AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ನೋಡಲು ನಾನು ಕಾಯ್ತಾ ಇರ್ತೀನಿ‘; ಬರ್ತ್​ಡೇ ದಿನ ಅಭಿಮಾನಿಗಳ ಆಮಂತ್ರಿಸಿದ ಶ್ರೀಮುರಳಿ

ಈ ಬಾರಿ ಶ್ರೀಮುರಳಿ ಕುಟುಂಬದಲ್ಲಿ ಒಂದು ಕಹಿ ಘಟನೆ ನಡೆಯಿತು. ಆದಾಗ್ಯೂ ಶ್ರೀಮುರಳಿ ಅವರು ಈ ಬಾರಿ ಬರ್ತ್​​ಡೇನ ಅಭಿಮಾನಿಗಳಿಗೋಸ್ಕರ ಆಚರಿಸಿಕೊಳ್ಳು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ನಿಮ್ಮನ್ನು ನೋಡಲು ನಾನು ಕಾಯ್ತಾ ಇರ್ತೀನಿ‘; ಬರ್ತ್​ಡೇ ದಿನ ಅಭಿಮಾನಿಗಳ ಆಮಂತ್ರಿಸಿದ ಶ್ರೀಮುರಳಿ
ಶ್ರೀಮುರಳಿ
ರಾಜೇಶ್ ದುಗ್ಗುಮನೆ
|

Updated on:Dec 16, 2023 | 11:59 AM

Share

ನಟ ಶ್ರೀಮುರಳಿ (Srimurali) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಡಿಸೆಂಬರ್ 17ರಂದು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ವರ್ಷ ಅವರು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಕುಟುಂಬದಲ್ಲಿ ಸಾಕಷ್ಟು ನೋವುಗಳು ಇದ್ದರೂ ಅದನ್ನು ಬದಿಗಿಟ್ಟು ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಈ ಬಗ್ಗೆ ಅವರು ವಿಡಿಯೋ ಮೆಸೇಜ್ ನೀಡಿದ್ದಾರೆ. ಭೇಟಿ ಮಾಡಲು ಬರುವ ಅಭಿಮಾನಿಗಳ ಬಳಿ ಶ್ರೀಮುರಳಿ ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ.

ಈ ಬಾರಿ ಶ್ರೀಮುರಳಿ ಕುಟುಂಬದಲ್ಲಿ ಒಂದು ಕಹಿ ಘಟನೆ ನಡೆಯಿತು. ಅವರ ಸಹೋದರ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಅಕಾಲಿಕ ಮರಣ ಹೊಂದಿದರು. ಈ ನೋವು ಸದ್ಯಕ್ಕೆ ಮರೆ ಆಗುವಂಥದ್ದಲ್ಲ. ಆದಾಗ್ಯೂ ಶ್ರೀಮುರಳಿ ಅವರು ಈ ಬಾರಿ ಬರ್ತ್​​ಡೇನ ಅಭಿಮಾನಿಗಳಿಗೋಸ್ಕರ ಆಚರಿಸಿಕೊಳ್ಳು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ನನ್ನ ಪ್ರೀತಿಯ ಅಭಿಮಾನಿಗಳೇ ಇಷ್ಟು ವರ್ಷ ನನ್ನ ಬರ್ತ್​ಡೇಗೆ ಸೇರೋಕೆ ಆಗಿರಲಿಲ್ಲ. ಯಾಕೆ ಅನ್ನೋದು ನಿಮಗೆ ಗೊತ್ತು. ಈ ಬಾರಿಯೂ ಸೇರೋ ಪರಿಸ್ಥಿತಿ ಇರಲಿಲ್ಲ. ಆದರೆ, ಅಭಿಮಾನಿಗಳ ಒತ್ತಾಯದ ಮೇರೆಗೆ ನೀವು ಕೊಡೋ ಪ್ರೀತಿಗೆ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದೇನೆ. ಎಲ್ಲವೂ ನಿಮ್ಮ ಆಜ್ಞೆಯಂತೆ ನಡೆಯಬೇಕು. ಡಿಸೆಂಬರ್ 17ರಂದು ವಸಂತ ನಗರದಲ್ಲಿರುವ ಮಿಲ್ಲರ್ಸ್​ ರೋಡ್​ನ ದೇವರಾಜ್ ಅರಸ ಭವನದಲ್ಲಿ ಬೆಳಿಗ್ಗೆ ಹತ್ತೂವರೆ ನಂತರ ಭೇಟಿ ಮಾಡುವೆ’ ಎಂದಿದ್ದಾರೆ ಶ್ರೀಮುರಳಿ.

ಇದನ್ನೂ ಓದಿ: ‘ಕಲಾವಿದರನ್ನು ಕರೆಸಿ ಪ್ರತಿ ದಿನ ಕರ್ನಾಟಕ ಬಂದ್​ ಮಾಡ್ತೀರಾ?’; ಕಾವೇರಿ ಹೋರಾಟದ ಬಗ್ಗೆ ಶ್ರೀಮುರಳಿ ಮಾತು

‘ನನ್ನದೊಂದು ಕೋರಿಕೆ. ಯಾರೂ ಹಾರ ಉಡುಗೊರೆ ತರಬೇಡಿ. ಅದು ನಿಮ್ಮ ದುಡಿಮೆ. ಅದರಿಂದ ನಿಮಗೆ ಒಳ್ಳೆಯದಾಗಬೇಕು. ಖಾಲಿ ಕೈಯಲ್ಲಿ ಬನ್ನಿ. ಯಾವುದೇ ವಿಚಾರದಲ್ಲಿ ಖರ್ಚು ಮಾಡಬೇಡಿ. ನಿಮಗಾಗಿ ಸೇರುತ್ತಾ ಇರೋದು. ನಿಮ್ಮನ್ನು ನೋಡಲು ನಾನು ಕಾಯ್ತಾ ಇರ್ತೀನಿ’ ಎಂದು ಶ್ರೀಮುರಳಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:44 am, Sat, 16 December 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ