AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಬಗ್ಗೆ ನಾಲಗೆ ಹರಿಬಿಟ್ಟಿದ್ದ ನಟ ರಂಗರಾಜು ನಿಧನ

Actor Rangaraju Passed away: ತಮ್ಮ ಸಿನಿಮಾಗಳಿಗಿಂತಲೂ ಹೆಚ್ಚಾಗಿ ವಿವಾದಗಳಿಂದಲೇ ಹೆಸರಾಗಿದ್ದ ನಟ ವಿಜಯ್ ರಂಗರಾಜು ಅಲಿಯಾಸ್ ರಾಜ್​ಕುಮಾರ್ ನಿಧನ ಹೊಂದಿದ್ದಾರೆ. 2020 ರಲ್ಲಿ ಕನ್ನಡ ಚಿತ್ರರಂಗದ ಮೇರುನಟ ವಿಷ್ಣುವರ್ಧನ್ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿ ಈ ವ್ಯಕ್ತಿ ಕುಖ್ಯಾತಿ ಗಳಿಸಿದ್ದರು.

ವಿಷ್ಣುವರ್ಧನ್ ಬಗ್ಗೆ ನಾಲಗೆ ಹರಿಬಿಟ್ಟಿದ್ದ ನಟ ರಂಗರಾಜು ನಿಧನ
Vijay Rangaraju
ಮಂಜುನಾಥ ಸಿ.
|

Updated on:Jan 20, 2025 | 4:24 PM

Share

ಕನ್ನಡ ಚಿತ್ರರಂಗದ ಮೇರು ನಟ ವಿಷ್ಣುವರ್ಧನ್ ಬಗ್ಗೆ ನಾಲಗೆ ಹರಿಬಿಟ್ಟು ಕನ್ನಡಿಗರಿಂದ ತೀವ್ರ ಆಕ್ರೋಶ ಎದುರಿಸಿದ್ದ ನಟ ವಿಜಯ್ ರಂಗರಾಜು ಇಂದು (ಜನವರಿ 20) ರಂದು ಚೆನ್ನೈನಲ್ಲಿ ನಿಧನ ಹೊಂದಿದ್ದಾರೆ. ತೆಲುಗು, ಮಲಯಾಳಂ, ತಮಿಳು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ರಂಗರಾಜು, ತಮ್ಮ ವಿಲನ್ ಪಾತ್ರಗಳಿಂದ ಜನಪ್ರಿಯರಾಗಿದ್ದರು. ನಂದಮೂರಿ ಬಾಲಕೃಷ್ಣ ನಟನೆಯ ‘ಭೈರವ ದ್ವೀಪಂ’ ಸಿನಿಮಾದಲ್ಲಿ ನಿರ್ವಹಿಸಿದ ವಿಲನ್ ಪಾತ್ರದಿಂದ ಅವರಿಗೆ ಹೆಚ್ಚು ಹೆಸರು ಬಂದಿತ್ತು.

ರಂಗರಾಜು ಅವರಿಗೆ ಕೆಲ ವಾರಗಳ ಹಿಂದೆ ಚಿತ್ರೀಕರಣದ ಸಂದರ್ಭದಲ್ಲಿ ಗಾಯವಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಚೆನ್ನೈಗೆ ತರಲಾಗಿತ್ತು. ಚಿಕಿತ್ಸೆ ನಡೆದು ವಿಶ್ರಾಂತಿಯಲ್ಲಿದ್ದ ರಂಗರಾಜು ಇಂದು ಚೆನ್ನೈನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ಅವರಿಗೆ ಸುಮಾರು 65 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರಿಯರನ್ನು ರಂಗರಾಜು ಅಗಲಿದ್ದಾರೆ.

ರಂಗರಾಜು ಕನ್ನಡ ಸಿನಿಮಾ ಪ್ರೇಮಿಗಳ ತೀವ್ರ ಆಕ್ರೋಶವನ್ನು ಎದುರಿಸಿದ್ದರು. 2020 ರಲ್ಲಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿದ್ದ ರಂಗರಾಜು, ಕನ್ನಡ ಚಿತ್ರರಂಗದ ಮೇರು ನಟ ವಿಷ್ಣುವರ್ಧನ್​ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದ. ವಿಷ್ಣುವರ್ಧನ್, ನಟಿಯೊಬ್ಬಾಕೆಯನ್ನು ಛೇಡಿಸಿದ್ದರು ಆಗ ನಾನು ಆತನ ಕೊರಳುಪಟ್ಟಿ ಹಿಡಿದಿದ್ದೆ ಎಂದೆಲ್ಲ ಬಾಯಿಗೆ ಬಂದಂತೆ ಸುಳ್ಳು ಹೇಳಿದ್ದ. ಆ ಬಳಿಕ ಕನ್ನಡ ಸಿನಿಮಾ ಪ್ರೇಮಿಗಳು ಆತನ ಮನೆಗೆ ಹುಡುಕಿಕೊಂಡು ಹೋಗಿ ‘ಬುದ್ಧಿಕಲಿಸಿ’ ಬಂದಿದ್ದರು. ಘಟನೆಯ ಬಳಿಕ ರಂಗರಾಜು, ಕಣ್ಣೀರು ಹಾಕುತ್ತಾ ಕ್ಷಮೆ ಸಹ ಕೇಳಿದ್ದರು.

ಇದನ್ನೂ ಓದಿ:ವಿಷ್ಣುವರ್ಧನ್ ನೆನಪಿಗೆ ‘ಸಿಂಹದ ಹಾದಿʼ ಕಿರುಚಿತ್ರ; ಇದು ಅಭಿಮಾನಿಗಳ ಕಾಣಿಕೆ

ವಿಲನ್ ಪಾತ್ರಗಳಲ್ಲಿ ಹೆಚ್ಚಾಗಿ ನಟಿಸಿದ್ದ ವಿಜಯ್ ರಂಗರಾಜು ಹೆಸರು ಹಲವು ವಿವಾದಗಳಲ್ಲಿ ಕೇಳಿ ಬಂದಿತ್ತು. ವಿಜಯ್ ರಂಗರಾಜು ಮೂಲ ಹೆಸರು ರಾಜ್‌ಕುಮಾರ್. ಈತ ಹುಟ್ಟಿದ್ದು ಮಹಾರಾಷ್ಟ್ರ ಪುಣೆಯಲ್ಲಿ ಆದರೆ ಬೆಳೆದಿದ್ದಲ್ಲಾ ಆಂಧ್ರದ ಗುಂತಕಲ್‌. ಉತ್ತಮ ಮೈಕಟ್ಟು, ವಿಕ್ಷಿಪ್ತ ಮುಖಚಹರೆ, ದೊಡ್ಡ ಮೀಸೆ ಹೊಂದಿದ್ದ ವಿಜಯ್ ರಂಗರಾಜು, ಮೊದಲಿಗೆ 1976 ರ ಸೀತಾಕಲ್ಯಾಣಂ ಸಿನಿಮಾದಲ್ಲಿ ನಟಿಸಿದ್ದರು, ಜೊತೆಗೆ ಕೆಲವು ಸಿನಿಮಾಗಳಲ್ಲಿ ಫೈಟರ್ ಸಹ ಆಗಿದ್ದರು. ಆ ನಂತರ ಮಲಾಯಳಂ ನ ಕೆಲವು ಸಿನಿಮಾಗಳು, ನಂತರ ಸಿಂಗೀತಂ ಶ್ರೀನಿವಾಸ್ ನಿರ್ದೇಶಿಸಿದ್ದ ‘ಭೈರವದೀಪಂ’ ಸಿನಿಮಾದಲ್ಲಿ ಭೈರವನ ಪಾತ್ರ ಇವರಿಗೆ ಗುರುತು ದೊರಕಿಸಿಕೊಟ್ಟಿತು.

ವಿಷ್ಣುವರ್ಧನ್ ಬಗ್ಗೆ ಮಾತ್ರವೇ ಅಲ್ಲದೆ ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಮೋಹನ್​ಲಾಲ್, ಸೂಪರ್ ಸ್ಟಾರ್ ರಜನೀಕಾಂತ್ ಅವರುಗಳ ಬಗ್ಗೆಯೂ ಸಂದರ್ಶನಗಳಲ್ಲಿ ಬಾಯಿಗೆ ಬಂದಂತೆ ವಿಜಯ್ ರಂಗರಾಜು ಮಾತನಾಡಿದ್ದರು. ರಜನೀಕಾಂತ್​, ತಮಗೆ ಕುಡಿಯುವುದು ಹೇಳಿಕೊಟ್ಟರು, ಕುಡಿದು ಒಮ್ಮೆ ಅವರ ಮೇಲೆ ಜಗಳ ಮಾಡಿ ಬಾಯಿ ಮುಚ್ಚಿಸಿದ್ದೆ ಎಂದೆಲ್ಲ ಹೇಳಿಕೊಂಡಿದ್ದರು. ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್​ಲಾಲ್, ನನ್ನ ಬಗ್ಗೆ ಅವರ ಡೈರಿಯಲ್ಲಿ ಬರೆದುಕೊಂಡಿದ್ದರು. ನನ್ನನ್ನು ತುಳಿಯಬೇಕು ಎಂಬುದು ಅವರ ಗುರಿ ಆಗಿತ್ತು ಆದರೆ ಅದು ಅವರಿಂದ ಸಾಧ್ಯವಾಗಲಿಲ್ಲ ಎಂದು ಹೇಳಿದ್ದರು ವಿಜಯ್ ರಂಗರಾಜು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Mon, 20 January 25

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್