AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಪ್ರವೇಶ ಪತ್ರದ ಮೇಲೆ ಐಶ್ವರ್ಯಾ ರೈ ಭಾವಚಿತ್ರ; ಫೋಟೋ ಕಂಡು ವಿದ್ಯಾರ್ಥಿನಿ ಶಾಕ್  

ಪರೀಕ್ಷೆ ಸಮೀಪಿಸಿದ್ದರಿಂದ ಹಾಲ್​ಟಿಕೆಟ್ ತರಲು ವಿಶ್ವವಿದ್ಯಾನಿಲಯಕ್ಕೆ ಹೋಗಿದ್ದರು. ವಿವಿಯವರು ನೀಡಿದ ಪರೀಕ್ಷಾ ಪ್ರವೇಶಪತ್ರ ನೋಡಿ ವಿದ್ಯಾರ್ಥಿನಿ ಶಾಕ್​ಗೆ ಒಳಗಾಗಿದ್ದಾರೆ.

ಪರೀಕ್ಷಾ ಪ್ರವೇಶ ಪತ್ರದ ಮೇಲೆ ಐಶ್ವರ್ಯಾ ರೈ ಭಾವಚಿತ್ರ; ಫೋಟೋ ಕಂಡು ವಿದ್ಯಾರ್ಥಿನಿ ಶಾಕ್  
ಐಶ್ವರ್ಯಾ ರೈ
TV9 Web
| Edited By: |

Updated on:Oct 11, 2022 | 2:57 PM

Share

ಪ್ರವೇಶ ಪತ್ರ, ಮಾರ್ಕ್ಸ್ ಕಾರ್ಡ್ ಮೇಲೆ ನಟ-ನಟಿಯರ ಫೋಟೋ ಪ್ರಿಂಟ್​ ಆಗಿ ಅದ್ವಾನ ಆಗೋದು ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಈ ಮೊದಲು ಅನೇಕ ಕಡೆಗಳಲ್ಲಿ ಈ ರೀತಿಯ ತೊಂದರೆಗಳು ಉಂಟಾದ ಉದಾಹರಣೆ ಇದೆ. ಈಗ ಮತ್ತದೇ ಘಟನೆ ಮರುಕಳಿಸಿದೆ. ಸ್ನಾತಕೋತ್ತರ ಪದವಿ ವಿದ್ಯಾರ್ಥಿಯೊಬ್ಬಳ ಪರೀಕ್ಷಾ ಪ್ರವೇಶ ಪತ್ರದಲ್ಲಿ ಬಾಲಿವುಡ್​ ನಟಿ ಐಶ್ವರ್ಯಾ ರೈ (Aishwarya Rai) ಫೋಟೋ ಇತ್ತು. ಈ ಪರೀಕ್ಷಾ ಹಾಲ್​ಟಿಕೆಟ್​ ಸೋಶಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದೆ. ಈ ಕೆಲಸದ ಹಿಂದೆ ಯಾರ ಕೈವಾಡ ಇದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಬಿಹಾರದ ಕೊಯಲಾಂಚಲ್ ವಿಶ್ವವಿದ್ಯಾನಿಲಯದ ಕಾಜಲ್ ಕುಮಾರಿ ಅವರು ಉನ್ನತ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಪರೀಕ್ಷೆ ಸಮೀಪಿಸಿದ್ದರಿಂದ ಹಾಲ್​ಟಿಕೆಟ್ ತರಲು ವಿಶ್ವವಿದ್ಯಾನಿಲಯಕ್ಕೆ ಹೋಗಿದ್ದರು. ವಿವಿಯವರು ನೀಡಿದ ಪರೀಕ್ಷಾ ಪ್ರವೇಶಪತ್ರ ನೋಡಿ ವಿದ್ಯಾರ್ಥಿನಿ ಶಾಕ್​ಗೆ ಒಳಗಾಗಿದ್ದಾರೆ. ಪರಿಹಾರ ನೀಡುವಂತೆ ವಿವಿ ಕುಲಪತಿ ಎಸ್​​ಕೆ ಬಾರನ್ವಾಲ್​ ಬಳಿ ಕೋರಿದ್ದಾರೆ.

ಈ ಕೆಲಸವನ್ನು ವಿಶ್ವವಿದ್ಯಾನಿಲಯದವರು ಮಾಡಿಲ್ಲ ಎಂದು ಎಸ್​ಕೆ ಬಾರನ್ವಾಲ್​ ಸ್ಪಷ್ಟಪಡಿಸಿದ್ದಾರೆ. ‘ವಿವಿಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಯಾರೋ ಈ ರೀತಿ ಮಾಡಿದ್ದಾರೆ. ವಿದ್ಯಾರ್ಥಿನಿ ನೀಡಿದ ಮಾಹಿತಿ ಆಧರಿಸಿ ನಾವು ಅಡ್ಮಿಟ್ ಕಾರ್ಡ್ ನೀಡಿದ್ದೇವೆ. ತಾಂತ್ರಿಕ ದೋಷದಿಂದ ಈ ರೀತಿ ಆಗಿರಬಹುದು’ ಎಂದು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಸದ್ಯ ವೈರಲ್ ಆಗುತ್ತಿರುವ ಫೋಟೋಗೆ ವಿವಿಧ ರೀತಿಯಲ್ಲಿ ಕಮೆಂಟ್​ಗಳು ಬರುತ್ತಿವೆ. ಅನೇಕರು ನಾನಾ ರೀತಿಯಲ್ಲಿ ಟೀಕೆ ಮಾಡುತ್ತಿದ್ದಾರೆ. ‘ಐಶ್ವರ್ಯಾ ರೈ ಫೋಟೋ ಇದೆ. ಹೀಗಾಗಿ, ಅವರೇ ಬಂದು ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ಬರಬಹುದು’ ಎಂದು ಕೆಲವರು ಟೀಕಿಸಿದ್ದಾರೆ.

ಇದನ್ನೂ ಓದಿ: Anupama Gowda: ಬಿಗ್ ಬಾಸ್ ಮನೆಯಲ್ಲಿ ಮಿಂಚಿದ ಅನುಪಮಾ ಗೌಡ

ಸಿನಿಮಾ ವಿಚಾರಕ್ಕೆ ಬರೋದಾದರೆ ಐಶ್ವರ್ಯಾ ರೈ ಅವರು ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಅವರು ತುಂಬಾನೇ ಯೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ಅವರ ನಟನೆಯ ತಮಿಳಿನ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡಿದೆ. ಮಣಿರತ್ನಂ ನಿರ್ದೇಶನದ ಈ ಸಿನಿಮಾದಿಂದ ಐಶ್ವರ್ಯಾ ದೊಡ್ಡ ಮಟ್ಟದ ಗೆಲುವು ಕಂಡರು.

Published On - 2:50 pm, Tue, 11 October 22

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!