AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Singh: ತೌಕ್ತೆ ಚಂಡಮಾರುತದಿಂದ ನೆಲಕ್ಕುರುಳಿದ ಮರದ ಮೇಲೆ ಫೋಟೋಶೂಟ್, ಡ್ಯಾನ್ಸ್​​​; ಟ್ರೋಲ್​ ಆದ ಕಿರುತೆರೆ ನಟಿ

Deepika Singh Photoshoot: ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಥ್ರಿಲ್​ ಆಗಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಫಿದಾ ಆಗುತ್ತಾರೆ ಎಂಬುದು ದೀಪಿಕಾ ಅವರ ಆಲೋಚನೆ ಆಗಿತ್ತೇನೋ. ಆದರೆ, ಅಲ್ಲಿ ಆಗಿದ್ದೇ ಬೇರೆ.

Deepika Singh: ತೌಕ್ತೆ ಚಂಡಮಾರುತದಿಂದ ನೆಲಕ್ಕುರುಳಿದ ಮರದ ಮೇಲೆ ಫೋಟೋಶೂಟ್, ಡ್ಯಾನ್ಸ್​​​; ಟ್ರೋಲ್​ ಆದ ಕಿರುತೆರೆ ನಟಿ
ದೀಪಿಕಾ ಸಿಂಗ್​
ರಾಜೇಶ್ ದುಗ್ಗುಮನೆ
| Edited By: |

Updated on:May 22, 2021 | 9:48 AM

Share

ತೌಕ್ತೆ ಚಂಡಮಾರುತದ ಅಬ್ಬರ ಭಾರತದಲ್ಲಿ ಜೋರಾಗಿತ್ತು. ಈ ಚಂಡಮಾರುತದಿಂದ ಆದ ಅವಘಡಗಳು ಒಂದೆರಡಲ್ಲ. ಚಂಡಮಾರುತದ ಅಬ್ಬರಕ್ಕೆ ದೇಶದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಅನೇಕರು ಮೃತಪಟ್ಟಿದ್ದಾರೆ ಕೂಡ. ಮಹಾರಾಷ್ಟ್ರದಲ್ಲೂ ಈ ಚಂಡಮಾರುತದ ಅಬ್ಬರ ಜೋರಾಗಿಯೇ ಇತ್ತು. ಈ ವೇಳೆ, ಹಿಂದಿ ಕಿರುತೆರೆ ನಟಿ ದೀಪಿಕಾ ಸಿಂಗ್ ಡ್ಯಾನ್ಸ್​ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಮಹಾರಾಷ್ಟ್ರದಲ್ಲಿ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಮರಗಳು ಮುರಿದು ಬಿದ್ದಿವೆ. ದೀಪಿಕಾ ಸಿಂಗ್​ ಮನೆಯ ಸಮೀಪವೂ ಮರವೊಂದು ಮುರಿದು ಬಿದ್ದಿತ್ತು. ಈ ವೇಳೆ ಅವರು ಅಲ್ಲಿಗೆ ತೆರಳಿ ಡ್ಯಾನ್ಸ್​ ಮಾಡಿದ್ದಾರೆ. ಅಷ್ಟೇ ಅಲ್ಲ, ಬಿದ್ದ ಮರದ ಎದುರು ನಿಂತು ಫೋಟೋಶೂಟ್​ ಮಾಡಿಸಿ ಸಂಭ್ರಮಿಸಿದ್ದಾರೆ.

ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಥ್ರಿಲ್​ ಆಗಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಫಿದಾ ಆಗುತ್ತಾರೆ ಎಂಬುದು ದೀಪಿಕಾ ಅವರ ಆಲೋಚನೆ ಆಗಿತ್ತೇನೋ. ಆದರೆ, ಅಲ್ಲಿ ಆಗಿದ್ದೇ ಬೇರೆ. ನಟಿಗೆ ಎಲ್ಲರೂ ಬಾಯಿಗೆ ಬಂದಂತೆ ಬೈದಿದ್ದಾರೆ.

ಕೊವಿಡ್​ ಎರಡನೇ ಅಲೆ ಜೋರಾಗಿದೆ. ಇದರ ಜತೆಗೆ ತೌಕ್ತೆ ಚಂಡಮಾರುತದ ಎಫೆಕ್ಟ್​ ಜೋರಾಗಿದೆ. ಹೀಗಿರುವಾಗ ಬಿದ್ದ ಮರವನ್ನು ಹಿಡಿದುಕೊಂಡು ಪೋಸ್​​ ನೀಡೋದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ನನ್ನ ಜೊತೆ ಮಲಗಿದ್ರೆ ಏನು ಬೇಕಾದರೂ ಕೊಡುತ್ತೇನೆ; ಪ್ರಾಧ್ಯಾಪಕನಿಂದ ಬಂದ ಆಹ್ವಾನ ಕೇಳಿ ನಟಿ ಶಾಕ್​

Radhika Apte: ನಗ್ನ ವಿಡಿಯೋ ಲೀಕ್​; 4 ದಿನ ಮನೆಯಿಂದ ಹೊರಬಂದಿರಲಿಲ್ಲ ನಟಿ ರಾಧಿಕಾ ಆಪ್ಟೆ

Published On - 7:23 am, Sat, 22 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್