AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Gayathri Death: ಭೀಕರ ರಸ್ತೆ ಅಪಘಾತ; ಯುವ ನಟಿಯ ದುರ್ಮರಣ

ಅಪಘಾತಕ್ಕೆ ಅಸಲಿ ಕಾರಣ ಏನು ಎಂಬುದನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ರಾಥೋಡ್​ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರೋ, ಇಲ್ಲವೋ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿದು ಬರಬೇಕಿದೆ.

Actress Gayathri Death: ಭೀಕರ ರಸ್ತೆ ಅಪಘಾತ; ಯುವ ನಟಿಯ ದುರ್ಮರಣ
TV9 Web
| Edited By: |

Updated on: Mar 21, 2022 | 1:57 PM

Share

ಹೈದರಾಬಾದ್​ನಲ್ಲಿ (Hyderabada) ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಯುವ ನಟಿ, ಯೂಟ್ಯೂಬರ್​ ಗಾಯತ್ರಿ ಅಲಿಯಾಸ್​ ಡಾಲಿ ಡಿ ಕ್ರೂಜ್​ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೋಳಿ ಆಚರಣೆ ಮುಗಿಸಿ ಗೆಳೆಯನ ಜೆತೆ ಮನೆಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಚಲಿಸುತ್ತಿದ್ದ ವಾಹನ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿತ್ತು. ಈ ಮೂಲಕ ಮುಂದೆ ಚಿತ್ರರಂಗದಲ್ಲಿ ಹೆಸರು ಮಾಡಬೇಕಿದ್ದ ನಟಿಯನ್ನು ಕಳೆದುಕೊಂಡಂತಾಗಿದೆ. ಅವರನ್ನು ಕಳೆದುಕೊಂಡಿದ್ದಕ್ಕೆ ಗಾಯತ್ರಿ (Gayathri ) ಅವರ ಗೆಳೆಯರು ಹಾಗೂ ಕುಟುಂಬದವರು ದುಃಖದಲ್ಲಿ ಕೈ ತೊಳೆಯುವಂತಾಗಿದೆ.

ಗಾಯತ್ರಿ ಅವರು ಡಾಲಿ ಎಂದೇ ಫೇಮಸ್​. ‘ಮ್ಯಾಡಮ್​ ಸರ್​ ಮ್ಯಾಡಮ್ ಅಂತೆ’ ಹೆಸರಿನ ತೆಲುಗು ವೆಬ್​ ಸರಣಿಯಲ್ಲಿ ಅವರು ನಟಿಸಿದ್ದರು. ಇದರಿಂದ ಅವರಿಗೆ ಸಾಕಷ್ಟು ಖ್ಯಾತಿ ಬಂತು. ‘ಜಲ್ಸಾ ರಾಯುಡು’ ಹೆಸರಿನ ಯೂಟ್ಯೂಬ್​ ಚಾನೆಲ್​ ಕೂಡ ಅವರು ನಡೆಸುತ್ತಿದ್ದರು. ಅವರಿಗೆ ಈಗಿನ್ನೂ 26 ವರ್ಷ ವಯಸ್ಸಾಗಿತ್ತು. ಇಷ್ಟು ಚಿಕ್ಕ ವಯಸ್ಸಿಗೆ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ.

ಅಪಘಾತ ಆಗಿದ್ದು ಹೇಗೆ?

ಗಾಯತ್ರಿ ಗೆಳೆಯರ ಜತೆ ಹೋಳಿ ಆಚರಣೆಗೆ ತೆರಳಿದ್ದರು. ನಂತರ ಗೆಳೆಯ ರಾಥೋಡ್​ ಜತೆ ಅವರು ಕಾರಿನಲ್ಲಿ ಮನೆಗೆ ಹೊರಟಿದ್ದರು. ರಾಥೋಡ್​ ಕಾರು ಚಲಾಯಿಸುತ್ತಿದ್ದರು. ಕಾರು ವೇಗವಾಗಿ ಚಲಿಸುತ್ತಿತ್ತು. ಹೀಗಾಗಿ, ಕಾರು ನಿಯಂತ್ರಣಕ್ಕೆ ಸಿಗದೆ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರು ಪಲ್ಟಿ ಹೊಡೆದಿದೆ. ಇಬ್ಬರಿಗೂ ತೀವ್ರ ಗಾಯಗಳು ಆಗಿದ್ದವು. ಗಾಯತ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮೊದಲೇ ನಿಧನ ಹೊಂದಿದರು.

ರಾಥೋಡ್​ ಅವರಿಗೂ ಗಂಭೀರ ಗಾಯಗಳು ಆಗಿದ್ದವು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿ ಆಗದೆ ಅವರು ಕೊನೆಯುಸಿರು ಎಳೆದರು. ಇನ್ನು, ಅಲ್ಲಿಯೇ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಮೇಲೆ ಕಾರು ಬಿದ್ದಿದೆ. ಆ ವ್ಯಕ್ತಿ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಮೂಲಕ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಂತಾಗಿದೆ.

ಪೊಲೀಸರಿಂದ ತನಿಖೆ

ಅಪಘಾತಕ್ಕೆ ಅಸಲಿ ಕಾರಣ ಏನು ಎಂಬುದನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ರಾಥೋಡ್​ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರೋ, ಇಲ್ಲವೋ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿದು ಬರಬೇಕಿದೆ. ಸ್ಥಳೀಯ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಮೊದಲಿನಂತಿಲ್ಲ ಸಮಂತಾ?; ನಟಿಯ ನಡವಳಿಕೆ ಕಂಡು ನಿರ್ದೇಶಕರ ಬೇಸರ

ಸಮಂತಾಗೆ ಆ್ಯಕ್ಷನ್​ ಹೇಳಿಕೊಡೋಕೆ ಬಂದ ಹಾಲಿವುಡ್​ ಸ್ಟಂಟ್​ ಮಾಸ್ಟರ್​

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!