Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Shetty: ಭಕ್ತಿಯಿಂದ ಭೂತಕೋಲ ವೀಕ್ಷಿಸಿದ ಅನುಷ್ಕಾ ಶೆಟ್ಟಿ; ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ವೈರಲ್​

Anushka Shetty | Buta Kola: ಭೂತಕೋಲ ನಡೆಯುವ ವೇಳೆ ಅನುಷ್ಕಾ ಶೆಟ್ಟಿ ಅವರು ಭಕ್ತಿ ಭಾವದಿಂದ ವೀಕ್ಷಿಸಿದ್ದಾರೆ. ದೈವ ನರ್ತನವನ್ನು ತಮ್ಮ ಮೊಬೈಲ್​ನಲ್ಲಿ ಚಿತ್ರಿಸಿಕೊಂಡಿದ್ದಾರೆ.

Anushka Shetty: ಭಕ್ತಿಯಿಂದ ಭೂತಕೋಲ ವೀಕ್ಷಿಸಿದ ಅನುಷ್ಕಾ ಶೆಟ್ಟಿ; ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ವೈರಲ್​
ಭೂತ ಕೋಲ, ಅನುಷ್ಕಾ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on:Dec 19, 2022 | 4:48 PM

ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ದೇಶಾದ್ಯಂತ ಪ್ರಸಿದ್ಧಿ ಹೊಂದಿದ್ದಾರೆ. ಟಾಲಿವುಡ್​ ಸಿನಿಮಾಗಳ ಮೂಲಕ ಅವರು ದೊಡ್ಡ ಅಭಿಮಾನಿ ಬಳಗ ಸಂಪಾದಿಸಿದ್ದಾರೆ. ಎಷ್ಟೇ ಜನಪ್ರಿಯತೆ, ಯಶಸ್ಸು ಸಿಕ್ಕರೂ ಅವರು ತಮ್ಮ ಮೂಲ ಸಂಸ್ಕೃತಿಯನ್ನು ಮರೆತಿಲ್ಲ. ಕನ್ನಡದ ಬಗ್ಗೆ, ಕರುನಾಡಿನ ಆಚಾರ ವಿಚಾರಗಳ ಬಗ್ಗೆ ಅವರಿಗೆ ಗೌರವ ಇದೆ. ಮೂಲತಃ ತುಳುನಾಡಿನವರಾದ ಅನುಷ್ಕಾ ಶೆಟ್ಟಿ ಅವರು ಪ್ರತಿ ವರ್ಷ ತಮ್ಮ ಕುಟುಂಬದವರ ಜೊತೆ ಸೇರಿ ಭೂತಕೋಲದಲ್ಲಿ (Bhoota Kola) ಭಾಗಿ ಆಗುತ್ತಾರೆ. ಈ ಬಾರಿ ಕೂಡ ಅವರು ಭೂತಕೋಲದಲ್ಲಿ ಪಾಲ್ಗೊಂಡಿದ್ದಾರೆ. ಅದರ ವಿಡಿಯೋ ವೈರಲ್​ (Anushka Shetty Viral Video) ಆಗಿದೆ. ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿ ಭೂತಕೋಲದ ಬಗ್ಗೆ ವಿವರವಾಗಿ ತೋರಿಸಲಾಗಿದೆ. ರಿಷಬ್​ ಶೆಟ್ಟಿ ನಟನೆ, ನಿರ್ದೇಶನದ ಈ ಚಿತ್ರ ಸೂಪರ್​ ಹಿಟ್​ ಆಗಿದೆ. ಆ ಮೂಲಕ ಇಡೀ ದೇಶದ ಜನರಿಗೆ ಭೂತಕೋಲ ಪರಿಚಯ ಆದಂತಾಗಿದೆ. ಈ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಜನರಲ್ಲಿ ಕುತೂಹಲ ಹೆಚ್ಚಿದೆ. ತುಳುನಾಡಿನ ಮಂದಿಗೆ ದೈವಾರಾಧನೆಯಲ್ಲಿ ಅಪಾರ ಶ್ರದ್ಧೆ ಇದೆ. ಅನುಷ್ಕಾ ಶೆಟ್ಟಿ ಕೂಡ ಇದರಲ್ಲಿ ನಂಬಿಕೆ ಇಟ್ಟಿದ್ದಾರೆ.

ಇದನ್ನೂ ಓದಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Anushka Shetty: ಚಿತ್ರರಂಗದಲ್ಲಿ 17 ವರ್ಷ ಪೂರೈಸಿದ ಅನುಷ್ಕಾ ಶೆಟ್ಟಿ; ಕನ್ನಡತಿಯ ಸಾಧನೆಗೆ ಪರಭಾಷೆ ಮಂದಿ ಸೆಲೆಬ್ರೇಷನ್​
Image
‘ಅರುಂಧತಿ’ ಚಿತ್ರಕ್ಕೆ 13 ವರ್ಷ; ಬಿಗ್​ ಹಿಟ್​ ಸಿಗಲು ಕಾರಣರಾದ ಎಲ್ಲರನ್ನೂ ನೆನಪಿಸಿಕೊಂಡ ಅನುಷ್ಕಾ ಶೆಟ್ಟಿ
Image
ಮತ್ತೆ ನಾಗವಲ್ಲಿ ಆಗ್ತಾರಾ ಅನುಷ್ಕಾ ಶೆಟ್ಟಿ? ಬಹುನಿರೀಕ್ಷಿತ ಚಿತ್ರದ ಬಗ್ಗೆ ಕೇಳಿಬರ್ತಿದೆ ಗುಸುಗುಸು

ಇದನ್ನೂ ಓದಿ: Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ

ಭೂತಕೋಲ ನಡೆಯುವ ವೇಳೆ ಅನುಷ್ಕಾ ಶೆಟ್ಟಿ ಅವರು ಭಕ್ತಿ ಭಾವದಿಂದ ವೀಕ್ಷಿಸಿದ್ದಾರೆ. ದೈವ ನರ್ತನವನ್ನು ತಮ್ಮ ಮೊಬೈಲ್​ನಲ್ಲಿ ಚಿತ್ರಿಸಿಕೊಂಡಿದ್ದಾರೆ. ಈ ಕ್ಷಣದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದು, ಅನುಷ್ಕಾ ಶೆಟ್ಟಿಗೆ ದೇವರು ಒಳ್ಳೆಯದು ಮಾಡಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಈ ಸ್ಟಾರ್​ ಕಲಾವಿದೆಯ ಮುಂದಿನ ಸಿನಿಮಾಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: Anushka Shetty: ಚಿತ್ರರಂಗದಲ್ಲಿ 17 ವರ್ಷ ಪೂರೈಸಿದ ಅನುಷ್ಕಾ ಶೆಟ್ಟಿ; ಕನ್ನಡತಿಯ ಸಾಧನೆಗೆ ಪರಭಾಷೆ ಮಂದಿ ಸೆಲೆಬ್ರೇಷನ್​

‘ಬಾಹುಬಲಿ’ ಸಿನಿಮಾದ ನಂತರ ಅನುಷ್ಕಾ ಶೆಟ್ಟಿ ಅವರಿಗೆ ದೊಡ್ಡ ಗೆಲುವು ಸಿಕ್ಕಿಲ್ಲ. ಮಾಧವನ್​ ಜೊತೆ ಅಭಿನಯಿಸಿದ ‘ನಿಶಬ್ದಂ’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಜನಮನ ಗೆಲ್ಲಲಿಲ್ಲ. ಈಗ ಅವರು ನವೀನ್​ ಪೊಲಿಶೆಟ್ಟಿ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ವರ್ಷ ಅವರ ಬರ್ತ್​ಡೇ ಪ್ರಯುಕ್ತ ಈ ಸಿನಿಮಾದ ಫಸ್ಟ್​ ಲುಕ್ ಬಿಡುಗಡೆ ಆಗಿತ್ತು. ಇನ್ನೂ ಹೆಸರಿಡದ ಈ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಅವರು ಮಾಸ್ಟರ್​ ಶೆಫ್​ ಪಾತ್ರ ಮಾಡುತ್ತಿದ್ದಾರೆ.

ಅನುಷ್ಕಾ ಶೆಟ್ಟಿ ಅವರ ಮದುವೆ ಯಾವಾಗ ಎಂಬ ಪ್ರಶ್ನೆ ಅಭಿಮಾನಿಗಳ ತಲೆಯಲ್ಲಿ ಕೊರೆಯುತ್ತಿದೆ. ಅದಕ್ಕೆ ಸದ್ಯಕ್ಕಂತೂ ಉತ್ತರ ಸಿಕ್ಕಿಲ್ಲ. ಈ ಕುರಿತು ಆಗಾಗ ಗಾಸಿಪ್​ ಹಬ್ಬುತ್ತಲೇ ಇರುತ್ತದೆ. ಆದರೆ ಅದರ ಬಗ್ಗೆ ಅನುಷ್ಕಾ ತಲೆ ಕೆಡಿಸಿಕೊಂಡಿಲ್ಲ. ಸದ್ಯ ಅವರು ಸಿನಿಮಾ ಕೆಲಸಗಳತ್ತ ಗಮನ ಹರಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:48 pm, Mon, 19 December 22

ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
ಜಲ್ಲಿಕಟ್ಟು ಸ್ಪರ್ಧೆ ವೇಳೆ ಮೇಲೆರಗಿದ ಗೂಳಿ: 30ಕ್ಕೂ ಹೆಚ್ಚು ಜನಕ್ಕೆ ಗಾಯ
ಜಲ್ಲಿಕಟ್ಟು ಸ್ಪರ್ಧೆ ವೇಳೆ ಮೇಲೆರಗಿದ ಗೂಳಿ: 30ಕ್ಕೂ ಹೆಚ್ಚು ಜನಕ್ಕೆ ಗಾಯ
ಶಾಮೀಲಾಗಿರುವ ಸಚಿವರ ಹೆಸರುಗಳು ಸಿಎಂಗೆ ಮೊದಲು ಗೊತ್ತಾಗುತ್ತದೆ: ವಿಜಯೇಂದ್ರ
ಶಾಮೀಲಾಗಿರುವ ಸಚಿವರ ಹೆಸರುಗಳು ಸಿಎಂಗೆ ಮೊದಲು ಗೊತ್ತಾಗುತ್ತದೆ: ವಿಜಯೇಂದ್ರ
ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ
ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ
ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್
ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ
ರನ್ಯಾಗೆ ಯಾಕೆ ಪ್ರೊಟೋಕಾಲ್ ವಿಸ್ತರಿಸಲಾಗುತ್ತಿದೆ: ಸುನೀಲ ಕುಮಾರ
ರನ್ಯಾಗೆ ಯಾಕೆ ಪ್ರೊಟೋಕಾಲ್ ವಿಸ್ತರಿಸಲಾಗುತ್ತಿದೆ: ಸುನೀಲ ಕುಮಾರ