AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರಿನ ಹಲ್ಲೆ ಘಟನೆಯನ್ನು ಅನವಶ್ಯಕ ದೊಡ್ಡದು ಮಾಡಲಾಯ್ತು’: ನಟ ವಿಜಯ್​ ಸೇತುಪತಿ

Vijay Sethupathi: ವಿಜಯ್​ ಸೇತುಪತಿ ಸ್ಟಾರ್​ ಕಲಾವಿದನಾಗಿದ್ದರೂ ಪ್ರಯಾಣ ಮಾಡುವಾಗ ಅಂಗರಕ್ಷಕರನ್ನು ಜೊತೆಗೆ ಇಟ್ಟುಕೊಳ್ಳುವುದಿಲ್ಲ. ಬೆಂಗಳೂರಿನಲ್ಲಿ ನಡೆದ ಹಲ್ಲೆ ಯತ್ನದ ಬಗ್ಗೆ ಈಗ ಅವರು ಪ್ರತಿಕ್ರಿಯಿಸಿದ್ದಾರೆ.

‘ಬೆಂಗಳೂರಿನ ಹಲ್ಲೆ ಘಟನೆಯನ್ನು ಅನವಶ್ಯಕ ದೊಡ್ಡದು ಮಾಡಲಾಯ್ತು’: ನಟ ವಿಜಯ್​ ಸೇತುಪತಿ
ವಿಜಯ್​ ಸೇತುಪತಿ
TV9 Web
| Edited By: |

Updated on: Nov 07, 2021 | 3:23 PM

Share

ನಟ ವಿಜಯ್​ ಸೇತುಪತಿ ಅವರಿಗೆ ದೇಶದೆಲ್ಲೆಡೆ ಅಭಿಮಾನಿಗಳಿದ್ದಾರೆ. ಅವರು ಎಲ್ಲೇ ಕಾಣಿಸಿದರೂ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬೀಳುತ್ತಾರೆ. ಆದರೆ ಇತ್ತೀಚೆಗೆ ವ್ಯಕ್ತಿಯೊಬ್ಬ ವಿಜಯ್​ ಸೇತುಪತಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ಆ ಸುದ್ದಿ ಕೇಳಿ ವಿಜಯ್​ ಸೇತುಪತಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಹಲ್ಲೆಯ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಆ ಒಟ್ಟಾರೆ ಘಟನೆಯ ಬಗ್ಗೆ ವಿಜಯ್​ ಸೇತುಪತಿ ಈಗ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯ್​ ಸೇತುಪತಿ ಪ್ರಕಾರ ಇದೊಂದು ಸಾಮಾನ್ಯ ಘಟನೆ. ಆದರೆ ಅನಗತ್ಯವಾಗಿ ದೊಡ್ಡದು ಮಾಡಲಾಗಿದೆ. ‘ನಡೆದಿದ್ದು ತುಂಬಾ ಸಣ್ಣ ವಿಚಾರ. ಆದರೆ ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ಆ ಘಟನೆಯನ್ನು ತನ್ನ ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದರಿಂದ ಅದು ದೊಡ್ಡದಾಯ್ತು. ಮೊಬೈಲ್​ ಫೋನ್​ ಇರುವ ಎಲ್ಲರೂ ಈಗ ಫಿಲ್ಮ್​ ಮೇಕರ್​ ಆಗಿಬಿಟ್ಟಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿ ಕುಡಿದಿದ್ದ. ಪ್ರಜ್ಞೆ ಇಲ್ಲದ ಇಂಥ ವ್ಯಕ್ತಿಗಳು ಇದೇ ರೀತಿ ವರ್ತಿಸುತ್ತಾರೆ. ಆ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಅಲ್ಲಿಗೆ ಎಲ್ಲವೂ ಮುಕ್ತಾಯವಾಯಿತು’ ಎಂದು ವಿಜಯ್​ ಸೇತುಪತಿ ಹೇಳಿದ್ದಾರೆ.

‘ನಮ್ಮ ಮೇಲೆ ಹಲ್ಲೆಗೆ ಪ್ರಯತ್ನಿಸಿದ ವ್ಯಕ್ತಿ ನನ್ನ ಅಭಿಮಾನಿ ಅಲ್ಲ. ವಿಮಾನದಲ್ಲಿ ಆತ ಸಹ-ಪ್ರಯಾಣಿಕ ಆಗಿದ್ದ. ಪ್ರಯಾಣದ ವೇಳೆ ನಮ್ಮೊಂದಿಗೆ ವಾಗ್ವಾದ ಮಾಡುತ್ತಲೇ ಇದ್ದ. ವಿಮಾನ ಲ್ಯಾಂಡ್​ ಆದ ಬಳಿಕವೂ ವಾಗ್ವಾದ ಮುಂದುವರಿಸಿದ್ದ. ಇಂದು ಎಲ್ಲರೂ ಮಾಸ್ಕ್​ ಧರಿಸುವುದರಿಂದ ಯಾರು ಮದ್ಯಪಾನ ಮಾಡಿದ್ದಾರೆ ಎಂಬುದು ಕೂಡ ಗೊತ್ತಾಗುವುದಿಲ್ಲ’ ಎಂದಿದ್ದಾರೆ ವಿಜಯ್​ ಸೇತುಪತಿ.

ಬಹುಭಾಷೆಯಲ್ಲಿ ಮಿಂಚುತ್ತಿರುವ ವಿಜಯ್​ ಸೇತುಪತಿ ಸ್ಟಾರ್​ ಕಲಾವಿದ. ಆದರೆ ಅವರು ಪ್ರಯಾಣ ಮಾಡುವಾಗ ಅಂಗರಕ್ಷಕರನ್ನು ಜೊತೆಗೆ ಇಟ್ಟುಕೊಳ್ಳುವುದಿಲ್ಲವಂತೆ. ಬೆಂಗಳೂರಿನಲ್ಲಿ ಹಲ್ಲೆ ಯತ್ನ ನಡೆದಾಗ ವಿಜಯ್​ ಸೇತುಪತಿ ಜೊತೆ ಅವರ ಸ್ನೇಹಿತ ಕಮ್​ ಮ್ಯಾನೇಜರ್​ ಇದ್ದರು. ಈ ಒಂದು ಘಟನೆಯಿಂದ ಸೇತುಪತಿ ನಿಲುವು ಬದಲಾಗಿಲ್ಲ. ಈಗಲೂ ಅವರು ಯಾವುದೇ ಬಾಡಿಗಾರ್ಡ್​ ಇಟ್ಟುಕೊಂಡು ಪ್ರಯಾಣ ಮಾಡಲು ಇಷ್ಟಪಡುವುದಿಲ್ಲ. ಜನರ ಜೊತೆ ಬೆರೆಯಬೇಕು, ಮಾತನಾಡಬೇಕು ಎಂಬ ಮುಕ್ತ ಮನಸ್ಥಿತಿಯನ್ನು ಅವರು ಹೊಂದಿದ್ದಾರೆ.

ಹತ್ತಾರು ಸಿನಿಮಾ ಆಫರ್​ಗಳನ್ನು ಕೈಯಲ್ಲಿ ಇಟ್ಟುಕೊಂಡು ವಿಜಯ್​ ಸೇತುಪತಿ ಬ್ಯುಸಿ ಆಗಿದ್ದಾರೆ. ವೆಬ್​ ಸಿರೀಸ್​ ಲೋಕದಲ್ಲೂ ಅವರಿಗೆ ಭರ್ಜರಿ ಬೇಡಿಕೆ ಇದೆ. ಹೀರೋ, ವಿಲನ್​, ಪೋಷಕ ಪಾತ್ರ ಎಂಬ ಯಾವ ಭೇದವೂ ಇಲ್ಲದೇ ಅವರು ಒಳ್ಳೆಯ ಆಫರ್​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

Puneeth Rajkumar: ಪುನೀತ್​ ಸಮಾಧಿಗೆ ನಟ ಸೂರ್ಯ ಭೇಟಿ; ಅಪ್ಪು ನೆನೆದು ಕಂಬನಿ ಮಿಡಿದ ಕಾಲಿವುಡ್​ ಸ್ಟಾರ್​ ಹೀರೋ

ಪುನೀತ್​ ರಾಜ್​ಕುಮಾರ್​ಗೆ ನಮನ ಸಲ್ಲಿಸಿದ ರಾಮ್​ ಚರಣ್, ವಿಜಯ್​ ಸೇತುಪತಿ​

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ