AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಹೆಸರು ಬಳಸಿಕೊಳ್ಳುತ್ತೇನೆ’: ಸಿಎಂ ವಿಜಯ್​ಗೆ ನೇರವಾಗಿ ಹೇಳಿದ ನಟ ವಿಶಾಲ್

ನಟ ವಿಶಾಲ್ ಅವರು ತಮ್ಮ ಚೊಚ್ಚಲ ನಿರ್ದೇಶನದ 'ಮುಗುಡಂ' ಚಿತ್ರದ ಹಾಡು ಬಿಡುಗಡೆ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರೊಂದಿಗಿನ 30 ವರ್ಷಗಳ ಸ್ನೇಹವನ್ನು ಸ್ಮರಿಸಿದರು. 'ನೀವು ಈಗ ಸಿನಿಮಾದಲ್ಲಿಲ್ಲ, ಹಾಗಾಗಿ ನಿಮ್ಮ ಹೆಸರು ಬಳಸುತ್ತಿದ್ದೇನೆ' ಎಂದು ತಮಾಷೆ ಮಾಡಿದ ವಿಶಾಲ್, ವಿಜಯ್ ಅವರ ಹೆಸರಿನಲ್ಲಿ ಮೂವರು ಬಡ ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತುಕೊಂಡರು. ಇದು ಅವರ ಆಪ್ತ ಸಂಬಂಧ ಮತ್ತು ಸಾಮಾಜಿಕ ಕಳಕಳಿಯನ್ನು ಬಿಂಬಿಸುತ್ತದೆ.

'ನಿಮ್ಮ ಹೆಸರು ಬಳಸಿಕೊಳ್ಳುತ್ತೇನೆ': ಸಿಎಂ ವಿಜಯ್​ಗೆ ನೇರವಾಗಿ ಹೇಳಿದ ನಟ ವಿಶಾಲ್
ವಿಶಾಲ್-ವಿಜಯ್
ರಾಜೇಶ್ ದುಗ್ಗುಮನೆ
|

Updated on:Jun 30, 2026 | 7:31 AM

Share

ಮುಖ್ಯಾಂಶಗಳು

  • ಸಿನಿಮಾದಲ್ಲಿಲ್ಲದ ವಿಜಯ್ ಹೆಸರನ್ನು ಬಳಸಿದ ವಿಶಾಲ್
  • ಮುಖ್ಯಮಂತ್ರಿ ವಿಜಯ್ ಜೊತೆಗಿನ ವಿಶಾಲ್ ಅವರ 30 ವರ್ಷಗಳ ಗೆಳೆತನ
  • ಹೂಗುಚ್ಛದ ಬದಲು ಬಡ ಮಕ್ಕಳ ಶಿಕ್ಷಣಕ್ಕೆ ನೆರವು

ತಮಿಳು ನಟ ವಿಶಾಲ್ ಅವರು (Vishal) ‘ಮುಗುಡಂ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರಿಗೆ ಚೊಚ್ಚಲ ಅನುಭವ. ಇತ್ತೀಚೆಗೆ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮ ನಡೆದಿದೆ. ಈ ವೇಳೆ ಅವರು ತಮಿಳುನಾಡಿನ ಮುಖ್ಯಮಂತ್ರಿ ದಳಪತಿ ವಿಜಯ್ ಜೊತೆಗಿನ ತಮ್ಮ ಸ್ನೇಹವನ್ನು ನೆನಪಿಸಿಕೊಂಡಿದ್ದಾರೆ. ಅವರು ಇತ್ತೀಚೆಗೆ ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರ ಅನುಭವವನ್ನು ಬಿಚ್ಚಿಟ್ಟಿದ್ದಾರೆ.

‘ಎರಡು ವರ್ಷಗಳ ಹಿಂದೆ ನಾನು ವಿಜಯ್ ಅವರಿಗೆ ಕಥೆ ಹೇಳಲು ಹೋಗಿದ್ದೆ. ಆದರೆ, ಅವರು ಕಥೆ ಒಪ್ಪಿಲ್ಲ. ಈಗ ಅವರು ಮುಖ್ಯಮಂತ್ರಿಯಾಗಿದ್ದಾರೆ. ಇತ್ತೀಚೆಗೆ ನಾನು ಅವರನ್ನು ಮತ್ತೆ ಭೇಟಿಯಾದೆ. ನಿಮಗೆ ಹೇಳಿದ ಕಥೆ ನೆನಪಿದೆಯೇ? ಎಂದು ಕೇಳಿದೆ. ಅವರು ಹೌದು ನೆನಪಿದೆ ಎಂದರು. ನಾನು ನೀವು ಈಗ ಸಿನಿಮಾದಲ್ಲಿಲ್ಲ. ಅದಕ್ಕೆ ನಿಮ್ಮ ಹೆಸರನ್ನು ನಾನು ಬಳಸಿಕೊಳ್ಳುತ್ತಿದ್ದೇನೆ ಎಂದೆ. ಇದನ್ನು ಕೇಳಿ ವಿಜಯ್ ಜೋರಾಗಿ ನಕ್ಕರು’ ಎಂದು ವಿಶಾಲ್ ವೇದಿಕೆಯಲ್ಲಿ ಹೇಳಿದರು.

30 ವರ್ಷಗಳ ಹಳೆಯ ಸ್ನೇಹ

ವಿಶಾಲ್ ಮತ್ತು ಸಿಎಂ ವಿಜಯ್ ನಡುವೆ 30 ವರ್ಷಗಳ ಹಳೆಯ ಸ್ನೇಹವಿದೆ. ಕಾಲೇಜು ದಿನಗಳಿಂದಲೂ ಇಬ್ಬರಿಗೂ ಪರಿಚಯವಿದೆ. ವಿಜಯ್ ಅವರು ವಿಶಾಲ್ ಅಣ್ಣನ ಜೊತೆ ಕಾಲೇಜಿನಲ್ಲಿ ಓದುತ್ತಿದ್ದರು. ‘ಅವರು ಮುಖ್ಯಮಂತ್ರಿಯಾದರೂ ಅವರಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅದೇ ಬಾಡಿ ಲಾಂಗ್ವೇಜ್ ಮತ್ತು ಅದೇ ಒಳ್ಳೆಯ ಗುಣಗಳು ಅವರಲ್ಲಿವೆ. ಕೇವಲ ಅವರ ಹುದ್ದೆ ಮಾತ್ರ ಬದಲಾಗಿದೆ’ ಎಂದು ವಿಶಾಲ್ ಹೊಗಳಿದ್ದಾರೆ.

ಭೇಟಿಯ ಸಂದರ್ಭದಲ್ಲಿ ವಿಶಾಲ್ ಅವರು ವಿಜಯ್ ಅವರನ್ನು ‘ಡಾರ್ಲಿಂಗ್’ ಎಂದು ಕರೆದಿದ್ದಾರಂತೆ. ‘ಒಬ್ಬ ಮುಖ್ಯಮಂತ್ರಿಯನ್ನು ಡಾರ್ಲಿಂಗ್ ಎಂದು ಕರೆಯುವುದು ಒಂದು ಅದ್ಭುತ ಅನುಭವ. ಸ್ನೇಹಿತನ ಜೊತೆ ಮಾತನಾಡಿದ ಹಾಗೆ ಅನಿಸಿತು’ ಎಂದು ವಿಶಾಲ್ ಖುಷಿ ಹಂಚಿಕೊಂಡಿದ್ದಾರೆ.

ಹೂಗುಚ್ಛದ ಬದಲು ಮಕ್ಕಳ ಶಿಕ್ಷಣಕ್ಕೆ ನೆರವು

ಸಿಎಂ ವಿಜಯ್ ಅವರನ್ನು ಭೇಟಿಯಾದಾಗ ವಿಶಾಲ್ ಹೂಗುಚ್ಛ ನೀಡಲಿಲ್ಲ. ಅದರ ಬದಲಾಗಿ ವಿಜಯ್ ಅವರ ಹೆಸರಿನಲ್ಲಿ ಮೂವರು ಬಡ ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿ ಪಡೆದಿದ್ದಾರೆ. ‘ನಿಮ್ಮ ಹೆಸರಿನಲ್ಲಿ ಮೂವರು ಮಕ್ಕಳಿಗೆ ಶಿಕ್ಷಣ ಕೊಡಿಸುತ್ತೇನೆ ಎಂದೆ. ಇದಕ್ಕೆ ವಿಜಯ್ ತುಂಬಾ ಸಂತೋಷದಿಂದ ಒಪ್ಪಿಕೊಂಡರು’ ಎಂದು ವಿಶಾಲ್ ತಿಳಿಸಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಈ ಹೆಣ್ಣುಮಕ್ಕಳು ವಿಜಯ್ ಹೆಸರಿನಲ್ಲಿ ವಿದ್ಯಾಭ್ಯಾಸ ಮಾಡಲಿದ್ದಾರೆ.

ಇದನ್ನೂ ಓದಿ: ‘ವಿಜಯ್ ಅತ್ಯಂತ ಸಮರ್ಥ ಮುಖ್ಯಮಂತ್ರಿ’: ಮುಕ್ತಕಂಠದಿಂದ ಹೊಗಳಿದ ನಟ ವಿಶಾಲ್

ವಿಶಾಲ್ ನಟಿಸಿ, ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಸಿನಿಮಾ ‘ಮಗುಡಂ’. ಇದು ತಮಿಳು ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಮೂಡಿಬರುತ್ತಿದೆ. ಈ ಸಿನಿಮಾ ಇದೇ ವರ್ಷ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Tue, 30 June 26

Follow Us
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!