AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯ ದಿನಕ್ಕೆ ಎಷ್ಟು ಸಿಗರೇಟ್ ಸೇದುತ್ತಾರೆ? ಅಭಿಮಾನಿಗಳ ಬಳಿ ಓಪನ್ ಆಗಿ ಹೇಳಿಕೊಂಡ ನಟ

ಸೂರ್ಯ ನಟನಾಗಿರುವ ‘ರೆಟ್ರೋ’ ಸಿನಿಮಾದ ಚಿತ್ರೀಕರಣದ ವೇಳೆ, ಅವರು ತಮ್ಮ ಅಭಿಮಾನಿಗಳಿಗೆ ಪರದೆಯ ಮೇಲಿನ ಕೆಟ್ಟ ಅಭ್ಯಾಸಗಳನ್ನು ಅನುಕರಿಸದಂತೆ ಎಚ್ಚರಿಸಿದ್ದಾರೆ. ಚಿತ್ರದಲ್ಲಿ ಸಿಗರೇಟ್ ಸೇದುವ ದೃಶ್ಯಗಳನ್ನು ಅಭಿಮಾನಿಗಳು ಅನುಕರಿಸುತ್ತಿದ್ದಾರೆ. ಹೀಗಾಗಿ ಸಿನಿಮಾಗಳನ್ನು ಆದರ್ಶವಾಗಿ ಪರಿಗಣಿಸದಂತೆ ಕೋರಿದ್ದಾರೆ. ಅವರ ಕಾಳಜಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.

ಸೂರ್ಯ ದಿನಕ್ಕೆ ಎಷ್ಟು ಸಿಗರೇಟ್ ಸೇದುತ್ತಾರೆ? ಅಭಿಮಾನಿಗಳ ಬಳಿ ಓಪನ್ ಆಗಿ ಹೇಳಿಕೊಂಡ ನಟ
ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Apr 30, 2025 | 12:58 PM

Share

ತೆರೆಮೇಲೆ ಹೀರೋಗಳು ಏನೇ ಮಾಡಿದರೂ ಅದನ್ನು ಫ್ಯಾನ್ಸ್ ಅನುಸರಿಸುತ್ತಾರೆ. ಆ್ಯಕ್ಷನ್ ದೃಶ್ಯಗಳನ್ನು ಮಾಡಿದರೆ ಅದೇ ರೀತಿಯಲ್ಲಿ ಫೈಟ್ ಮಾಡೋಕೆ ಫ್ಯಾನ್ಸ್ ಪ್ರಯತ್ನಿಸಿದ್ದು ಇದೆ. ಇನ್ನು, ಸಿಗರೇಟ್ ಸೇದೋದು, ಮದ್ಯ ಸೇವನೆ ಮಾಡುವ ವಿಚಾರದಲ್ಲಿಯೂ ಫ್ಯಾನ್ಸ್ ನೆಚ್ಚಿನ ಹೀರೋ ಸ್ಟೈಲ್​ನ ಅನುಸರಿಸುತ್ತಾರೆ. ಈಗ ಈ ರೀತಿ ಮಾಡೋರಿಗೆ ನಟ ಸೂರ್ಯ (Suriya) ಅವರು ಎಚ್ಚರಿಕೆ ನೀಡಿದ್ದಾರೆ. ‘ಕೆಟ್ಟದನ್ನು ತೆರೆಮೇಲೆ ಮಾಡಿದರೆ ಅದನ್ನು ಪಾಲಿಸಬೇಡಿ’ ಎಂದು ಸೂರ್ಯ ಕೋರಿದ್ದಾರೆ.

ಸೂರ್ಯ ಅವರು ಕಾರ್ತಿಕ್ ಸುಬ್ಬರಾಜು ನಿರ್ದೇಶನದ ‘ರೆಟ್ರೋ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟ್ ತಿರುವನಂತಪುರದಲ್ಲಿ ಭರದಿಂದ ಸಾಗುತ್ತಿದೆ. ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದು, ಕೆಟ್ಟ ಹವ್ಯಾಸ ಫಾಲೋ ಮಾಡಬೇಡಿ ಎಂದಿದ್ದಾರೆ. ಸಿನಿಮಾಗಳನ್ನು ನೋಡಿ ಫ್ಯಾನ್ಸ್ ಕೆಟ್ಟದ್ದು ಕಲಿಯಬಾರದು ಎಂಬುದು ಸೂರ್ಯ ಅವರ ಆಸೆ.

‘ರೆಟ್ರೋ’ ಸಿನಿಮಾದಲ್ಲಿ ಸೂರ್ಯ ಅವರು ಸಿಗರೇಟ್ ಸೇದೋ ದೃಶ್ಯಗಳು ಇವೆ. ಇದನ್ನು ಅನೇಕರು ಕಾಪಿ ಮಾಡಿದ್ದಾರೆ. ಈ ಬಗ್ಗೆ ಸೂರ್ಯಗೆ ಆತಂಕ ಶುರುವಾಗಿದೆ. ‘ನಾನು ಸಿನಿಮಾದಲ್ಲಿ ಮಾತ್ರ ಸಿಗರೇಟ್ ಸೇದುತ್ತೇನೆ. ನಿಜ ಜೀವನದಲ್ಲಿ ಸಿಗರೇಟ್ ಸೇದಬೇಡಿ. ಒಮ್ಮೆ ಇದನ್ನು ಆರಂಭಿಸಿದರೆ ಅದನ್ನು ಬಿಡೋದು ಕಷ್ಟ. ಒಂದು ಬಾರಿ ಸೇದಿದರೆ ಏನಾಗುವುದಿಲ್ಲ ಎಂದು ನೀವು ಅಂದುಕೊಳ್ಳುತ್ತೀರಿ. ಆದರೆ, ಅಲ್ಲಿಗೆ ಅದನ್ನು ನಿಲ್ಲಿಸೋಕೆ ಆಗಲ್ಲ. ನಾನು ಸಿಗರೇಟ್ ಸೇದೋದನ್ನು ಪ್ರಚಾರ ಮಾಡಲ್ಲ’ ಎಂದಿದ್ದಾರೆ ಅವರು. ಈ ಮೂಲಕ ದಿನಕ್ಕೆ ಒಂದೇ ಒಂದು ಸಿಗರೇಟ್ ಸೇದುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ
Image
‘ಒಡಹುಟ್ಟಿದವರು’ ಮಾಡಲು ರಾಜ್​ಕುಮಾರ್​ಗೆ ಎರಡು ಷರತ್ತು ಹಾಕಿದ್ದ ಅಂಬರೀಷ್
Image
ತಮನ್ನಾ ಹಾಟ್ ಅವತಾರಕ್ಕೆ ಬದಲಾಯ್ತು ‘ರೇಡ್ 2’ ಸೆನ್ಸಾರ್ ಪ್ರಮಾಣಪತ್ರ?  
Image
ಸಂಧ್ಯಾ ಥಿಯೇಟರ್ ಕಾಲ್ತುಳಿತ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೀತೇಜ್
Image
‘ಬಾಹುಬಲಿ 2’ ಚಿತ್ರಕ್ಕೆ 8 ವರ್ಷ; ರೀ-ರಿಲೀಸ್ ದಿನಾಂಕ ಘೋಷಣೆ

‘ಈ ಕಾರ್ಯಕ್ರಮವನ್ನು ಗಂಟೆಗಟ್ಟಲೆ ಒಟ್ಟಿಗೆ ನಿಂತು ವೀಕ್ಷಿಸಿದ್ದಕ್ಕಾಗಿ ನಾನು ನಿಮಗೆ ನಮಿಸುತ್ತೇನೆ. ನೀವು ನನ್ನ ಮೇಲೆ ತೋರಿಸಿದ ಹೇರಳವಾದ ಪ್ರೀತಿಗೆ ಧನ್ಯವಾದ ಹೇಳಲು ನನ್ನ ಬಳಿ ಶಬ್ದಗಳಿಲ್ಲ. ಕೇರಳ ಯಾವಾಗಲೂ ದೇವರ ನಾಡು. ಇಲ್ಲಿ ಎಲ್ಲರೂ ಎಲ್ಲಾ ರೀತಿಯ ಕಲೆಗಳನ್ನು ಗೌರವಿಸುತ್ತಾರೆ’ ಎಂದು ಸೂರ್ಯ ಹೆಮ್ಮೆ ಹೊರಹಾಕಿದ್ದಾರೆ.

ಇದನ್ನೂ ಓದಿ: ನಟ ಸೂರ್ಯ ಬಗ್ಗೆ ಕೀಳು ಕಮೆಂಟ್ ನೋಡಿ ಕಿಸಿಕಿಸಿ ನಕ್ಕ ಪತ್ನಿ ಜ್ಯೋತಿಕಾ; ಬುದ್ಧಿ ಹೇಳಿದ ಜನ

ಸೂರ್ಯ ಅವರು ‘ರೆಟ್ರೋ’ ಸಿನಿಮಾದಲ್ಲಿ ಪಾರಿವೇಲ್ ಕಣ್ಣನ್ನ್ ಹೆಸರಿನ ಪಾತ್ರ ಆಡುತ್ತಿದ್ದಾರೆ. ಪೂಜಾ ಹೆಗ್ಡೆ ಈ ಚಿತ್ರಕ್ಕೆ ನಾಯಕಿ. ಈ ಸಿನಿಮಾ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.  ಈ ಚಿತ್ರವನ್ನು ಸೂರ್ಯ ಪತ್ನಿ ಜ್ಯೋತಿಕಾ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಜಯರಾಮ್, ನಾಸರ್, ಪ್ರಕಾಶ್ ರಾಜ್, ಸುಜಿತ್ ಶಂಕರ್ ಮೊದಲಾದವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ