AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಸಿಕೆ ಪಡೆದ ಮರುದಿನವೇ ನಟ ವಿವೇಕ್​ಗೆ ಹೃದಯಾಘಾತ! ಆಸ್ಪತ್ರೆಗೆ ದಾಖಲು

Actor Vivekh Heart Attack: 59 ವರ್ಷ ವಯಸ್ಸಿನ ನಟ ವಿವೇಕ್​ ಅವರು ಗುರುವಾರವಷ್ಟೇ (ಏ.15) ಕೊರೊನಾ ವೈರಸ್​ ಲಸಿಕೆ ಪಡೆದುಕೊಂಡಿದ್ದರು. ಕಾಕತಾಳೀಯ ಎಂಬಂತೆ ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿದೆ.

ಕೊವಿಡ್​ ಲಸಿಕೆ ಪಡೆದ ಮರುದಿನವೇ ನಟ ವಿವೇಕ್​ಗೆ ಹೃದಯಾಘಾತ! ಆಸ್ಪತ್ರೆಗೆ ದಾಖಲು
(ನಟ ವಿವೇಕ್​)
ಮದನ್​ ಕುಮಾರ್​
|

Updated on: Apr 16, 2021 | 2:01 PM

Share

ಕಾಲಿವುಡ್​ನ ಖ್ಯಾತ ನಟ ವಿವೇಕ್​ ಅವರಿಗೆ ಶುಕ್ರವಾರ (ಏ.16) ಹೃದಯಾಘಾತ ಸಂಭವಿಸಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವೇಕ್​ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ. ಶುಕ್ರವಾರ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ ಮತ್ತು ಆಂಜಿಯೋಗ್ರಾಮ್​ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

59 ವರ್ಷ ವಯಸ್ಸಿನ ವಿವೇಕ್​ ಅವರು ಗುರುವಾರವಷ್ಟೇ ಕೊರೊನಾ ವೈರಸ್​ ಲಸಿಕೆ ಪಡೆದುಕೊಂಡಿದ್ದರು. ಕಾಕತಾಳೀಯ ಎಂಬಂತೆ ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೊರೊನಾ ವ್ಯಾಕ್ಸಿನ್​​ ಪಡೆದುಕೊಂಡಿದ್ದಕ್ಕೂ, ಹೃದಯಾಘಾತ ಆಗಿರುವುದಕ್ಕೂ ಸಂಬಂಧ ಇದೆಯೋ ಇಲ್ಲವೋ ಎಂಬ ಬಗ್ಗೆ ಯಾರೂ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ.

ಗುರುವಾರ ವಾಕ್ಸಿನ್​ ಪಡೆದುಕೊಂಡ ನಂತರ ಮಾಧ್ಯಮಗಳ ಜೊತೆ ವಿವೇಕ್​ ಮಾತನಾಡಿದ್ದರು. ‘ಮಾಸ್ಕ್​ ಧರಿಸುವುದು, ಕೈ ತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಸುರಕ್ಷಿತವಾಗಿರಬಹುದು. ​ವೈದ್ಯಕೀಯವಾಗಿ ರಕ್ಷಿಸಿಕೊಳ್ಳಲು ವ್ಯಾಕ್ಸಿನ್​ ಪಡೆಯಬೇಕು. ನೀವು ಆಯುರ್ವೇದ ಮುಂತಾದ ಚಿಕಿತ್ಸೆ ಪಡೆಯುತ್ತಿದ್ದರೂ ಒಳ್ಳೆಯದು. ಅವೆಲ್ಲವೂ ಹೆಚ್ಚುವರಿ ಕ್ರಮಗಳು. ನಮ್ಮ ಜೀವ ಉಳಿಸುವುದು ವ್ಯಾಕ್ಸಿನ್​ ಮಾತ್ರ’ ಎಂದು ವಿವೇಕ್​ ಹೇಳಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್​ ಆಗಿರುವ ವಿವೇಕ್​ ಅವರು ಟ್ವಿಟರ್​ ಮೂಲಕ ವೈದ್ಯರಿಗೆ ಧನ್ಯವಾದ ತಿಳಿಸಿದ್ದರು. ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿರುವುದು ಶಾಕಿಂಗ್​ ಸಂಗತಿ. ಬಾಲಿವುಡ್​ನ ‘ವಿಕ್ಕಿ ಡೋನರ್​’ ಚಿತ್ರದ ತಮಿಳು ರಿಮೇಕ್​ ಆದಂತಹ ‘ಧಾರಾಳ ಪ್ರಭು’ ಚಿತ್ರದಲ್ಲಿ ವಿವೇಕ್​ ಕೊನೇ ಬಾರಿಗೆ ನಟಿಸಿದ್ದರು.

ಕಳೆದ ವರ್ಷ ಲಾಕ್​ ಡೌನ್​ ಆಗುವುದಕ್ಕೂ ಕೆಲವೇ ದಿನಗಳ ಮುನ್ನ ಧಾರಾಳ ಪ್ರಭು ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಲಾಕ್​ಡೌನ್​ನಿಂದಾಗಿ ಚಿತ್ರಕ್ಕೆ ಹೊಡೆದ ಬಿತ್ತು. ಕಮಲ್​ ಹಾಸನ್​ ಅಭಿನಯದ ಬಹುನಿರೀಕ್ಷಿತ ‘ಇಂಡಿಯನ್​ 2’ ಸಿನಿಮಾದಲ್ಲೂ ವಿವೇಕ್​ ನಟಿಸುತ್ತಿದ್ದರು. ಸದ್ಯ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಇದನ್ನೂ ಓದಿ: ಹೆಚ್ಚುತ್ತಿದೆ ಕೊರೊನಾ ಅಟ್ಟಹಾಸ; ಜನರೇ ಜನತಾ ಕರ್ಫ್ಯೂ ಹಾಕಿಕೊಳ್ಳಬೇಕು ಎಂದ ಸಚಿವ ಡಾ. ಕೆ.ಸುಧಾಕರ್

(Actor Vivekh admitted to private hospital in Chennai due to heart attack after taking Corona vaccine)

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?