AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಪ್ರಯಾಣಿಸುವಾಗ ದಿವ್ಯಾ ಪ್ರಭಾಗೆ ಕಿರುಕುಳ; ದೂರು ನೀಡಿದ ನಟಿ

‘ನಿಜಕ್ಕೂ ಡಿಸ್ಟರ್ಬಿಂಗ್ ಆಗುವಂಥ ಘಟನೆ’ ಎಂದು ಅವರು ಬರೆದುಕೊಂಡಿದ್ದಾರೆ. ವ್ಯಕ್ತಿಯೋರ್ವ ಇವರ ಸೀಟ್​ನಲ್ಲಿ ಕುಳಿತಿದ್ದರು. ಅಷ್ಟೇ ಅಲ್ಲ, ಕೆಟ್ಟದಾಗಿ ನಡೆದುಕೊಂಡಿದ್ದರು ಮತ್ತು ಅವರನ್ನು ಮುಟ್ಟುವ ಪ್ರಯತ್ನವನ್ನು ಸಹ ಪ್ರಯಾಣಿಕ ಮಾಡಿದ್ದ. ಈ ಅನುಚಿತ ವರ್ತನೆಯಿಂದ ದಿವ್ಯಾಗೆ ಸಿಟ್ಟು ಬಂದಿದೆ.  

ವಿಮಾನದಲ್ಲಿ ಪ್ರಯಾಣಿಸುವಾಗ ದಿವ್ಯಾ ಪ್ರಭಾಗೆ ಕಿರುಕುಳ; ದೂರು ನೀಡಿದ ನಟಿ
ದಿವ್ಯಾ ಪ್ರಭಾ
ರಾಜೇಶ್ ದುಗ್ಗುಮನೆ
|

Updated on: Oct 11, 2023 | 2:35 PM

Share

ಮಲಯಾಳಂ ನಟಿ ದಿವ್ಯಾ ಪ್ರಭಾ (Divya Prabha) ಅವರಿಗೆ ಕಹಿ ಅನುಭವ ಆಗಿದೆ. ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಹ ಪ್ರಯಾಣಿಕನಿಂದ ಕಿರುಕುಳಕ್ಕೆ ಒಳಗಾಗಿದ್ದಾರೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ದಿವ್ಯಾ ಪ್ರಭಾ ಅವರು ಮುಂಬೈನಿಂದ ಕೊಚ್ಚಿಗೆ ಹೊರಟಿದ್ದರು. ಈ ವೇಳ ಘಟನೆ ಸಂಭವಿಸಿದೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿದೆ.

‘ನಿಜಕ್ಕೂ ಡಿಸ್ಟರ್ಬಿಂಗ್ ಆಗುವಂಥ ಘಟನೆ’ ಎಂದು ಅವರು ಬರೆದುಕೊಂಡಿದ್ದಾರೆ. ವ್ಯಕ್ತಿಯೋರ್ವ ಇವರ ಸೀಟ್​ನಲ್ಲಿ ಕುಳಿತಿದ್ದರು. ಅಷ್ಟೇ ಅಲ್ಲ, ಕೆಟ್ಟದಾಗಿ ನಡೆದುಕೊಂಡಿದ್ದರು ಮತ್ತು ಅವರನ್ನು ಮುಟ್ಟುವ ಪ್ರಯತ್ನವನ್ನು ಸಹ ಪ್ರಯಾಣಿಕ ಮಾಡಿದ್ದ. ಈ ಅನುಚಿತ ವರ್ತನೆಯಿಂದ ದಿವ್ಯಾಗೆ ಸಿಟ್ಟು ಬಂದಿದೆ.

‘ನಾನು ಈ ಘಟನೆಯ ಬಗ್ಗೆ ವಿಮಾನದಲ್ಲಿರುವ ಗಗನಸಖಿಗೆ ಹೇಳಿದೆ. ಅವರು ನನ್ನ ಜಾಗ ಬದಲಿಸಿದರು ಹೊರತೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆತನಿಂದ ಕೆಟ್ಟ ಮಾತುಗಳನ್ನು ಕೇಳಬೇಕಾಯಿತು’ ಎಂದು ದಿವ್ಯಾ ಬೇಸರ ಹೊರಹಾಕಿದ್ದಾರೆ. ಕೊಚ್ಚಿಗೆ ಬಂದ ಬಳಿಕ ಇ-ಮೇಲ್ ಮೂಲಕ ದಿವ್ಯಾ ಅವರು ದೂರು ದಾಖಲು ಮಾಡಿದ್ದಾರೆ. ಪೊಲೀಸರು ದೂರನ್ನು ಸ್ವೀಕರಿಸಿದ್ದು, ಇನ್ನೂ ಕೇಸ್ ದಾಖಲಿಸಿಲ್ಲ. ‘ನಾವು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದೇವೆ. ಅವರನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದೇವೆ’ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಅಮಿತಾಭ್ ಬಚ್ಚನ್ ಆಸ್ತಿ ಎಷ್ಟು ಕೋಟಿ ರೂಪಾಯಿ? ಅವರ ಬಳಿ ಎಷ್ಟು ಕಾರುಗಳಿವೆ ಗೊತ್ತಾ?

ದಿವ್ಯಾ ಪ್ರಭಾ ಅವರು 2013ರಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ರಂಗಭೂಮಿ ಹಿನ್ನೆಲೆ ಇರುವ ಅವರು, ‘ಲೋಕ್​ಪಾಲ್’ ಚಿತ್ರದ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟರು. ಆ ಬಳಿಕ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು. 2022ರಿಂದ ಈಚೆಗೆ ಅವರ ನಟನೆಯ ಯಾವುದೇ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಇನ್ನು, ಕೆಲವು ಧಾರಾವಾಹಿಗಳಲ್ಲೂ ಅವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ