AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಸಿಕೆ ಪಡೆದ ಮರುದಿನವೇ ನಟ ವಿವೇಕ್​ಗೆ ಹೃದಯಾಘಾತ! ಆಸ್ಪತ್ರೆಗೆ ದಾಖಲು

Actor Vivekh Heart Attack: 59 ವರ್ಷ ವಯಸ್ಸಿನ ನಟ ವಿವೇಕ್​ ಅವರು ಗುರುವಾರವಷ್ಟೇ (ಏ.15) ಕೊರೊನಾ ವೈರಸ್​ ಲಸಿಕೆ ಪಡೆದುಕೊಂಡಿದ್ದರು. ಕಾಕತಾಳೀಯ ಎಂಬಂತೆ ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿದೆ.

ಕೊವಿಡ್​ ಲಸಿಕೆ ಪಡೆದ ಮರುದಿನವೇ ನಟ ವಿವೇಕ್​ಗೆ ಹೃದಯಾಘಾತ! ಆಸ್ಪತ್ರೆಗೆ ದಾಖಲು
(ನಟ ವಿವೇಕ್​)
ಮದನ್​ ಕುಮಾರ್​
|

Updated on: Apr 16, 2021 | 2:01 PM

Share

ಕಾಲಿವುಡ್​ನ ಖ್ಯಾತ ನಟ ವಿವೇಕ್​ ಅವರಿಗೆ ಶುಕ್ರವಾರ (ಏ.16) ಹೃದಯಾಘಾತ ಸಂಭವಿಸಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವೇಕ್​ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ. ಶುಕ್ರವಾರ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ ಮತ್ತು ಆಂಜಿಯೋಗ್ರಾಮ್​ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

59 ವರ್ಷ ವಯಸ್ಸಿನ ವಿವೇಕ್​ ಅವರು ಗುರುವಾರವಷ್ಟೇ ಕೊರೊನಾ ವೈರಸ್​ ಲಸಿಕೆ ಪಡೆದುಕೊಂಡಿದ್ದರು. ಕಾಕತಾಳೀಯ ಎಂಬಂತೆ ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೊರೊನಾ ವ್ಯಾಕ್ಸಿನ್​​ ಪಡೆದುಕೊಂಡಿದ್ದಕ್ಕೂ, ಹೃದಯಾಘಾತ ಆಗಿರುವುದಕ್ಕೂ ಸಂಬಂಧ ಇದೆಯೋ ಇಲ್ಲವೋ ಎಂಬ ಬಗ್ಗೆ ಯಾರೂ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ.

ಗುರುವಾರ ವಾಕ್ಸಿನ್​ ಪಡೆದುಕೊಂಡ ನಂತರ ಮಾಧ್ಯಮಗಳ ಜೊತೆ ವಿವೇಕ್​ ಮಾತನಾಡಿದ್ದರು. ‘ಮಾಸ್ಕ್​ ಧರಿಸುವುದು, ಕೈ ತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಸುರಕ್ಷಿತವಾಗಿರಬಹುದು. ​ವೈದ್ಯಕೀಯವಾಗಿ ರಕ್ಷಿಸಿಕೊಳ್ಳಲು ವ್ಯಾಕ್ಸಿನ್​ ಪಡೆಯಬೇಕು. ನೀವು ಆಯುರ್ವೇದ ಮುಂತಾದ ಚಿಕಿತ್ಸೆ ಪಡೆಯುತ್ತಿದ್ದರೂ ಒಳ್ಳೆಯದು. ಅವೆಲ್ಲವೂ ಹೆಚ್ಚುವರಿ ಕ್ರಮಗಳು. ನಮ್ಮ ಜೀವ ಉಳಿಸುವುದು ವ್ಯಾಕ್ಸಿನ್​ ಮಾತ್ರ’ ಎಂದು ವಿವೇಕ್​ ಹೇಳಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್​ ಆಗಿರುವ ವಿವೇಕ್​ ಅವರು ಟ್ವಿಟರ್​ ಮೂಲಕ ವೈದ್ಯರಿಗೆ ಧನ್ಯವಾದ ತಿಳಿಸಿದ್ದರು. ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿರುವುದು ಶಾಕಿಂಗ್​ ಸಂಗತಿ. ಬಾಲಿವುಡ್​ನ ‘ವಿಕ್ಕಿ ಡೋನರ್​’ ಚಿತ್ರದ ತಮಿಳು ರಿಮೇಕ್​ ಆದಂತಹ ‘ಧಾರಾಳ ಪ್ರಭು’ ಚಿತ್ರದಲ್ಲಿ ವಿವೇಕ್​ ಕೊನೇ ಬಾರಿಗೆ ನಟಿಸಿದ್ದರು.

ಕಳೆದ ವರ್ಷ ಲಾಕ್​ ಡೌನ್​ ಆಗುವುದಕ್ಕೂ ಕೆಲವೇ ದಿನಗಳ ಮುನ್ನ ಧಾರಾಳ ಪ್ರಭು ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಲಾಕ್​ಡೌನ್​ನಿಂದಾಗಿ ಚಿತ್ರಕ್ಕೆ ಹೊಡೆದ ಬಿತ್ತು. ಕಮಲ್​ ಹಾಸನ್​ ಅಭಿನಯದ ಬಹುನಿರೀಕ್ಷಿತ ‘ಇಂಡಿಯನ್​ 2’ ಸಿನಿಮಾದಲ್ಲೂ ವಿವೇಕ್​ ನಟಿಸುತ್ತಿದ್ದರು. ಸದ್ಯ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಇದನ್ನೂ ಓದಿ: ಹೆಚ್ಚುತ್ತಿದೆ ಕೊರೊನಾ ಅಟ್ಟಹಾಸ; ಜನರೇ ಜನತಾ ಕರ್ಫ್ಯೂ ಹಾಕಿಕೊಳ್ಳಬೇಕು ಎಂದ ಸಚಿವ ಡಾ. ಕೆ.ಸುಧಾಕರ್

(Actor Vivekh admitted to private hospital in Chennai due to heart attack after taking Corona vaccine)

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ