AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ನೋಡಲು ನಾನು ಕಾಯ್ತಾ ಇರ್ತೀನಿ‘; ಬರ್ತ್​ಡೇ ದಿನ ಅಭಿಮಾನಿಗಳ ಆಮಂತ್ರಿಸಿದ ಶ್ರೀಮುರಳಿ

ಈ ಬಾರಿ ಶ್ರೀಮುರಳಿ ಕುಟುಂಬದಲ್ಲಿ ಒಂದು ಕಹಿ ಘಟನೆ ನಡೆಯಿತು. ಆದಾಗ್ಯೂ ಶ್ರೀಮುರಳಿ ಅವರು ಈ ಬಾರಿ ಬರ್ತ್​​ಡೇನ ಅಭಿಮಾನಿಗಳಿಗೋಸ್ಕರ ಆಚರಿಸಿಕೊಳ್ಳು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ನಿಮ್ಮನ್ನು ನೋಡಲು ನಾನು ಕಾಯ್ತಾ ಇರ್ತೀನಿ‘; ಬರ್ತ್​ಡೇ ದಿನ ಅಭಿಮಾನಿಗಳ ಆಮಂತ್ರಿಸಿದ ಶ್ರೀಮುರಳಿ
ಶ್ರೀಮುರಳಿ
ರಾಜೇಶ್ ದುಗ್ಗುಮನೆ
|

Updated on:Dec 16, 2023 | 11:59 AM

Share

ನಟ ಶ್ರೀಮುರಳಿ (Srimurali) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಡಿಸೆಂಬರ್ 17ರಂದು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ವರ್ಷ ಅವರು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಕುಟುಂಬದಲ್ಲಿ ಸಾಕಷ್ಟು ನೋವುಗಳು ಇದ್ದರೂ ಅದನ್ನು ಬದಿಗಿಟ್ಟು ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಈ ಬಗ್ಗೆ ಅವರು ವಿಡಿಯೋ ಮೆಸೇಜ್ ನೀಡಿದ್ದಾರೆ. ಭೇಟಿ ಮಾಡಲು ಬರುವ ಅಭಿಮಾನಿಗಳ ಬಳಿ ಶ್ರೀಮುರಳಿ ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ.

ಈ ಬಾರಿ ಶ್ರೀಮುರಳಿ ಕುಟುಂಬದಲ್ಲಿ ಒಂದು ಕಹಿ ಘಟನೆ ನಡೆಯಿತು. ಅವರ ಸಹೋದರ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಅಕಾಲಿಕ ಮರಣ ಹೊಂದಿದರು. ಈ ನೋವು ಸದ್ಯಕ್ಕೆ ಮರೆ ಆಗುವಂಥದ್ದಲ್ಲ. ಆದಾಗ್ಯೂ ಶ್ರೀಮುರಳಿ ಅವರು ಈ ಬಾರಿ ಬರ್ತ್​​ಡೇನ ಅಭಿಮಾನಿಗಳಿಗೋಸ್ಕರ ಆಚರಿಸಿಕೊಳ್ಳು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ನನ್ನ ಪ್ರೀತಿಯ ಅಭಿಮಾನಿಗಳೇ ಇಷ್ಟು ವರ್ಷ ನನ್ನ ಬರ್ತ್​ಡೇಗೆ ಸೇರೋಕೆ ಆಗಿರಲಿಲ್ಲ. ಯಾಕೆ ಅನ್ನೋದು ನಿಮಗೆ ಗೊತ್ತು. ಈ ಬಾರಿಯೂ ಸೇರೋ ಪರಿಸ್ಥಿತಿ ಇರಲಿಲ್ಲ. ಆದರೆ, ಅಭಿಮಾನಿಗಳ ಒತ್ತಾಯದ ಮೇರೆಗೆ ನೀವು ಕೊಡೋ ಪ್ರೀತಿಗೆ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದೇನೆ. ಎಲ್ಲವೂ ನಿಮ್ಮ ಆಜ್ಞೆಯಂತೆ ನಡೆಯಬೇಕು. ಡಿಸೆಂಬರ್ 17ರಂದು ವಸಂತ ನಗರದಲ್ಲಿರುವ ಮಿಲ್ಲರ್ಸ್​ ರೋಡ್​ನ ದೇವರಾಜ್ ಅರಸ ಭವನದಲ್ಲಿ ಬೆಳಿಗ್ಗೆ ಹತ್ತೂವರೆ ನಂತರ ಭೇಟಿ ಮಾಡುವೆ’ ಎಂದಿದ್ದಾರೆ ಶ್ರೀಮುರಳಿ.

ಇದನ್ನೂ ಓದಿ: ‘ಕಲಾವಿದರನ್ನು ಕರೆಸಿ ಪ್ರತಿ ದಿನ ಕರ್ನಾಟಕ ಬಂದ್​ ಮಾಡ್ತೀರಾ?’; ಕಾವೇರಿ ಹೋರಾಟದ ಬಗ್ಗೆ ಶ್ರೀಮುರಳಿ ಮಾತು

‘ನನ್ನದೊಂದು ಕೋರಿಕೆ. ಯಾರೂ ಹಾರ ಉಡುಗೊರೆ ತರಬೇಡಿ. ಅದು ನಿಮ್ಮ ದುಡಿಮೆ. ಅದರಿಂದ ನಿಮಗೆ ಒಳ್ಳೆಯದಾಗಬೇಕು. ಖಾಲಿ ಕೈಯಲ್ಲಿ ಬನ್ನಿ. ಯಾವುದೇ ವಿಚಾರದಲ್ಲಿ ಖರ್ಚು ಮಾಡಬೇಡಿ. ನಿಮಗಾಗಿ ಸೇರುತ್ತಾ ಇರೋದು. ನಿಮ್ಮನ್ನು ನೋಡಲು ನಾನು ಕಾಯ್ತಾ ಇರ್ತೀನಿ’ ಎಂದು ಶ್ರೀಮುರಳಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:44 am, Sat, 16 December 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್