AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಪ್ರಯಾಣಿಸುವಾಗ ದಿವ್ಯಾ ಪ್ರಭಾಗೆ ಕಿರುಕುಳ; ದೂರು ನೀಡಿದ ನಟಿ

‘ನಿಜಕ್ಕೂ ಡಿಸ್ಟರ್ಬಿಂಗ್ ಆಗುವಂಥ ಘಟನೆ’ ಎಂದು ಅವರು ಬರೆದುಕೊಂಡಿದ್ದಾರೆ. ವ್ಯಕ್ತಿಯೋರ್ವ ಇವರ ಸೀಟ್​ನಲ್ಲಿ ಕುಳಿತಿದ್ದರು. ಅಷ್ಟೇ ಅಲ್ಲ, ಕೆಟ್ಟದಾಗಿ ನಡೆದುಕೊಂಡಿದ್ದರು ಮತ್ತು ಅವರನ್ನು ಮುಟ್ಟುವ ಪ್ರಯತ್ನವನ್ನು ಸಹ ಪ್ರಯಾಣಿಕ ಮಾಡಿದ್ದ. ಈ ಅನುಚಿತ ವರ್ತನೆಯಿಂದ ದಿವ್ಯಾಗೆ ಸಿಟ್ಟು ಬಂದಿದೆ.  

ವಿಮಾನದಲ್ಲಿ ಪ್ರಯಾಣಿಸುವಾಗ ದಿವ್ಯಾ ಪ್ರಭಾಗೆ ಕಿರುಕುಳ; ದೂರು ನೀಡಿದ ನಟಿ
ದಿವ್ಯಾ ಪ್ರಭಾ
ರಾಜೇಶ್ ದುಗ್ಗುಮನೆ
|

Updated on: Oct 11, 2023 | 2:35 PM

Share

ಮಲಯಾಳಂ ನಟಿ ದಿವ್ಯಾ ಪ್ರಭಾ (Divya Prabha) ಅವರಿಗೆ ಕಹಿ ಅನುಭವ ಆಗಿದೆ. ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಹ ಪ್ರಯಾಣಿಕನಿಂದ ಕಿರುಕುಳಕ್ಕೆ ಒಳಗಾಗಿದ್ದಾರೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ದಿವ್ಯಾ ಪ್ರಭಾ ಅವರು ಮುಂಬೈನಿಂದ ಕೊಚ್ಚಿಗೆ ಹೊರಟಿದ್ದರು. ಈ ವೇಳ ಘಟನೆ ಸಂಭವಿಸಿದೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿದೆ.

‘ನಿಜಕ್ಕೂ ಡಿಸ್ಟರ್ಬಿಂಗ್ ಆಗುವಂಥ ಘಟನೆ’ ಎಂದು ಅವರು ಬರೆದುಕೊಂಡಿದ್ದಾರೆ. ವ್ಯಕ್ತಿಯೋರ್ವ ಇವರ ಸೀಟ್​ನಲ್ಲಿ ಕುಳಿತಿದ್ದರು. ಅಷ್ಟೇ ಅಲ್ಲ, ಕೆಟ್ಟದಾಗಿ ನಡೆದುಕೊಂಡಿದ್ದರು ಮತ್ತು ಅವರನ್ನು ಮುಟ್ಟುವ ಪ್ರಯತ್ನವನ್ನು ಸಹ ಪ್ರಯಾಣಿಕ ಮಾಡಿದ್ದ. ಈ ಅನುಚಿತ ವರ್ತನೆಯಿಂದ ದಿವ್ಯಾಗೆ ಸಿಟ್ಟು ಬಂದಿದೆ.

‘ನಾನು ಈ ಘಟನೆಯ ಬಗ್ಗೆ ವಿಮಾನದಲ್ಲಿರುವ ಗಗನಸಖಿಗೆ ಹೇಳಿದೆ. ಅವರು ನನ್ನ ಜಾಗ ಬದಲಿಸಿದರು ಹೊರತೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆತನಿಂದ ಕೆಟ್ಟ ಮಾತುಗಳನ್ನು ಕೇಳಬೇಕಾಯಿತು’ ಎಂದು ದಿವ್ಯಾ ಬೇಸರ ಹೊರಹಾಕಿದ್ದಾರೆ. ಕೊಚ್ಚಿಗೆ ಬಂದ ಬಳಿಕ ಇ-ಮೇಲ್ ಮೂಲಕ ದಿವ್ಯಾ ಅವರು ದೂರು ದಾಖಲು ಮಾಡಿದ್ದಾರೆ. ಪೊಲೀಸರು ದೂರನ್ನು ಸ್ವೀಕರಿಸಿದ್ದು, ಇನ್ನೂ ಕೇಸ್ ದಾಖಲಿಸಿಲ್ಲ. ‘ನಾವು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದೇವೆ. ಅವರನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದೇವೆ’ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಅಮಿತಾಭ್ ಬಚ್ಚನ್ ಆಸ್ತಿ ಎಷ್ಟು ಕೋಟಿ ರೂಪಾಯಿ? ಅವರ ಬಳಿ ಎಷ್ಟು ಕಾರುಗಳಿವೆ ಗೊತ್ತಾ?

ದಿವ್ಯಾ ಪ್ರಭಾ ಅವರು 2013ರಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ರಂಗಭೂಮಿ ಹಿನ್ನೆಲೆ ಇರುವ ಅವರು, ‘ಲೋಕ್​ಪಾಲ್’ ಚಿತ್ರದ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟರು. ಆ ಬಳಿಕ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು. 2022ರಿಂದ ಈಚೆಗೆ ಅವರ ನಟನೆಯ ಯಾವುದೇ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಇನ್ನು, ಕೆಲವು ಧಾರಾವಾಹಿಗಳಲ್ಲೂ ಅವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?