AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಲ್ ಸಿಂಹನಂತೆ ಮರಳಬೇಕು ಎಂದು ಆಶಿಸಿದ ಸ್ಟಾರ್ ಹೀರೋ  

ಕಾಲಿವುಡ್ ನಟ ವಿಶಾಲ್ ಅವರು ಇತ್ತೀಚೆಗೆ ವೇದಿಕೆ ಏರಿದಾಗ ಅವರ ಕೈ ನಡುಗುತ್ತಿತ್ತು. ಇದನ್ನು ಅನೇಕರು ಗಮನಿಸಿದ್ದಾರೆ. ಮಾತು ಕೂಡ ತೊದಲುತ್ತಿತ್ತು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ವಿಶಾಲ್ ಅವರಿಗೆ ವೈರಲ್ ಫಿವರ್ ಇದೆ ಎಂದು ಹೇಳಲಾಗಿದೆ. ಈಗ ಅವರನ್ನು ಸ್ಟಾರ್ ಹೀರೋ ಬೆಂಬಲಿಸಿದ್ದಾರೆ.

ವಿಶಾಲ್ ಸಿಂಹನಂತೆ ಮರಳಬೇಕು ಎಂದು ಆಶಿಸಿದ ಸ್ಟಾರ್ ಹೀರೋ  
ವಿಶಾಲ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 11, 2025 | 7:53 AM

Share

ಇತ್ತೀಚೆಗೆ ವಿಶಾಲ್ ಅವರ ವಿಡಿಯೋ ಒಂದು ವೈರಲ್ ಆಗಿತ್ತು. ವೇದಿಕೆ ಏರಿದ್ದ ಅವರ ಕೈ ಸಾಕಷ್ಟು ನಡುಗುತ್ತಾ ಇತ್ತು. ಮೈಕ್ ಹಿಡಿಯಲು ಅವರು ಕಷ್ಟಪಟ್ಟಿದ್ದರು. ಅವರ ಆರೋಗ್ಯದ ಬಗ್ಗೆ ಅನೇಕರಿಗೆ ಆತಂಕ ಮೂಡಿತ್ತು. ಆ ಬಳಿಕ ವಿಶಾಲ್ ಅವರಿಗೆ ಅತಿಯಾದ ಜ್ವರ ಇತ್ತು. ಈ ಕಾರಣದಿಂದಲೇ ಅವರ ಕೈ ನಡುಗುತ್ತಿತ್ತು ಎನ್ನಲಾಗಿದೆ. ಈಗ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ವಿಶಾಲ್ ಬಗ್ಗೆ ನಟ ಜಯಮ್ ರವಿ ಮಾತನಾಡಿದ್ದಾರೆ. ವಿಶಾಲ್ ಬೇಗ ಚೇತರಿಕೆ ಕಾಣಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಅವರು ಸಿಹಂದಂತೆ ಮರಳಲಿ ಎಂದು ಆಶಿಸಿದ್ದಾರೆ.

ಈಗ ಜಯಮ್ ರವಿ ಅವರು ತಮ್ಮ ಸಿನಿಮಾ ಪ್ರಚಾರದ ಸಂದರ್ಭದಲ್ಲಿ ವಿಶಾಲ್ ಬಗ್ಗೆ ಮಾತನಾಡಿದ್ದಾರೆ. ‘ವಿಶಾಲ್​ಗಿಂತ ಧೈರ್ಯಶಾಲಿ ವ್ಯಕ್ತಿ ಇರಲಿಕ್ಕಿಲ್ಲ. ಅವರು ಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ. ಆದರೆ, ಅವರ ಧೈರ್ಯವೇ ಅವರನ್ನು ಕರೆದುಕೊಂಡು ಹೋಗುತ್ತಿದೆ. ಅವರು ಬೇಗ ಮರಳುತ್ತಾರೆ. ವಿಶಾಲ್ ಅವರ ಒಳ್ಳೆಯ ಗುಣ ಹಾಗೂ ಅವರ ಕುಟುಂಬ ನೀಡಿರುವ ಬೆಂಬಲದಿಂದ ಅವರು ಮತ್ತಷ್ಟು ಗಟ್ಟಿಯಾಗಿ ಮರಳುತ್ತಾರೆ, ಸಿಂಹದಂತೆ’ ಎಂದಿದ್ದಾರೆ ಜಯಮ್ ರವಿ.

‘ಕಾದಳಿಕ್ಕ ನರಮಿಲ್ಲೈ’ ಸಿನಿಮಾದಲ್ಲಿ ಜಯಂ ರವಿ ನಟಿಸಿದ್ದಾರೆ. ಕೃತಿಕಾ ಉದಯನಿಧಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಜಯಂ ರವಿ ಹಾಗೂ ನಿತ್ಯಾ ಮೆನನ್ ಮುಖ್ಯ ಭೂಮಿಕೆಯಲ್ಲಿ ಇದ್ದಾರೆ. ಯೋಗಿ ಬಾಬು, ಲಕ್ಷ್ಮಿ ರಾಮಕೃಷ್ಣನ್ ಮೊದಲಾದವರು ಇಟ್ಟಾಗಿ ನಟಿಸಿದ್ದಾರೆ. ಎಆರ್ ರೆಹಮಾನ್ ಅವರು ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: Vishal: ವಿಶಾಲ್​ ಮನೆ ಮೇಲೆ ಕಲ್ಲು ತೂರಾಟ; ಸಿಸಿಟಿವಿ ವಿಡಿಯೋ ನೋಡಿ ಅಭಿಮಾನಿಗಳಲ್ಲಿ ಆತಂಕ 

ವಿಶಾಲ್ ಆರೋಗ್ಯದ ಬಗ್ಗೆ

ವಿಶಾಲ್​ ಅವರು ಇತ್ತೀಚೆಗೆ ವೇದಿಕೆ ಏರಿದಾಗ ನಡುಗುತ್ತಿದ್ದರು. ಇದನ್ನು ಅನೇಕರು ಗಮನಿಸಿದ್ದಾರೆ. ಅವರ ಬಾಯಿ ಕೂಡ ತೊದಲುತ್ತಿತ್ತು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ವಿಶಾಲ್ ಅವರಿಗೆ ವೈರಲ್ ಫಿವರ್ ಇದೆ ಎಂದು ಹೇಳಲಾಗಿದೆ. ಈ ಕಾರಣದಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದರು. ಈಗ ಅವರು ಚೇತರಿಕೆ ಕಾಣುವ ಹಂತದಲ್ಲಿ ಇದ್ದಾರೆ. ಅವರು ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಅವರ ಬಗ್ಗೆ ಕೆಲವರು ವದಂತಿ ಹರಡಿದಿದ್ದರು. ಈ ಬಗ್ಗೆ ವಿಶಾಲ್ ಆಪ್ತರು ಸಿಟ್ಟಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ