AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಜೊತೆ ರಾಜಕೀಯಕ್ಕೆ ಬರೋಕೆ ರೆಡಿ ಆದ ತಮಿಳಿನ ಮತ್ತೋರ್ವ ಸ್ಟಾರ್ ನಟ

‘ರತ್ನಮ್’ ಸಿನಿಮಾದ ಪ್ರಮೋಷನ್​ನಲ್ಲಿ ವಿಶಾಲ್ ಭಾಗಿ ಆಗಿದ್ದಾರೆ. ಈ ವೇಳೆ ಅವರಿಗೆ ರಾಜಕೀಯದ ಬಗ್ಗೆ ಪ್ರಶ್ನೆ ಎದುರಾಗಿದೆ. ‘2026ರಲ್ಲಿ ಚುನಾವಣೆಯ ಭಾಗವಾಗುತ್ತೀರೆ’ ಎಂದು ಅವರನ್ನು ಕೇಳಲಾಗಿದೆ. ಇದಕ್ಕೆ ಪರೋಕ್ಷವಾಗಿ ಅವರು ಹೌದು ಎಂದು ಉತ್ತರಿಸಿದ್ದಾರೆ.

ವಿಜಯ್ ಜೊತೆ ರಾಜಕೀಯಕ್ಕೆ ಬರೋಕೆ ರೆಡಿ ಆದ ತಮಿಳಿನ ಮತ್ತೋರ್ವ ಸ್ಟಾರ್ ನಟ
ವಿಜಯ್
ರಾಜೇಶ್ ದುಗ್ಗುಮನೆ
|

Updated on: Apr 23, 2024 | 1:09 PM

Share

ದಳಪತಿ ವಿಜಯ್ (Thalapathy Vijay) ಅವರು ರಾಜಕೀಯಕ್ಕೆ ಬರೋದು ಖಚಿತವಾಗಿದೆ. ಈಗಾಗಲೇ ಅವರು ಪಕ್ಷ ಕೂಡ ಕಟ್ಟಿದ್ದಾರೆ. 2026ರಲ್ಲಿ ನಡೆಯೋ ತಮಿಳುನಾಡು ವಿಧಾನಸಭೆ ಚುನಾವಣೆಗೆ ಅವರು ಸ್ಪರ್ಧಿಸಲಿದ್ದಾರೆ. ಇದಕ್ಕಾಗಿ ಅವರು ಸಂಪೂರ್ಣವಾಗಿ ಚಿತ್ರರಂಗ ತೊರೆಯಲಿದ್ದಾರೆ. ಈ ಬೆನ್ನಲ್ಲೇ ತಮಿಳಿನ ಮತ್ತೋರ್ವ ಸ್ಟಾರ್ ನಟ ರಾಜಕೀಯಕ್ಕೆ ಧುಮುಕಲು ರೆಡಿ ಆಗಿದ್ದಾರೆ. ಅವರು ಬೇರಾರು ಅಲ್ಲ ನಟ ದಳಪತಿ ವಿಜಯ್. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ.

‘ರತ್ನಮ್’ ಸಿನಿಮಾದ ಪ್ರಮೋಷನ್​ನಲ್ಲಿ ವಿಶಾಲ್ ಭಾಗಿ ಆಗಿದ್ದಾರೆ. ಈ ವೇಳೆ ಅವರಿಗೆ ರಾಜಕೀಯದ ಬಗ್ಗೆ ಪ್ರಶ್ನೆ ಎದುರಾಗಿದೆ. ‘2026ರಲ್ಲಿ ಚುನಾವಣೆಯ ಭಾಗವಾಗುತ್ತೀರೆ’ ಎಂದು ಅವರನ್ನು ಕೇಳಲಾಗಿದೆ. ಇದಕ್ಕೆ ಪರೋಕ್ಷವಾಗಿ ಅವರು ಹೌದು ಎಂದು ಉತ್ತರಿಸಿದ್ದಾರೆ. ‘ಅಗತ್ಯವಾಗಿರೋ ವಸ್ತುಗಳು ಜನರಿಗೆ ಸಿಗುತ್ತಿಲ್ಲ. ಅದರಲ್ಲೂ ಗ್ರಾಮಿಣ ಭಾಗದ ಜನರಿಗೆ ಸರ್ಕಾರದ ಯೋಜನೆಗಳು ತಲುಪುತ್ತಿಲ್ಲ. ಸರ್ಕಾರ ಸರಿಯಾಗಿ ಕೆಲಸ ಮಾಡಿದರೆ ರಾಜಕೀಯ ಸೇರಲ್ಲ’ ಎಂದಿದ್ದಾರೆ. ಸದ್ಯದ ಸ್ಥಿತಿಯಲ್ಲಿ ರಾಜಕೀಯ  ಪಕ್ಷಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎನ್ನುವ ಅಭಿಪ್ರಾಯ ಅವರಿಗೆ ಇದೆ.

ವಿಶಾಲ್ ಅವರು ಯಾವ ಪಕ್ಷ ಸೇರುತ್ತೇನೆ, ಯಾರನ್ನು ಬೆಂಬಲಿಸುತ್ತೇನೆ ಎನ್ನುವ ವಿಚಾರ ರಿವೀಲ್ ಮಾಡಿಲ್ಲ. ಅವರು ‘ತುಪ್ಪರಿವಾಲನ್ 2’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ನಿರ್ದೇಶಕನಾಗಿ ಇದು ಅವರ ಮೊದಲ ಸಿನಿಮಾ. ಅವರು ರಾಜಕೀಯದಲ್ಲಿ ಯಶಸ್ಸು ಕಾಣುತ್ತಾರಾ ಅಥವಾ ಇಲ್ಲವೇ ಎನ್ನುವ ಅನುಮಾನ ಮೂಡಿದೆ.

ಇದನ್ನೂ ಓದಿ: ತಾಯಿಗಾಗಿ ಸಾಯಿ ಬಾಬಾ ಮಂದಿರ ಕಟ್ಟಿದ ದಳಪತಿ ವಿಜಯ್

ದಳಪತಿ ವಿಜಯ್ ಈಗಾಗಲೇ ಪಕ್ಷ ಘೋಷಣೆ ಮಾಡಿದ್ದಾರೆ. ಇದಕ್ಕೆ ‘ತಮಿಳಗ ವೆಟ್ರಿ ಕಳಗಮ್’ ಎಂದು ಹೆಸರಿಡಲಾಗಿದೆ. ಅವರು ಸದ್ಯ ‘GOAT’ ಸಿನಿಮಾ ಶೂಟ್​ಗಾಗಿ ರಷ್ಯಾಗೆ ತೆರಳಿದ್ದಾರೆ. ಇದಾದ ಬಳಿಕ ಅವರು ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಆ ಬಳಿಕ ಅವರ ಸಂಪೂರ್ಣ ಗಮನ ರಾಜಕೀಯದ ಮೇಲೆ ಇರಲಿದೆ. 2026ರ ಲೋಕಸಭೆ ಚುನಾವಣೆಯಲ್ಲಿ ತಮಿಳು ನಾಡಿನಲ್ಲಿ ಅವರ ಪಕ್ಷ ಸ್ಪರ್ಧೆ ಮಾಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು