AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕರೀನಾ ಕಪೂರ್​ ಸಂಪರ್ಕದಲ್ಲಿದ್ದ ಮೂವರಿಗೆ ಕೊರೋನಾ ಸೋಂಕು

ಕರೀನಾ ಸಂಪರ್ಕದಲ್ಲಿದ್ದ ಅಮೃತಾ ಅರೋರಾ ಅವರಿಗೆ ಡಿ. 11ರಂದು ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಮಹೀಪ್ ಕಪೂರ್​ ಹಾಗೂ ಸೀಮಾ ಖಾನ್​ಗೆ ಇದೀಗ ಸೋಂಕು ದೃಢಪಟ್ಟಿದೆ.

ನಟಿ ಕರೀನಾ ಕಪೂರ್​ ಸಂಪರ್ಕದಲ್ಲಿದ್ದ ಮೂವರಿಗೆ ಕೊರೋನಾ ಸೋಂಕು
ಕರೀನಾ ಮತ್ತು ಅಮೃತಾ ಅರೋರಾ
TV9 Web
| Edited By: |

Updated on:Dec 14, 2021 | 11:09 AM

Share

ಬಾಲಿವುಡ್​ ನಟಿ ಕರೀನಾ ಕಪೂರ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಬಳಿಕ ಅವರ ಸಂಪರ್ಕದಲ್ಲಿದ್ದ ಮೂವರಿಗೆ ಕೊರೋನಾ ಪಾಸಿಟಿವ್​ ಬಂದಿದೆ. ಕರೀನಾ ಸಂಪರ್ಕದಲ್ಲಿದ್ದ ಅಮೃತಾ ಅರೋರಾ ಅವರಿಗೆ ಡಿ. 11ರಂದು ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಮಹೀಪ್ ಕಪೂರ್​ ಹಾಗೂ ಸೀಮಾ ಖಾನ್​ಗೆ  ಸೋಂಕು ದೃಢಪಟ್ಟಿದೆಮೊನ್ನೆ (ಡಿ.11)  ನಟಿ ಕರೀನಾ ಅವರಿಗೆ ಕೊರೋನಾ ದೃಢಪಟ್ಟ ಹಿನ್ನಲೆಯಲ್ಲಿ ಅವರ ಮನೆಯನ್ನು ಮುಂಬೈ ಬಿಎಂಸಿ ಸೀಲ್ ಡೌನ್​ ಮಾಡಿತ್ತು. ಜತೆಗೆ ಅವರನ್ನು ಹೋಮ್​ ಐಸೋಲೇಷನ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕರೀನಾ ಅವರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ಎಲ್ಲರನ್ನೂ ಕೋವಿಡ್​ ತಪಾಸಣೆಗೆ ಒಳಪಡಿಸಲಾಗಿತ್ತು ಈ ವೇಳೇ ಅಮೃತಾ ಅರೋರಾ, ಮಹೀಪ್ ಕಪೂರ್​ ಹಾಗೂ ಸೀಮಾ ಖಾನ್​ಗೆ ಕೊರೋನಾ ಪಾಸಿಟಿವ್​ ಬಂದಿದೆಆಭರಣ ವಿನ್ಯಾಸಗಾರ್ತಿಯಾಗಿರುವ ಮಹೀಪ್ ಕಪೂರ್ ನಟ ಸಂಜಯ್​ ಕಪೂರ್​ ಅವರ ಪತ್ನಿ. ಇನ್ನು ಸೀಮಾ ಖಾನ್​ ಅವರು ಪ್ಯಾಷನ್​ ಡಿಸೈನರ್​ ಆಗಿದ್ದು ಸೊಹಿಲ್​ ಖಾನ್​ ಅವರನ್ನು ವಿವಾಹವಾಗಿದ್ದಾರೆ. ಈ ಮೂವರೂ ಕರೀನಾ ಅವರ ಸ್ನೇಹಿತೆಯರಾಗಿದ್ದಾರೆ.

ಕೆಲವು ದಿನಗಳ ಹಿಂದೆ ಕರೀನಾ ಕಪೂರ್​, ಅಮೃತಾ ಅರೋರಾ ಸೇರಿದಂತೆ ಹಲವು ಬಾಲಿವುಡ್​ ತಾರೆಯರು ಕರಣ್​ ಜೊಹರ್​ ಅವರು ಆಯೋಜಿಸಿದ್ದ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಪಾರ್ಟಿಯಲ್ಲಿ ಕೋವಿಡ್​ ನಿಯಮಗಳನ್ನು ಗಾಳಿಗೆ ತೂರಿದ್ದರು. ಬಳಿಕ ಕರೀನಾ ಕಪೂರ್​ ಅಮೃತಾ ಅರೋರಾ ಅವರಿಗೆ ಡಿ.11ರಂದು ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಘಿ ಅವರನ್ನು ಹೋಮ್​ ಐಸೋಲೇಷನ್​ನಲ್ಲಿ ಇರಸಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಬೃಹತ್​ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಅಧಿಕೃತವಾಗಿ  ಮಾಹಿತಿ ನೀಡಿತ್ತು. ಇದೀಗ ನಟಿ ಕರೀನಾ ಸಂಪರ್ಕದಲ್ಲಿದ್ದ  ಮಹೀಪ್ ಕಪೂರ್​ ಹಾಗೂ ಸೀಮಾ ಖಾನ್​ ಗೂ ಸೋಂಕು ಕಾಣಿಸಿಕೊಂಡಿದೆ.

ದೇಶದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕಾಯುಗುತ್ತದೆ. ಬ್ರಿಟನ್​ನಲ್ಲಿ ನಿನ್ನೆಯಷ್ಟೇ ಒಮಿಕ್ರಾನಸಸ ಸೋಂಕಿತ ರೋಗಿ ಮೃತಪಟ್ಟಿರುವುದರ ಬಗ್ಗೆ ಯುಕೆ ಸರ್ಕಾರ ಖಚಿತಪಡಿಸಿದೆ. ಈ ಹಿನ್ನೆಯಲ್ಲಿದೆ ಭಾರತದಲ್ಲೂ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳವ ಸಾಧ್ಯತೆ ಇದೆ. ಇನ್ನೂ ಹೊಸ ವರ್ಷದ ಆಚರಣೆಗೂ ಬ್ರೇಕ್​ ಬೀಳುವ ಸಾದ್ಯತೆ ಇದೆ. ಇಷ್ಟು ದಿನ ಇಳಿಮುಖವಾಗಿದ್ದ ಕೊರೋನಾ ಇದೀಗ ಮತ್ತೆ ಗಣನೀಯವಾಗಿ ಹೆಚ್ಚುತ್ತಿದೆ.

ಇದನ್ನೂ ಓದಿ: 

ಪಾರ್ಟಿಗೆ ತೆರಳಿ ಮೋಜು ಮಸ್ತಿ ಮಾಡಿದ ಕರೀನಾ ಕಪೂರ್​ಗೆ ಕೊರೊನಾ ಪಾಸಿಟಿವ್​; ಹೆಚ್ಚಿತು ಆತಂಕ

Published On - 10:47 am, Tue, 14 December 21

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ