AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ನೋಡಲು ನಾನು ಕಾಯ್ತಾ ಇರ್ತೀನಿ‘; ಬರ್ತ್​ಡೇ ದಿನ ಅಭಿಮಾನಿಗಳ ಆಮಂತ್ರಿಸಿದ ಶ್ರೀಮುರಳಿ

ಈ ಬಾರಿ ಶ್ರೀಮುರಳಿ ಕುಟುಂಬದಲ್ಲಿ ಒಂದು ಕಹಿ ಘಟನೆ ನಡೆಯಿತು. ಆದಾಗ್ಯೂ ಶ್ರೀಮುರಳಿ ಅವರು ಈ ಬಾರಿ ಬರ್ತ್​​ಡೇನ ಅಭಿಮಾನಿಗಳಿಗೋಸ್ಕರ ಆಚರಿಸಿಕೊಳ್ಳು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ನಿಮ್ಮನ್ನು ನೋಡಲು ನಾನು ಕಾಯ್ತಾ ಇರ್ತೀನಿ‘; ಬರ್ತ್​ಡೇ ದಿನ ಅಭಿಮಾನಿಗಳ ಆಮಂತ್ರಿಸಿದ ಶ್ರೀಮುರಳಿ
ಶ್ರೀಮುರಳಿ
ರಾಜೇಶ್ ದುಗ್ಗುಮನೆ
|

Updated on:Dec 16, 2023 | 11:59 AM

Share

ನಟ ಶ್ರೀಮುರಳಿ (Srimurali) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಡಿಸೆಂಬರ್ 17ರಂದು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ವರ್ಷ ಅವರು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಕುಟುಂಬದಲ್ಲಿ ಸಾಕಷ್ಟು ನೋವುಗಳು ಇದ್ದರೂ ಅದನ್ನು ಬದಿಗಿಟ್ಟು ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಈ ಬಗ್ಗೆ ಅವರು ವಿಡಿಯೋ ಮೆಸೇಜ್ ನೀಡಿದ್ದಾರೆ. ಭೇಟಿ ಮಾಡಲು ಬರುವ ಅಭಿಮಾನಿಗಳ ಬಳಿ ಶ್ರೀಮುರಳಿ ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ.

ಈ ಬಾರಿ ಶ್ರೀಮುರಳಿ ಕುಟುಂಬದಲ್ಲಿ ಒಂದು ಕಹಿ ಘಟನೆ ನಡೆಯಿತು. ಅವರ ಸಹೋದರ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಅಕಾಲಿಕ ಮರಣ ಹೊಂದಿದರು. ಈ ನೋವು ಸದ್ಯಕ್ಕೆ ಮರೆ ಆಗುವಂಥದ್ದಲ್ಲ. ಆದಾಗ್ಯೂ ಶ್ರೀಮುರಳಿ ಅವರು ಈ ಬಾರಿ ಬರ್ತ್​​ಡೇನ ಅಭಿಮಾನಿಗಳಿಗೋಸ್ಕರ ಆಚರಿಸಿಕೊಳ್ಳು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ನನ್ನ ಪ್ರೀತಿಯ ಅಭಿಮಾನಿಗಳೇ ಇಷ್ಟು ವರ್ಷ ನನ್ನ ಬರ್ತ್​ಡೇಗೆ ಸೇರೋಕೆ ಆಗಿರಲಿಲ್ಲ. ಯಾಕೆ ಅನ್ನೋದು ನಿಮಗೆ ಗೊತ್ತು. ಈ ಬಾರಿಯೂ ಸೇರೋ ಪರಿಸ್ಥಿತಿ ಇರಲಿಲ್ಲ. ಆದರೆ, ಅಭಿಮಾನಿಗಳ ಒತ್ತಾಯದ ಮೇರೆಗೆ ನೀವು ಕೊಡೋ ಪ್ರೀತಿಗೆ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದೇನೆ. ಎಲ್ಲವೂ ನಿಮ್ಮ ಆಜ್ಞೆಯಂತೆ ನಡೆಯಬೇಕು. ಡಿಸೆಂಬರ್ 17ರಂದು ವಸಂತ ನಗರದಲ್ಲಿರುವ ಮಿಲ್ಲರ್ಸ್​ ರೋಡ್​ನ ದೇವರಾಜ್ ಅರಸ ಭವನದಲ್ಲಿ ಬೆಳಿಗ್ಗೆ ಹತ್ತೂವರೆ ನಂತರ ಭೇಟಿ ಮಾಡುವೆ’ ಎಂದಿದ್ದಾರೆ ಶ್ರೀಮುರಳಿ.

ಇದನ್ನೂ ಓದಿ: ‘ಕಲಾವಿದರನ್ನು ಕರೆಸಿ ಪ್ರತಿ ದಿನ ಕರ್ನಾಟಕ ಬಂದ್​ ಮಾಡ್ತೀರಾ?’; ಕಾವೇರಿ ಹೋರಾಟದ ಬಗ್ಗೆ ಶ್ರೀಮುರಳಿ ಮಾತು

‘ನನ್ನದೊಂದು ಕೋರಿಕೆ. ಯಾರೂ ಹಾರ ಉಡುಗೊರೆ ತರಬೇಡಿ. ಅದು ನಿಮ್ಮ ದುಡಿಮೆ. ಅದರಿಂದ ನಿಮಗೆ ಒಳ್ಳೆಯದಾಗಬೇಕು. ಖಾಲಿ ಕೈಯಲ್ಲಿ ಬನ್ನಿ. ಯಾವುದೇ ವಿಚಾರದಲ್ಲಿ ಖರ್ಚು ಮಾಡಬೇಡಿ. ನಿಮಗಾಗಿ ಸೇರುತ್ತಾ ಇರೋದು. ನಿಮ್ಮನ್ನು ನೋಡಲು ನಾನು ಕಾಯ್ತಾ ಇರ್ತೀನಿ’ ಎಂದು ಶ್ರೀಮುರಳಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:44 am, Sat, 16 December 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ