AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಪ್ರಯಾಣಿಸುವಾಗ ದಿವ್ಯಾ ಪ್ರಭಾಗೆ ಕಿರುಕುಳ; ದೂರು ನೀಡಿದ ನಟಿ

‘ನಿಜಕ್ಕೂ ಡಿಸ್ಟರ್ಬಿಂಗ್ ಆಗುವಂಥ ಘಟನೆ’ ಎಂದು ಅವರು ಬರೆದುಕೊಂಡಿದ್ದಾರೆ. ವ್ಯಕ್ತಿಯೋರ್ವ ಇವರ ಸೀಟ್​ನಲ್ಲಿ ಕುಳಿತಿದ್ದರು. ಅಷ್ಟೇ ಅಲ್ಲ, ಕೆಟ್ಟದಾಗಿ ನಡೆದುಕೊಂಡಿದ್ದರು ಮತ್ತು ಅವರನ್ನು ಮುಟ್ಟುವ ಪ್ರಯತ್ನವನ್ನು ಸಹ ಪ್ರಯಾಣಿಕ ಮಾಡಿದ್ದ. ಈ ಅನುಚಿತ ವರ್ತನೆಯಿಂದ ದಿವ್ಯಾಗೆ ಸಿಟ್ಟು ಬಂದಿದೆ.  

ವಿಮಾನದಲ್ಲಿ ಪ್ರಯಾಣಿಸುವಾಗ ದಿವ್ಯಾ ಪ್ರಭಾಗೆ ಕಿರುಕುಳ; ದೂರು ನೀಡಿದ ನಟಿ
ದಿವ್ಯಾ ಪ್ರಭಾ
ರಾಜೇಶ್ ದುಗ್ಗುಮನೆ
|

Updated on: Oct 11, 2023 | 2:35 PM

Share

ಮಲಯಾಳಂ ನಟಿ ದಿವ್ಯಾ ಪ್ರಭಾ (Divya Prabha) ಅವರಿಗೆ ಕಹಿ ಅನುಭವ ಆಗಿದೆ. ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಹ ಪ್ರಯಾಣಿಕನಿಂದ ಕಿರುಕುಳಕ್ಕೆ ಒಳಗಾಗಿದ್ದಾರೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ದಿವ್ಯಾ ಪ್ರಭಾ ಅವರು ಮುಂಬೈನಿಂದ ಕೊಚ್ಚಿಗೆ ಹೊರಟಿದ್ದರು. ಈ ವೇಳ ಘಟನೆ ಸಂಭವಿಸಿದೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿದೆ.

‘ನಿಜಕ್ಕೂ ಡಿಸ್ಟರ್ಬಿಂಗ್ ಆಗುವಂಥ ಘಟನೆ’ ಎಂದು ಅವರು ಬರೆದುಕೊಂಡಿದ್ದಾರೆ. ವ್ಯಕ್ತಿಯೋರ್ವ ಇವರ ಸೀಟ್​ನಲ್ಲಿ ಕುಳಿತಿದ್ದರು. ಅಷ್ಟೇ ಅಲ್ಲ, ಕೆಟ್ಟದಾಗಿ ನಡೆದುಕೊಂಡಿದ್ದರು ಮತ್ತು ಅವರನ್ನು ಮುಟ್ಟುವ ಪ್ರಯತ್ನವನ್ನು ಸಹ ಪ್ರಯಾಣಿಕ ಮಾಡಿದ್ದ. ಈ ಅನುಚಿತ ವರ್ತನೆಯಿಂದ ದಿವ್ಯಾಗೆ ಸಿಟ್ಟು ಬಂದಿದೆ.

‘ನಾನು ಈ ಘಟನೆಯ ಬಗ್ಗೆ ವಿಮಾನದಲ್ಲಿರುವ ಗಗನಸಖಿಗೆ ಹೇಳಿದೆ. ಅವರು ನನ್ನ ಜಾಗ ಬದಲಿಸಿದರು ಹೊರತೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆತನಿಂದ ಕೆಟ್ಟ ಮಾತುಗಳನ್ನು ಕೇಳಬೇಕಾಯಿತು’ ಎಂದು ದಿವ್ಯಾ ಬೇಸರ ಹೊರಹಾಕಿದ್ದಾರೆ. ಕೊಚ್ಚಿಗೆ ಬಂದ ಬಳಿಕ ಇ-ಮೇಲ್ ಮೂಲಕ ದಿವ್ಯಾ ಅವರು ದೂರು ದಾಖಲು ಮಾಡಿದ್ದಾರೆ. ಪೊಲೀಸರು ದೂರನ್ನು ಸ್ವೀಕರಿಸಿದ್ದು, ಇನ್ನೂ ಕೇಸ್ ದಾಖಲಿಸಿಲ್ಲ. ‘ನಾವು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದೇವೆ. ಅವರನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದೇವೆ’ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಅಮಿತಾಭ್ ಬಚ್ಚನ್ ಆಸ್ತಿ ಎಷ್ಟು ಕೋಟಿ ರೂಪಾಯಿ? ಅವರ ಬಳಿ ಎಷ್ಟು ಕಾರುಗಳಿವೆ ಗೊತ್ತಾ?

ದಿವ್ಯಾ ಪ್ರಭಾ ಅವರು 2013ರಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ರಂಗಭೂಮಿ ಹಿನ್ನೆಲೆ ಇರುವ ಅವರು, ‘ಲೋಕ್​ಪಾಲ್’ ಚಿತ್ರದ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟರು. ಆ ಬಳಿಕ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು. 2022ರಿಂದ ಈಚೆಗೆ ಅವರ ನಟನೆಯ ಯಾವುದೇ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಇನ್ನು, ಕೆಲವು ಧಾರಾವಾಹಿಗಳಲ್ಲೂ ಅವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ