AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಟಿಂಗ್​ ದೃಶ್ಯದ ಶೂಟಿಂಗ್​ ವೇಳೆ ವಿಶಾಲ್​ಗೆ ಗಾಯ; ಘಟನೆ ಬಗ್ಗೆ ವಿಡಿಯೋ ಸಮೇತ ವಿವರಿಸಿದ​ ನಟ

ನಿರ್ಮಾಣ ಹಂತದಲ್ಲಿ ಇರುವ ಕಟ್ಟಡವೊಂದರಲ್ಲಿ ಈ ದೃಶ್ಯದ ಶೂಟಿಂಗ್​ ನಡೆಯುತ್ತಿತ್ತು. ನೂರಾರು ಸಹ-ಕಲಾವಿದರು ಮತ್ತು ತಂತ್ರಜ್ಞರು ಕೆಲಸ ಮಾಡುತ್ತಿದ್ದರು.

ಫೈಟಿಂಗ್​ ದೃಶ್ಯದ ಶೂಟಿಂಗ್​ ವೇಳೆ ವಿಶಾಲ್​ಗೆ ಗಾಯ; ಘಟನೆ ಬಗ್ಗೆ ವಿಡಿಯೋ ಸಮೇತ ವಿವರಿಸಿದ​ ನಟ
ಚಿತ್ರೀಕರಣದ ವೇಳೆ ಗಾಯಗೊಂಡ ವಿಶಾಲ್​
TV9 Web
| Edited By: |

Updated on:Feb 12, 2022 | 12:22 PM

Share

ಕಾಲಿವುಡ್​ನ (Kollywood) ಖ್ಯಾತ ನಟ ವಿಶಾಲ್​ (Actor Vishal) ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಅವರ ಅಭಿಮಾನಿಗಳಿಗೆ ಒಂದು ಬ್ಯಾಡ್​ ನ್ಯೂಸ್​ ಕೇಳಿಬಂದಿದೆ. ‘ಲಾಠಿ’ ಸಿನಿಮಾದ ಶೂಟಿಂಗ್​ ವೇಳೆ ವಿಶಾಲ್​ ಗಾಯ ಮಾಡಿಕೊಂಡಿದ್ದಾರೆ. ಈ ವಿಷಯ ಲೀಕ್​ ಆಗುತ್ತಿದ್ದಂತೆಯೇ ಅವರ ಫ್ಯಾನ್ಸ್​ ಆತಂಕಕ್ಕೆ ಒಳಗಾದರು. ಹೈದರಾಬಾದ್​ನಲ್ಲಿ ‘ಲಾಠಿ’ ಸಿನಿಮಾದ (Laththi Movie) ಶೂಟಿಂಗ್​ ನಡೆಯುತ್ತಿತ್ತು. ಸಾಹಸ ದೃಶ್ಯಗಳನ್ನು ಚಿತ್ರೀಕರಿಸುತ್ತಿದ್ದ ವೇಳೆ ವಿಶಾಲ್​​ ಅವರಿಗೆ ಗಾಯಗಳಾಗಿವೆ. ಕೂಡಲೇ ಅವರು ಆಸ್ಪತ್ರೆಗೆ ತೆರಳಿದರು. ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ಶೂಟಿಂಗ್​ ಸಮಯದಲ್ಲಿ ದುರ್ಘಟನೆ ನಡೆದ ಅನೇಕ ಉದಾಹರಣೆಗಳಿವೆ. ಹಾಗಾಗಿ ಇಂಥ ವಿಷಯ ಕೇಳಿಬಂದಾಗ ಅಭಿಮಾನಿಗಳಿಗೆ ಸಹಜವಾಗಿಯೇ ಆತಂಕ ಆಗುತ್ತದೆ. ಒಟ್ಟಾರೆ ಘಟನೆ ಹೇಗೆ ನಡೆಯಿತು ಎಂಬುದನ್ನು ವಿಶಾಲ್​ ಅವರು ವಿಡಿಯೋ ಸಮೇತ ವಿವರಿಸಿದ್ದಾರೆ. ಆ ಮೂಲಕ ಅಭಿಮಾನಿಗಳ ಆತಂಕವನ್ನು ದೂರ ಮಾಡಲು ಅವರು ಪ್ರಯತ್ನಿಸಿದ್ದಾರೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದು ಶೀಘ್ರದಲ್ಲೇ ಚಿತ್ರೀಕರಣಕ್ಕೆ ಮರಳುವುದಾಗಿ ತಿಳಿಸಿದ್ದಾರೆ.

ವಿಶಾಲ್​ ಅವರ ಸಿನಿಮಾಗಳಲ್ಲಿ ಆ್ಯಕ್ಷನ್​ ದೃಶ್ಯಗಳು ಭರ್ಜರಿಯಾಗಿ ಇರುತ್ತವೆ. ಈ ಬಾರಿ ಅವರ ‘ಲಾಠಿ’ ಚಿತ್ರಕ್ಕೆ ಪೀಟರ್​ ಹೇನ್​ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ‘ಈ ಸಾಹಸ ದೃಶ್ಯವನ್ನು ಚಿತ್ರೀಕರಿಸುವಾಗ ಹಲವು ಹೇರ್​ಲೈನ್​ ಫ್ರ್ಯಾಕ್ಚರ್​ ಆಗಿದೆ. ವಿಶ್ರಾಂತಿ ಪಡೆಯಲು ಕೇರಳಕ್ಕೆ ತೆರಳಿದ್ದೇನೆ. ಕೊನೇ ಹಂತದ ಶೂಟಿಂಗ್​ಗೆ ಮಾರ್ಚ್​ ಮೊದಲ ವಾರದಲ್ಲಿ ಬಂದು ಸೇರಿಕೊಳ್ಳುತ್ತೇನೆ’ ಎಂದು ವಿಶಾಲ್​ ಟ್ವೀಟ್​ ಮಾಡಿದ್ದಾರೆ.

ನಿರ್ಮಾಣ ಹಂತದಲ್ಲಿ ಇರುವ ಕಟ್ಟಡವೊಂದರಲ್ಲಿ ಈ ದೃಶ್ಯದ ಶೂಟಿಂಗ್​ ನಡೆಯುತ್ತಿತ್ತು. ನೂರಾರು ಸಹ-ಕಲಾವಿದರು ಮತ್ತು ತಂತ್ರಜ್ಞರು ಕೆಲಸ ಮಾಡುತ್ತಿದ್ದರು. ಮಗುವನ್ನು ಎತ್ತಿಕೊಂಡು ಆಳವಾದ ಜಾಗಕ್ಕೆ ಧುಮುಕುವ ಸೀನ್​ನಲ್ಲಿ ವಿಶಾಲ್​ ನಟಿಸುತ್ತಿದ್ದರು. ಈ ವೇಳೆ ಅವರಿಗೆ ಗಾಯಗಳಾದವು. ಈ ಸಿನಿಮಾದಲ್ಲಿ ಅವರು ಪೊಲೀಸ್​ ಅಧಿಕಾರಿ ಪಾತ್ರ ಮಾಡಿದ್ದಾರೆ. ಈ ಮೊದಲು ಕೂಡ ಬೇರೆ ಸಿನಿಮಾಗಳ ಸಾಹಸ ದೃಶ್ಯಗಳ ಶೂಟಿಂಗ್​ ಸಂದರ್ಭದಲ್ಲಿ ವಿಶಾಲ್​ ಗಾಯಗೊಂಡಿದ್ದುಂಟು.

‘ಲಾಠಿ’ ಚಿತ್ರಕ್ಕೆ ಎ. ವಿನೋದ್​ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ನಾಯಕಿಯಾಗಿ ಸುನೈನಾ ನಟಿಸುತ್ತಿದ್ದಾರೆ. ಕನ್ನಡ, ತಮಿಳು, ತೆಲುಗು ಸೇರಿ ಬಹುಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

ಕನ್ನಡ ಚಿತ್ರರಂಗದ ಜೊತೆ ವಿಶಾಲ್​ ಅವರು ಒಡನಾಟ ಹೊಂದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ‘ಪುನೀತ ನಮನ’ ಕಾರ್ಯಕ್ರಮದಲ್ಲೂ ವಿಶಾಲ್​ ಭಾಗಿ ಆಗಿದ್ದರು. ಅಪ್ಪು ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರಿಗೆ ಅವರು ಸಾಂತ್ವನ ಹೇಳಿದ್ದರು. ಪುನೀತ್​ ನೋಡಿಕೊಳ್ಳುತ್ತಿದ್ದ ಬಡ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಇನ್ಮುಂದೆ ತಾವು ಹೊತ್ತುಕೊಳ್ಳಲು ಸಿದ್ಧ ಎಂದು ವಿಶಾಲ್​ ಹೇಳಿದ್ದರು.

ಇದನ್ನೂ ಓದಿ:

ಶಕ್ತಿಧಾಮ ನೋಡಿಕೊಳ್ಳುವ ಬಗ್ಗೆ ಅಶ್ವಿನಿ​ ಜತೆ ವಿಶಾಲ್​ ಚರ್ಚೆ; ಪುನೀತ್​​ ಕುಟುಂಬದಿಂದ ಅನುಮತಿ ಸಿಗೋದು ಯಾವಾಗ?

Photos: ಶಿವಣ್ಣನ ಜತೆ ವಿಶಾಲ್​ ಮಾತುಕತೆ; ಪುನೀತ್​ ಫೋಟೋಗೆ ಹಾರ ಹಾಕಿ ನಮಿಸಿದ ತಮಿಳು ನಟ

Published On - 12:13 pm, Sat, 12 February 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ