AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಟಿಂಗ್​ ದೃಶ್ಯದ ಶೂಟಿಂಗ್​ ವೇಳೆ ವಿಶಾಲ್​ಗೆ ಗಾಯ; ಘಟನೆ ಬಗ್ಗೆ ವಿಡಿಯೋ ಸಮೇತ ವಿವರಿಸಿದ​ ನಟ

ನಿರ್ಮಾಣ ಹಂತದಲ್ಲಿ ಇರುವ ಕಟ್ಟಡವೊಂದರಲ್ಲಿ ಈ ದೃಶ್ಯದ ಶೂಟಿಂಗ್​ ನಡೆಯುತ್ತಿತ್ತು. ನೂರಾರು ಸಹ-ಕಲಾವಿದರು ಮತ್ತು ತಂತ್ರಜ್ಞರು ಕೆಲಸ ಮಾಡುತ್ತಿದ್ದರು.

ಫೈಟಿಂಗ್​ ದೃಶ್ಯದ ಶೂಟಿಂಗ್​ ವೇಳೆ ವಿಶಾಲ್​ಗೆ ಗಾಯ; ಘಟನೆ ಬಗ್ಗೆ ವಿಡಿಯೋ ಸಮೇತ ವಿವರಿಸಿದ​ ನಟ
ಚಿತ್ರೀಕರಣದ ವೇಳೆ ಗಾಯಗೊಂಡ ವಿಶಾಲ್​
TV9 Web
| Edited By: |

Updated on:Feb 12, 2022 | 12:22 PM

Share

ಕಾಲಿವುಡ್​ನ (Kollywood) ಖ್ಯಾತ ನಟ ವಿಶಾಲ್​ (Actor Vishal) ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಅವರ ಅಭಿಮಾನಿಗಳಿಗೆ ಒಂದು ಬ್ಯಾಡ್​ ನ್ಯೂಸ್​ ಕೇಳಿಬಂದಿದೆ. ‘ಲಾಠಿ’ ಸಿನಿಮಾದ ಶೂಟಿಂಗ್​ ವೇಳೆ ವಿಶಾಲ್​ ಗಾಯ ಮಾಡಿಕೊಂಡಿದ್ದಾರೆ. ಈ ವಿಷಯ ಲೀಕ್​ ಆಗುತ್ತಿದ್ದಂತೆಯೇ ಅವರ ಫ್ಯಾನ್ಸ್​ ಆತಂಕಕ್ಕೆ ಒಳಗಾದರು. ಹೈದರಾಬಾದ್​ನಲ್ಲಿ ‘ಲಾಠಿ’ ಸಿನಿಮಾದ (Laththi Movie) ಶೂಟಿಂಗ್​ ನಡೆಯುತ್ತಿತ್ತು. ಸಾಹಸ ದೃಶ್ಯಗಳನ್ನು ಚಿತ್ರೀಕರಿಸುತ್ತಿದ್ದ ವೇಳೆ ವಿಶಾಲ್​​ ಅವರಿಗೆ ಗಾಯಗಳಾಗಿವೆ. ಕೂಡಲೇ ಅವರು ಆಸ್ಪತ್ರೆಗೆ ತೆರಳಿದರು. ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ಶೂಟಿಂಗ್​ ಸಮಯದಲ್ಲಿ ದುರ್ಘಟನೆ ನಡೆದ ಅನೇಕ ಉದಾಹರಣೆಗಳಿವೆ. ಹಾಗಾಗಿ ಇಂಥ ವಿಷಯ ಕೇಳಿಬಂದಾಗ ಅಭಿಮಾನಿಗಳಿಗೆ ಸಹಜವಾಗಿಯೇ ಆತಂಕ ಆಗುತ್ತದೆ. ಒಟ್ಟಾರೆ ಘಟನೆ ಹೇಗೆ ನಡೆಯಿತು ಎಂಬುದನ್ನು ವಿಶಾಲ್​ ಅವರು ವಿಡಿಯೋ ಸಮೇತ ವಿವರಿಸಿದ್ದಾರೆ. ಆ ಮೂಲಕ ಅಭಿಮಾನಿಗಳ ಆತಂಕವನ್ನು ದೂರ ಮಾಡಲು ಅವರು ಪ್ರಯತ್ನಿಸಿದ್ದಾರೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದು ಶೀಘ್ರದಲ್ಲೇ ಚಿತ್ರೀಕರಣಕ್ಕೆ ಮರಳುವುದಾಗಿ ತಿಳಿಸಿದ್ದಾರೆ.

ವಿಶಾಲ್​ ಅವರ ಸಿನಿಮಾಗಳಲ್ಲಿ ಆ್ಯಕ್ಷನ್​ ದೃಶ್ಯಗಳು ಭರ್ಜರಿಯಾಗಿ ಇರುತ್ತವೆ. ಈ ಬಾರಿ ಅವರ ‘ಲಾಠಿ’ ಚಿತ್ರಕ್ಕೆ ಪೀಟರ್​ ಹೇನ್​ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ‘ಈ ಸಾಹಸ ದೃಶ್ಯವನ್ನು ಚಿತ್ರೀಕರಿಸುವಾಗ ಹಲವು ಹೇರ್​ಲೈನ್​ ಫ್ರ್ಯಾಕ್ಚರ್​ ಆಗಿದೆ. ವಿಶ್ರಾಂತಿ ಪಡೆಯಲು ಕೇರಳಕ್ಕೆ ತೆರಳಿದ್ದೇನೆ. ಕೊನೇ ಹಂತದ ಶೂಟಿಂಗ್​ಗೆ ಮಾರ್ಚ್​ ಮೊದಲ ವಾರದಲ್ಲಿ ಬಂದು ಸೇರಿಕೊಳ್ಳುತ್ತೇನೆ’ ಎಂದು ವಿಶಾಲ್​ ಟ್ವೀಟ್​ ಮಾಡಿದ್ದಾರೆ.

ನಿರ್ಮಾಣ ಹಂತದಲ್ಲಿ ಇರುವ ಕಟ್ಟಡವೊಂದರಲ್ಲಿ ಈ ದೃಶ್ಯದ ಶೂಟಿಂಗ್​ ನಡೆಯುತ್ತಿತ್ತು. ನೂರಾರು ಸಹ-ಕಲಾವಿದರು ಮತ್ತು ತಂತ್ರಜ್ಞರು ಕೆಲಸ ಮಾಡುತ್ತಿದ್ದರು. ಮಗುವನ್ನು ಎತ್ತಿಕೊಂಡು ಆಳವಾದ ಜಾಗಕ್ಕೆ ಧುಮುಕುವ ಸೀನ್​ನಲ್ಲಿ ವಿಶಾಲ್​ ನಟಿಸುತ್ತಿದ್ದರು. ಈ ವೇಳೆ ಅವರಿಗೆ ಗಾಯಗಳಾದವು. ಈ ಸಿನಿಮಾದಲ್ಲಿ ಅವರು ಪೊಲೀಸ್​ ಅಧಿಕಾರಿ ಪಾತ್ರ ಮಾಡಿದ್ದಾರೆ. ಈ ಮೊದಲು ಕೂಡ ಬೇರೆ ಸಿನಿಮಾಗಳ ಸಾಹಸ ದೃಶ್ಯಗಳ ಶೂಟಿಂಗ್​ ಸಂದರ್ಭದಲ್ಲಿ ವಿಶಾಲ್​ ಗಾಯಗೊಂಡಿದ್ದುಂಟು.

‘ಲಾಠಿ’ ಚಿತ್ರಕ್ಕೆ ಎ. ವಿನೋದ್​ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ನಾಯಕಿಯಾಗಿ ಸುನೈನಾ ನಟಿಸುತ್ತಿದ್ದಾರೆ. ಕನ್ನಡ, ತಮಿಳು, ತೆಲುಗು ಸೇರಿ ಬಹುಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

ಕನ್ನಡ ಚಿತ್ರರಂಗದ ಜೊತೆ ವಿಶಾಲ್​ ಅವರು ಒಡನಾಟ ಹೊಂದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ‘ಪುನೀತ ನಮನ’ ಕಾರ್ಯಕ್ರಮದಲ್ಲೂ ವಿಶಾಲ್​ ಭಾಗಿ ಆಗಿದ್ದರು. ಅಪ್ಪು ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರಿಗೆ ಅವರು ಸಾಂತ್ವನ ಹೇಳಿದ್ದರು. ಪುನೀತ್​ ನೋಡಿಕೊಳ್ಳುತ್ತಿದ್ದ ಬಡ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಇನ್ಮುಂದೆ ತಾವು ಹೊತ್ತುಕೊಳ್ಳಲು ಸಿದ್ಧ ಎಂದು ವಿಶಾಲ್​ ಹೇಳಿದ್ದರು.

ಇದನ್ನೂ ಓದಿ:

ಶಕ್ತಿಧಾಮ ನೋಡಿಕೊಳ್ಳುವ ಬಗ್ಗೆ ಅಶ್ವಿನಿ​ ಜತೆ ವಿಶಾಲ್​ ಚರ್ಚೆ; ಪುನೀತ್​​ ಕುಟುಂಬದಿಂದ ಅನುಮತಿ ಸಿಗೋದು ಯಾವಾಗ?

Photos: ಶಿವಣ್ಣನ ಜತೆ ವಿಶಾಲ್​ ಮಾತುಕತೆ; ಪುನೀತ್​ ಫೋಟೋಗೆ ಹಾರ ಹಾಕಿ ನಮಿಸಿದ ತಮಿಳು ನಟ

Published On - 12:13 pm, Sat, 12 February 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ