‘ಅವರೇ ನನಗೆ ದೇವರು’; ಯುವತಿಯ ಕರಗಿದ ಕನಸಿಗೆ ಮತ್ತೆ ಜೀವ ತುಂಬಿದ ಸೋನು ಸೂದ್

ಆಂಧ್ರಪ್ರದೇಶದ ದೇವಿ ಕುಮಾರಿ ಬಿಎಎಸ್​ಸಿ ಓದುವ ಕನಸು ಕಾಣುತ್ತಿದ್ದರು. ಆದರೆ ಕುಟುಂಬದ ಆರ್ಥಿಕ ಸ್ಥಿತಿ ಆಕೆಯ ವ್ಯಾಸಂಗಕ್ಕೆ ಪೂರಕವಾಗಿರಲಿಲ್ಲ. ಈ ಬಗ್ಗೆ ಅಜಯ್ ಡೇವಿಡ್ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸೋನು ಸೂದ್ ಬಳಿ ಮನವಿ ಮಾಡಿದ್ದರು. ಇದಕ್ಕೆ ಸೋನು ಸೂದ್ ಉತ್ತರಿಸಿದ್ದಾರೆ.

‘ಅವರೇ ನನಗೆ ದೇವರು’; ಯುವತಿಯ ಕರಗಿದ ಕನಸಿಗೆ ಮತ್ತೆ ಜೀವ ತುಂಬಿದ ಸೋನು ಸೂದ್
ಸೋನು ಸೂದ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 22, 2024 | 2:10 PM

ಬಾಲಿವುಡ್​ನ ಖ್ಯಾತ ನಟ ಸೋನು ಸೂದ್ ತಮ್ಮ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬಡ ವಿದ್ಯಾರ್ಥಿನಿಗೆ ಅವರು ಸಹಾಯ ಮಾಡಿದ್ದಾರೆ. ಈ ಮೂಲಕ ಅವರು ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದ್ದಾರೆ. ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ಸೋನು ಸೂದ್ ಜನರ ಸಹಾಯಕ್ಕೆ ನಿಂತರು. ಅಲ್ಲಿಂದ ಇಲ್ಲಿಯವರೆಗೆ ಅವರು ಸಾಮಾಜಿಕ ಕೆಲಸಗಳನ್ನು ಮಾಡುತ್ತಲೇ ಬಂದಿದ್ದಾರೆ.

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆಸ್ಪರಿ ಮಂಡಲದ ಬಾಣವನೂರಿನ ದೇವಿ ಕುಮಾರಿ ಬಿಎಎಸ್​ಸಿ ಓದುವ ಕನಸು ಕಾಣುತ್ತಿದ್ದರು. ಆದರೆ ಕುಟುಂಬದ ಆರ್ಥಿಕ ಸ್ಥಿತಿ ಆಕೆಯ ವ್ಯಾಸಂಗಕ್ಕೆ ಪೂರಕವಾಗಿರಲಿಲ್ಲ. ಈ ಬಗ್ಗೆ ಅಜಯ್ ಡೇವಿಡ್ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸೋನು ಸೂದ್ ಬಳಿ ಮನವಿ ಮಾಡಿದ್ದರು. ಸಹಾಯ ಮಾಡುವಂತೆ ಕೋರಿದ್ದರು.

ಇದನ್ನು ನೋಡಿದ ಸೋನು ಸೂದ್ ತಕ್ಷಣ ಪ್ರತಿಕ್ರಿಯಿಸಿದ್ದಾರೆ. ‘ಯಾವುದೇ ಸಂದರ್ಭದಲ್ಲೂ ನಿಮ್ಮ ಅಧ್ಯಯನವನ್ನು ನಿಲ್ಲಿಸಬೇಡಿ. ಕಾಲೇಜಿಗೆ ಹೋಗಲು ಸಿದ್ಧರಾಗಿರಿ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದರು. ಈಗ ಕೊಟ್ಟ ಮಾತಿನಂತೆ ಸೋನು ಸೂದ್ ದೇವಿ ಕುಮಾರಿಯ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡಿದ್ದಾರೆ. ಇದರಿಂದ ಮನೆಯಲ್ಲಿ ವಿದ್ಯಾರ್ಥಿನಿಯರ ಸಂತಸಕ್ಕೆ ಮಿತಿಯೇ ಇಲ್ಲದಂತಾಗಿದೆ.

ಇದನ್ನೂ ಓದಿ: ಸೋನು ಸೂದ್ ವಾಟ್ಸಾಪ್ ಖಾತೆ ಬ್ಲಾಕ್; ಈ ತಪ್ಪು ಮಾಡಿದರೆ ನಿಮಗೂ ಇದೇ ಗತಿ

ಸೋನು ಸೂದ್ ಅವರ ಭಾವಚಿತ್ರವನ್ನು ಪ್ರಿಂಟ್ ಮಾಡಿಸಿ ಅದನ್ನು ಹಿಡಿದು ದೇವಿ ಕುಮಾರಿ ಅವರು ಧನ್ಯವಾದ ಹೇಳಿದ್ದಾರೆ. ‘ನಮ್ಮ ಕುಟುಂಬ ಆರ್ಥಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ, ನನಗೆ ಅಧ್ಯಯನದಲ್ಲಿ ತುಂಬಾ ಆಸಕ್ತಿ. ಮನೆಯ ಪರಿಸ್ಥಿತಿಯಿಂದಾಗಿ ನನ್ನ ತಂದೆ ತಾಯಿ ನನ್ನ ಓದನ್ನು ಮಧ್ಯದಲ್ಲಿ ನಿಲ್ಲಿಸಲು ಬಯಸಿದ್ದರು. ನನ್ನ ಕನಸುಗಳೆಲ್ಲ ಕರಗಿತು ಎಂದು ಬೇಸರದಲ್ಲಿ ಇದ್ದೆ. ಅಂತಹ ಸಮಯದಲ್ಲಿ ಸೋನು ಸೂದ್ ಅವರು ನನ್ನ ಬೆಂಬಲಕ್ಕೆ ನಿಂತರು. ಅವರು ನನ್ನ ಅಧ್ಯಯನಕ್ಕೆ ಬೇಕಾದ ಸಹಾಯವನ್ನು ಮಾಡಿದರು. ಅವರೀಗ ನನಗೆ ದೇವರ ಸಮಾನ’ ಎಂದು ದೇವಿ ಕುಮಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?