AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕರೀನಾ ಕಪೂರ್​ ಸಂಪರ್ಕದಲ್ಲಿದ್ದ ಮೂವರಿಗೆ ಕೊರೋನಾ ಸೋಂಕು

ಕರೀನಾ ಸಂಪರ್ಕದಲ್ಲಿದ್ದ ಅಮೃತಾ ಅರೋರಾ ಅವರಿಗೆ ಡಿ. 11ರಂದು ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಮಹೀಪ್ ಕಪೂರ್​ ಹಾಗೂ ಸೀಮಾ ಖಾನ್​ಗೆ ಇದೀಗ ಸೋಂಕು ದೃಢಪಟ್ಟಿದೆ.

ನಟಿ ಕರೀನಾ ಕಪೂರ್​ ಸಂಪರ್ಕದಲ್ಲಿದ್ದ ಮೂವರಿಗೆ ಕೊರೋನಾ ಸೋಂಕು
ಕರೀನಾ ಮತ್ತು ಅಮೃತಾ ಅರೋರಾ
TV9 Web
| Edited By: |

Updated on:Dec 14, 2021 | 11:09 AM

Share

ಬಾಲಿವುಡ್​ ನಟಿ ಕರೀನಾ ಕಪೂರ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಬಳಿಕ ಅವರ ಸಂಪರ್ಕದಲ್ಲಿದ್ದ ಮೂವರಿಗೆ ಕೊರೋನಾ ಪಾಸಿಟಿವ್​ ಬಂದಿದೆ. ಕರೀನಾ ಸಂಪರ್ಕದಲ್ಲಿದ್ದ ಅಮೃತಾ ಅರೋರಾ ಅವರಿಗೆ ಡಿ. 11ರಂದು ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಮಹೀಪ್ ಕಪೂರ್​ ಹಾಗೂ ಸೀಮಾ ಖಾನ್​ಗೆ  ಸೋಂಕು ದೃಢಪಟ್ಟಿದೆಮೊನ್ನೆ (ಡಿ.11)  ನಟಿ ಕರೀನಾ ಅವರಿಗೆ ಕೊರೋನಾ ದೃಢಪಟ್ಟ ಹಿನ್ನಲೆಯಲ್ಲಿ ಅವರ ಮನೆಯನ್ನು ಮುಂಬೈ ಬಿಎಂಸಿ ಸೀಲ್ ಡೌನ್​ ಮಾಡಿತ್ತು. ಜತೆಗೆ ಅವರನ್ನು ಹೋಮ್​ ಐಸೋಲೇಷನ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕರೀನಾ ಅವರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ಎಲ್ಲರನ್ನೂ ಕೋವಿಡ್​ ತಪಾಸಣೆಗೆ ಒಳಪಡಿಸಲಾಗಿತ್ತು ಈ ವೇಳೇ ಅಮೃತಾ ಅರೋರಾ, ಮಹೀಪ್ ಕಪೂರ್​ ಹಾಗೂ ಸೀಮಾ ಖಾನ್​ಗೆ ಕೊರೋನಾ ಪಾಸಿಟಿವ್​ ಬಂದಿದೆಆಭರಣ ವಿನ್ಯಾಸಗಾರ್ತಿಯಾಗಿರುವ ಮಹೀಪ್ ಕಪೂರ್ ನಟ ಸಂಜಯ್​ ಕಪೂರ್​ ಅವರ ಪತ್ನಿ. ಇನ್ನು ಸೀಮಾ ಖಾನ್​ ಅವರು ಪ್ಯಾಷನ್​ ಡಿಸೈನರ್​ ಆಗಿದ್ದು ಸೊಹಿಲ್​ ಖಾನ್​ ಅವರನ್ನು ವಿವಾಹವಾಗಿದ್ದಾರೆ. ಈ ಮೂವರೂ ಕರೀನಾ ಅವರ ಸ್ನೇಹಿತೆಯರಾಗಿದ್ದಾರೆ.

ಕೆಲವು ದಿನಗಳ ಹಿಂದೆ ಕರೀನಾ ಕಪೂರ್​, ಅಮೃತಾ ಅರೋರಾ ಸೇರಿದಂತೆ ಹಲವು ಬಾಲಿವುಡ್​ ತಾರೆಯರು ಕರಣ್​ ಜೊಹರ್​ ಅವರು ಆಯೋಜಿಸಿದ್ದ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಪಾರ್ಟಿಯಲ್ಲಿ ಕೋವಿಡ್​ ನಿಯಮಗಳನ್ನು ಗಾಳಿಗೆ ತೂರಿದ್ದರು. ಬಳಿಕ ಕರೀನಾ ಕಪೂರ್​ ಅಮೃತಾ ಅರೋರಾ ಅವರಿಗೆ ಡಿ.11ರಂದು ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಘಿ ಅವರನ್ನು ಹೋಮ್​ ಐಸೋಲೇಷನ್​ನಲ್ಲಿ ಇರಸಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಬೃಹತ್​ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಅಧಿಕೃತವಾಗಿ  ಮಾಹಿತಿ ನೀಡಿತ್ತು. ಇದೀಗ ನಟಿ ಕರೀನಾ ಸಂಪರ್ಕದಲ್ಲಿದ್ದ  ಮಹೀಪ್ ಕಪೂರ್​ ಹಾಗೂ ಸೀಮಾ ಖಾನ್​ ಗೂ ಸೋಂಕು ಕಾಣಿಸಿಕೊಂಡಿದೆ.

ದೇಶದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕಾಯುಗುತ್ತದೆ. ಬ್ರಿಟನ್​ನಲ್ಲಿ ನಿನ್ನೆಯಷ್ಟೇ ಒಮಿಕ್ರಾನಸಸ ಸೋಂಕಿತ ರೋಗಿ ಮೃತಪಟ್ಟಿರುವುದರ ಬಗ್ಗೆ ಯುಕೆ ಸರ್ಕಾರ ಖಚಿತಪಡಿಸಿದೆ. ಈ ಹಿನ್ನೆಯಲ್ಲಿದೆ ಭಾರತದಲ್ಲೂ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳವ ಸಾಧ್ಯತೆ ಇದೆ. ಇನ್ನೂ ಹೊಸ ವರ್ಷದ ಆಚರಣೆಗೂ ಬ್ರೇಕ್​ ಬೀಳುವ ಸಾದ್ಯತೆ ಇದೆ. ಇಷ್ಟು ದಿನ ಇಳಿಮುಖವಾಗಿದ್ದ ಕೊರೋನಾ ಇದೀಗ ಮತ್ತೆ ಗಣನೀಯವಾಗಿ ಹೆಚ್ಚುತ್ತಿದೆ.

ಇದನ್ನೂ ಓದಿ: 

ಪಾರ್ಟಿಗೆ ತೆರಳಿ ಮೋಜು ಮಸ್ತಿ ಮಾಡಿದ ಕರೀನಾ ಕಪೂರ್​ಗೆ ಕೊರೊನಾ ಪಾಸಿಟಿವ್​; ಹೆಚ್ಚಿತು ಆತಂಕ

Published On - 10:47 am, Tue, 14 December 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ