AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟ್ರೀಟ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ತಂಡ ಖರೀದಿಸಿದ ನಟ ಸೂರ್ಯ 

ಹೈದರಾಬಾದ್ ತಂಡವನ್ನು ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಖರೀದಿಸಿದ್ದಾರೆ. ಶ್ರೀನಗರ ತಂಡವನ್ನು ಅಕ್ಷಯ್ ಕುಮಾರ್ ಖರೀದಿಸಿದ್ದಾರೆ. ಬೆಂಗಳೂರು ತಂಡವನ್ನು ಹೃತಿಕ್ ರೋಷನ್ ಖರೀದಿಸಿದ್ದಾರೆ.

ಸ್ಟ್ರೀಟ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ತಂಡ ಖರೀದಿಸಿದ ನಟ ಸೂರ್ಯ 
ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Dec 28, 2023 | 1:05 PM

Share

ಕಾಲಿವುಡ್ ಹೀರೋ ಸೂರ್ಯ (Suriya) ನಟನೆ ಮಾತ್ರವಲ್ಲದೆ ಕ್ರೀಡೆ ಬಗ್ಗೆಯೂ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಭಿನ್ನ ಪಾತ್ರ ಹಾಗೂ ಕಥೆ ಆಯ್ಕೆ ಮಾಡಿಕೊಂಡು ಅವರು ಸಿನಿಮಾ ಮಾಡುತ್ತಿದ್ದಾರೆ. ಪ್ರಸ್ತುತ ಸೂರ್ಯ ಲೀಗ್ ಕ್ರಿಕೆಟ್‌ಗೆ ಪ್ರವೇಶಿಸಿದ್ದಾರೆ. ಇಂಡಿಯನ್​ ಸ್ಟ್ರೀಟ್ ಪ್ರೀಮಿಯರ್ ಲೀಗ್‌ನಲ್ಲಿ (ಐಎಸ್​​ಪಿಎಲ್​) ಚೆನ್ನೈ ತಂಡವನ್ನು ಖರೀದಿಸಿದ್ದಾರೆ. ಈ ವಿಷಯವನ್ನು ಸ್ವತಃ ಸೂರ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ ಅನೌನ್ಸ್ ಆಗಿದೆ. ಎಲ್ಲರಿಗೂ ಇದರಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೈದರಾಬಾದ್, ಬೆಂಗಳೂರು, ಮುಂಬೈ, ಶ್ರೀನಗರ ಇತರ ತಂಡಗಳ ಖರೀದಿಯನ್ನು ಸ್ಟಾರ್ ಹೀರೋಗಳು ಮಾಡಿದ್ದಾರೆ. ಇದೀಗ ಸೂರ್ಯ ಚೆನ್ನೈ ತಂಡವನ್ನು ಖರೀದಿಸಿದ್ದಾರೆ. ಈ ಮೂಲಕ ಗಲ್ಲಿ ಕ್ರಿಕೆಟ್ ಬಗ್ಗೆ ಅವರು ತಮಗಿರುವ ಆಸಕ್ತಿ ತೋರಿಸಿದ್ದಾರೆ.

ಅವಕಾಶ ಸಿಗದ ಕ್ರಿಕೆಟಿಗರಿಗೆ ಸ್ಟ್ರೀಟ್ ಕ್ರಿಕೆಟ್ ಲೀಗ್ ಉತ್ತಮ ವೇದಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ. ಸ್ಟ್ರೀಟ್ ಕ್ರಿಕೆಟ್ ಆಡುವ ವ್ಯಕ್ತಿ ನೀವಾಗಿದ್ದರೆ ತಕ್ಷಣ ISPLನಲ್ಲಿ ಅರ್ಜಿ ಸಲ್ಲಿಸಬಹುದು. ಹೈದರಾಬಾದ್ ತಂಡವನ್ನು ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಖರೀದಿಸಿದ್ದಾರೆ. ಶ್ರೀನಗರ ತಂಡವನ್ನು ಅಕ್ಷಯ್ ಕುಮಾರ್ ಖರೀದಿಸಿದ್ದಾರೆ. ಬೆಂಗಳೂರು ತಂಡವನ್ನು ಹೃತಿಕ್ ರೋಷನ್ ಖರೀದಿಸಿದ್ದಾರೆ. ಮುಂಬೈ ತಂಡವನ್ನು ನಟ ಅಮಿತಾಭ್ ಬಚ್ಚನ್ ಖರೀದಿಸಿದ್ದಾರೆ. ಇದೀಗ ಚೆನ್ನೈ ತಂಡದ ಒಡೆತನ ಸೂರ್ಯ ಅವರ ತೆಕ್ಕೆಗೆ ಹೋಗಿದೆ. .

ಇದನ್ನೂ ಓದಿ: ನಡೆಯಲಾಗದ ಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್: ವಿಡಿಯೋ ಇಲ್ಲಿದೆ ನೋಡಿ

ಸೂರ್ಯ ಅವರು ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಇದ್ದಾರೆ. ‘ಕಂಗುವ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಇದು ಅವರ 42ನೇ ಸಿನಿಮಾ. ಈ ಚಿತ್ರದಲ್ಲಿ ಅವರು ಆರು ಪಾತ್ರ ನಿಭಾಯಿಸುತ್ತಿದ್ದಾರೆ. ದಿಶಾ ಪಟಾಣಿ,  ಬಾಡಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ಶಿವ ಅವರು ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. 300 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಮೂಡಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ