AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಜೊತೆ ರಾಜಕೀಯಕ್ಕೆ ಬರೋಕೆ ರೆಡಿ ಆದ ತಮಿಳಿನ ಮತ್ತೋರ್ವ ಸ್ಟಾರ್ ನಟ

‘ರತ್ನಮ್’ ಸಿನಿಮಾದ ಪ್ರಮೋಷನ್​ನಲ್ಲಿ ವಿಶಾಲ್ ಭಾಗಿ ಆಗಿದ್ದಾರೆ. ಈ ವೇಳೆ ಅವರಿಗೆ ರಾಜಕೀಯದ ಬಗ್ಗೆ ಪ್ರಶ್ನೆ ಎದುರಾಗಿದೆ. ‘2026ರಲ್ಲಿ ಚುನಾವಣೆಯ ಭಾಗವಾಗುತ್ತೀರೆ’ ಎಂದು ಅವರನ್ನು ಕೇಳಲಾಗಿದೆ. ಇದಕ್ಕೆ ಪರೋಕ್ಷವಾಗಿ ಅವರು ಹೌದು ಎಂದು ಉತ್ತರಿಸಿದ್ದಾರೆ.

ವಿಜಯ್ ಜೊತೆ ರಾಜಕೀಯಕ್ಕೆ ಬರೋಕೆ ರೆಡಿ ಆದ ತಮಿಳಿನ ಮತ್ತೋರ್ವ ಸ್ಟಾರ್ ನಟ
ವಿಜಯ್
ರಾಜೇಶ್ ದುಗ್ಗುಮನೆ
|

Updated on: Apr 23, 2024 | 1:09 PM

Share

ದಳಪತಿ ವಿಜಯ್ (Thalapathy Vijay) ಅವರು ರಾಜಕೀಯಕ್ಕೆ ಬರೋದು ಖಚಿತವಾಗಿದೆ. ಈಗಾಗಲೇ ಅವರು ಪಕ್ಷ ಕೂಡ ಕಟ್ಟಿದ್ದಾರೆ. 2026ರಲ್ಲಿ ನಡೆಯೋ ತಮಿಳುನಾಡು ವಿಧಾನಸಭೆ ಚುನಾವಣೆಗೆ ಅವರು ಸ್ಪರ್ಧಿಸಲಿದ್ದಾರೆ. ಇದಕ್ಕಾಗಿ ಅವರು ಸಂಪೂರ್ಣವಾಗಿ ಚಿತ್ರರಂಗ ತೊರೆಯಲಿದ್ದಾರೆ. ಈ ಬೆನ್ನಲ್ಲೇ ತಮಿಳಿನ ಮತ್ತೋರ್ವ ಸ್ಟಾರ್ ನಟ ರಾಜಕೀಯಕ್ಕೆ ಧುಮುಕಲು ರೆಡಿ ಆಗಿದ್ದಾರೆ. ಅವರು ಬೇರಾರು ಅಲ್ಲ ನಟ ದಳಪತಿ ವಿಜಯ್. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ.

‘ರತ್ನಮ್’ ಸಿನಿಮಾದ ಪ್ರಮೋಷನ್​ನಲ್ಲಿ ವಿಶಾಲ್ ಭಾಗಿ ಆಗಿದ್ದಾರೆ. ಈ ವೇಳೆ ಅವರಿಗೆ ರಾಜಕೀಯದ ಬಗ್ಗೆ ಪ್ರಶ್ನೆ ಎದುರಾಗಿದೆ. ‘2026ರಲ್ಲಿ ಚುನಾವಣೆಯ ಭಾಗವಾಗುತ್ತೀರೆ’ ಎಂದು ಅವರನ್ನು ಕೇಳಲಾಗಿದೆ. ಇದಕ್ಕೆ ಪರೋಕ್ಷವಾಗಿ ಅವರು ಹೌದು ಎಂದು ಉತ್ತರಿಸಿದ್ದಾರೆ. ‘ಅಗತ್ಯವಾಗಿರೋ ವಸ್ತುಗಳು ಜನರಿಗೆ ಸಿಗುತ್ತಿಲ್ಲ. ಅದರಲ್ಲೂ ಗ್ರಾಮಿಣ ಭಾಗದ ಜನರಿಗೆ ಸರ್ಕಾರದ ಯೋಜನೆಗಳು ತಲುಪುತ್ತಿಲ್ಲ. ಸರ್ಕಾರ ಸರಿಯಾಗಿ ಕೆಲಸ ಮಾಡಿದರೆ ರಾಜಕೀಯ ಸೇರಲ್ಲ’ ಎಂದಿದ್ದಾರೆ. ಸದ್ಯದ ಸ್ಥಿತಿಯಲ್ಲಿ ರಾಜಕೀಯ  ಪಕ್ಷಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎನ್ನುವ ಅಭಿಪ್ರಾಯ ಅವರಿಗೆ ಇದೆ.

ವಿಶಾಲ್ ಅವರು ಯಾವ ಪಕ್ಷ ಸೇರುತ್ತೇನೆ, ಯಾರನ್ನು ಬೆಂಬಲಿಸುತ್ತೇನೆ ಎನ್ನುವ ವಿಚಾರ ರಿವೀಲ್ ಮಾಡಿಲ್ಲ. ಅವರು ‘ತುಪ್ಪರಿವಾಲನ್ 2’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ನಿರ್ದೇಶಕನಾಗಿ ಇದು ಅವರ ಮೊದಲ ಸಿನಿಮಾ. ಅವರು ರಾಜಕೀಯದಲ್ಲಿ ಯಶಸ್ಸು ಕಾಣುತ್ತಾರಾ ಅಥವಾ ಇಲ್ಲವೇ ಎನ್ನುವ ಅನುಮಾನ ಮೂಡಿದೆ.

ಇದನ್ನೂ ಓದಿ: ತಾಯಿಗಾಗಿ ಸಾಯಿ ಬಾಬಾ ಮಂದಿರ ಕಟ್ಟಿದ ದಳಪತಿ ವಿಜಯ್

ದಳಪತಿ ವಿಜಯ್ ಈಗಾಗಲೇ ಪಕ್ಷ ಘೋಷಣೆ ಮಾಡಿದ್ದಾರೆ. ಇದಕ್ಕೆ ‘ತಮಿಳಗ ವೆಟ್ರಿ ಕಳಗಮ್’ ಎಂದು ಹೆಸರಿಡಲಾಗಿದೆ. ಅವರು ಸದ್ಯ ‘GOAT’ ಸಿನಿಮಾ ಶೂಟ್​ಗಾಗಿ ರಷ್ಯಾಗೆ ತೆರಳಿದ್ದಾರೆ. ಇದಾದ ಬಳಿಕ ಅವರು ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಆ ಬಳಿಕ ಅವರ ಸಂಪೂರ್ಣ ಗಮನ ರಾಜಕೀಯದ ಮೇಲೆ ಇರಲಿದೆ. 2026ರ ಲೋಕಸಭೆ ಚುನಾವಣೆಯಲ್ಲಿ ತಮಿಳು ನಾಡಿನಲ್ಲಿ ಅವರ ಪಕ್ಷ ಸ್ಪರ್ಧೆ ಮಾಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ