Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರೇ ನನಗೆ ದೇವರು’; ಯುವತಿಯ ಕರಗಿದ ಕನಸಿಗೆ ಮತ್ತೆ ಜೀವ ತುಂಬಿದ ಸೋನು ಸೂದ್

ಆಂಧ್ರಪ್ರದೇಶದ ದೇವಿ ಕುಮಾರಿ ಬಿಎಎಸ್​ಸಿ ಓದುವ ಕನಸು ಕಾಣುತ್ತಿದ್ದರು. ಆದರೆ ಕುಟುಂಬದ ಆರ್ಥಿಕ ಸ್ಥಿತಿ ಆಕೆಯ ವ್ಯಾಸಂಗಕ್ಕೆ ಪೂರಕವಾಗಿರಲಿಲ್ಲ. ಈ ಬಗ್ಗೆ ಅಜಯ್ ಡೇವಿಡ್ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸೋನು ಸೂದ್ ಬಳಿ ಮನವಿ ಮಾಡಿದ್ದರು. ಇದಕ್ಕೆ ಸೋನು ಸೂದ್ ಉತ್ತರಿಸಿದ್ದಾರೆ.

‘ಅವರೇ ನನಗೆ ದೇವರು’; ಯುವತಿಯ ಕರಗಿದ ಕನಸಿಗೆ ಮತ್ತೆ ಜೀವ ತುಂಬಿದ ಸೋನು ಸೂದ್
ಸೋನು ಸೂದ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 22, 2024 | 2:10 PM

ಬಾಲಿವುಡ್​ನ ಖ್ಯಾತ ನಟ ಸೋನು ಸೂದ್ ತಮ್ಮ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬಡ ವಿದ್ಯಾರ್ಥಿನಿಗೆ ಅವರು ಸಹಾಯ ಮಾಡಿದ್ದಾರೆ. ಈ ಮೂಲಕ ಅವರು ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದ್ದಾರೆ. ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ಸೋನು ಸೂದ್ ಜನರ ಸಹಾಯಕ್ಕೆ ನಿಂತರು. ಅಲ್ಲಿಂದ ಇಲ್ಲಿಯವರೆಗೆ ಅವರು ಸಾಮಾಜಿಕ ಕೆಲಸಗಳನ್ನು ಮಾಡುತ್ತಲೇ ಬಂದಿದ್ದಾರೆ.

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆಸ್ಪರಿ ಮಂಡಲದ ಬಾಣವನೂರಿನ ದೇವಿ ಕುಮಾರಿ ಬಿಎಎಸ್​ಸಿ ಓದುವ ಕನಸು ಕಾಣುತ್ತಿದ್ದರು. ಆದರೆ ಕುಟುಂಬದ ಆರ್ಥಿಕ ಸ್ಥಿತಿ ಆಕೆಯ ವ್ಯಾಸಂಗಕ್ಕೆ ಪೂರಕವಾಗಿರಲಿಲ್ಲ. ಈ ಬಗ್ಗೆ ಅಜಯ್ ಡೇವಿಡ್ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸೋನು ಸೂದ್ ಬಳಿ ಮನವಿ ಮಾಡಿದ್ದರು. ಸಹಾಯ ಮಾಡುವಂತೆ ಕೋರಿದ್ದರು.

ಇದನ್ನು ನೋಡಿದ ಸೋನು ಸೂದ್ ತಕ್ಷಣ ಪ್ರತಿಕ್ರಿಯಿಸಿದ್ದಾರೆ. ‘ಯಾವುದೇ ಸಂದರ್ಭದಲ್ಲೂ ನಿಮ್ಮ ಅಧ್ಯಯನವನ್ನು ನಿಲ್ಲಿಸಬೇಡಿ. ಕಾಲೇಜಿಗೆ ಹೋಗಲು ಸಿದ್ಧರಾಗಿರಿ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದರು. ಈಗ ಕೊಟ್ಟ ಮಾತಿನಂತೆ ಸೋನು ಸೂದ್ ದೇವಿ ಕುಮಾರಿಯ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡಿದ್ದಾರೆ. ಇದರಿಂದ ಮನೆಯಲ್ಲಿ ವಿದ್ಯಾರ್ಥಿನಿಯರ ಸಂತಸಕ್ಕೆ ಮಿತಿಯೇ ಇಲ್ಲದಂತಾಗಿದೆ.

ಇದನ್ನೂ ಓದಿ: ಸೋನು ಸೂದ್ ವಾಟ್ಸಾಪ್ ಖಾತೆ ಬ್ಲಾಕ್; ಈ ತಪ್ಪು ಮಾಡಿದರೆ ನಿಮಗೂ ಇದೇ ಗತಿ

ಸೋನು ಸೂದ್ ಅವರ ಭಾವಚಿತ್ರವನ್ನು ಪ್ರಿಂಟ್ ಮಾಡಿಸಿ ಅದನ್ನು ಹಿಡಿದು ದೇವಿ ಕುಮಾರಿ ಅವರು ಧನ್ಯವಾದ ಹೇಳಿದ್ದಾರೆ. ‘ನಮ್ಮ ಕುಟುಂಬ ಆರ್ಥಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ, ನನಗೆ ಅಧ್ಯಯನದಲ್ಲಿ ತುಂಬಾ ಆಸಕ್ತಿ. ಮನೆಯ ಪರಿಸ್ಥಿತಿಯಿಂದಾಗಿ ನನ್ನ ತಂದೆ ತಾಯಿ ನನ್ನ ಓದನ್ನು ಮಧ್ಯದಲ್ಲಿ ನಿಲ್ಲಿಸಲು ಬಯಸಿದ್ದರು. ನನ್ನ ಕನಸುಗಳೆಲ್ಲ ಕರಗಿತು ಎಂದು ಬೇಸರದಲ್ಲಿ ಇದ್ದೆ. ಅಂತಹ ಸಮಯದಲ್ಲಿ ಸೋನು ಸೂದ್ ಅವರು ನನ್ನ ಬೆಂಬಲಕ್ಕೆ ನಿಂತರು. ಅವರು ನನ್ನ ಅಧ್ಯಯನಕ್ಕೆ ಬೇಕಾದ ಸಹಾಯವನ್ನು ಮಾಡಿದರು. ಅವರೀಗ ನನಗೆ ದೇವರ ಸಮಾನ’ ಎಂದು ದೇವಿ ಕುಮಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​