AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಿ ಮುಖರ್ಜಿ ಅಜ್ಜಿ ಆರತಿ ರಾಯ್ ನಿಧನ; ಸಂತಾಪ ಸೂಚಿಸಿದ ಬೆಂಗಾಲಿ ಚಿತ್ರರಂಗ

ದೇಬಶ್ರೀ ಅವರು ಬೆಂಗಾಲಿ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಸಾಕಷ್ಟು ಪ್ರಶಸ್ತಿಗಳು ಲಭಿಸಿವೆ. ದೇಬಶ್ರೀ ಈ ಮಟ್ಟಕ್ಕೆ ಬೆಳೆಯಲು ಅವರ ತಾಯಿಯೇ ಕಾರಣವಂತೆ.

ರಾಣಿ ಮುಖರ್ಜಿ ಅಜ್ಜಿ ಆರತಿ ರಾಯ್ ನಿಧನ; ಸಂತಾಪ ಸೂಚಿಸಿದ ಬೆಂಗಾಲಿ ಚಿತ್ರರಂಗ
ರಾಣಿ ಮುಕರ್ಜಿ-ಆರತಿ
TV9 Web
| Edited By: |

Updated on: Nov 09, 2022 | 5:34 PM

Share

ರಾಣಿ ಮುಖರ್ಜಿ(Rani Mukerji) ಅವರ ಅಜ್ಜಿ, ಖ್ಯಾತ ಬೆಂಗಾಲಿ ನಟಿ ದೇಬಶ್ರೀ ಅವರ ತಾಯಿ ಆರತಿ ರಾಯ್ (Arati Roy) ಅವರು ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರತಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಮಂಗಳವಾರ (ನವೆಂಬರ್ 8) ಅವರು ನಿಧನ ಹೊಂದಿದ್ದಾರೆ. ಕೆಲ ತಿಂಗಳಿಂದ ಆರತಿ ತಮ್ಮ ಹಿರಿಯ ಮಗಳ ಜತೆ ವಾಸ ಮಾಡುತ್ತಿದ್ದರು.

ದೇಬಶ್ರೀ ಅವರು ಬೆಂಗಾಲಿ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಸಾಕಷ್ಟು ಪ್ರಶಸ್ತಿಗಳು ಲಭಿಸಿವೆ. ದೇಬಶ್ರೀ ಈ ಮಟ್ಟಕ್ಕೆ ಬೆಳೆಯಲು ಅವರ ತಾಯಿಯೇ ಕಾರಣವಂತೆ. ಈ ವಿಚಾರವನ್ನು ದೇಬಶ್ರೀ ಅನೇಕ ಬಾರಿ ಹೇಳಿಕೊಂಡಿದ್ದಿದೆ. ಪ್ರತಿ ಹಂತದಲ್ಲೂ ಅವರು ತಾಯಿಗೆ ಧನ್ಯವಾದ ಹೇಳುತ್ತಲೇ ಬಂದಿದ್ದಾರೆ.

‘ನಾನು ನನ್ನ ತಾಯಿಯಿಂದ ನಟಿಯಾದೆ. ಅವರು ನನ್ನನ್ನು ನಟಿ ಮಾಡಲು ಸಾಕಷ್ಟು ಶ್ರಮಿಸಿದರು. ಅವರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಉಸಿರು ಹೋಗುವ ಸಂದರ್ಭದಲ್ಲಿ ಮೂವರು ಹೆಣ್ಣು ಮಕ್ಕಳು ಅವರ ಪಕ್ಕದಲ್ಲೇ ಇದ್ದರು. ಅವರು ಸಾಯುವಾಗಲೂ ಖುಷಿಯಿಂದ ಇದ್ದರು’ ಎಂದಿದ್ದಾರೆ ದೇಬಶ್ರೀ.

ಈ ವರ್ಷ ಆಗಸ್ಟ್​ ತಿಂಗಳಲ್ಲಿ ಆರತಿ ಅವರು ಮನೆಯಲ್ಲಿ ನಡೆಯುವಾಗ ಆಯತಪ್ಪಿ ಬಿದ್ದಿದ್ದರು. ಈ ವೇಳೆ ಅವರಿಗೆ ಗಂಭೀರ ಗಾಯಗಳಾಗಿತ್ತು. ರಕ್ತಸ್ರಾವ ಆಗಿ ಅವರು ಮೂರ್ಚೆ ತಪ್ಪಿದ್ದರು. ವಯೋ ಸಹಜ ಕಾಯಿಲೆಗಳು ಇದ್ದಿದ್ದರಿಂದ ಚೇತರಿಸಿಕೊಳ್ಳೋದು ಆರತಿಗೆ ಕಷ್ಟವಾಗಿತ್ತು. ಇಲ್ಲಿಯವರೆಗೂ ಅವರು ಚಿಕಿತ್ಸೆ ಪಡೆಯುತ್ತಲೇ ಇದ್ದರು. ಈಗ ಅವರು ಕೊನೆಯುಸಿರು ಎಳೆದಿದ್ದಾರೆ. ದೇಬಶ್ರೀ ಅವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಬೆಂಗಾಲಿ ಚಿತ್ರರಂಗದವರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ವೇದಿಕೆ ಮೇಲೆ ರಾಣಿ ಮುಖರ್ಜಿಗೆ ಟೊಮ್ಯಾಟೋ ರೇಟ್​ ಕೇಳಿದ ಮಹಿಳೆಯರು; ಉತ್ತರ ಹೇಳಲು ತಡವರಿಸಿದ ನಟಿ

ಆರತಿ ರಾಯ್ ಅವರು ರಾಣಿ ಮುಖರ್ಜಿಯ ಅಜ್ಜಿ. ರಾಣಿ ಮುಖರ್ಜಿಯ ತಾಯಿ ಕೃಷ್ಣಾ ಮುಖರ್ಜಿ ಹಾಗೂ ದೇಬಶ್ರೀ ಸಹೋದರಿಯರು. ರಾಣಿ ಮುಖರ್ಜಿ ಅವರಿಗೆ ಅನಾರೋಗ್ಯ ಕಾಡಿದೆ ಎನ್ನಲಾಗಿದೆ. ಈ ಕಾರಣಕ್ಕೆ ಅವರು ಆರತಿ ಅಂತ್ಯಸಂಸ್ಕಾರದಲ್ಲಿ ಭಾಗಿ ಆಗುತ್ತಿಲ್ಲ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್