AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Gayathri Death: ಭೀಕರ ರಸ್ತೆ ಅಪಘಾತ; ಯುವ ನಟಿಯ ದುರ್ಮರಣ

ಅಪಘಾತಕ್ಕೆ ಅಸಲಿ ಕಾರಣ ಏನು ಎಂಬುದನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ರಾಥೋಡ್​ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರೋ, ಇಲ್ಲವೋ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿದು ಬರಬೇಕಿದೆ.

Actress Gayathri Death: ಭೀಕರ ರಸ್ತೆ ಅಪಘಾತ; ಯುವ ನಟಿಯ ದುರ್ಮರಣ
TV9 Web
| Edited By: |

Updated on: Mar 21, 2022 | 1:57 PM

Share

ಹೈದರಾಬಾದ್​ನಲ್ಲಿ (Hyderabada) ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಯುವ ನಟಿ, ಯೂಟ್ಯೂಬರ್​ ಗಾಯತ್ರಿ ಅಲಿಯಾಸ್​ ಡಾಲಿ ಡಿ ಕ್ರೂಜ್​ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೋಳಿ ಆಚರಣೆ ಮುಗಿಸಿ ಗೆಳೆಯನ ಜೆತೆ ಮನೆಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಚಲಿಸುತ್ತಿದ್ದ ವಾಹನ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿತ್ತು. ಈ ಮೂಲಕ ಮುಂದೆ ಚಿತ್ರರಂಗದಲ್ಲಿ ಹೆಸರು ಮಾಡಬೇಕಿದ್ದ ನಟಿಯನ್ನು ಕಳೆದುಕೊಂಡಂತಾಗಿದೆ. ಅವರನ್ನು ಕಳೆದುಕೊಂಡಿದ್ದಕ್ಕೆ ಗಾಯತ್ರಿ (Gayathri ) ಅವರ ಗೆಳೆಯರು ಹಾಗೂ ಕುಟುಂಬದವರು ದುಃಖದಲ್ಲಿ ಕೈ ತೊಳೆಯುವಂತಾಗಿದೆ.

ಗಾಯತ್ರಿ ಅವರು ಡಾಲಿ ಎಂದೇ ಫೇಮಸ್​. ‘ಮ್ಯಾಡಮ್​ ಸರ್​ ಮ್ಯಾಡಮ್ ಅಂತೆ’ ಹೆಸರಿನ ತೆಲುಗು ವೆಬ್​ ಸರಣಿಯಲ್ಲಿ ಅವರು ನಟಿಸಿದ್ದರು. ಇದರಿಂದ ಅವರಿಗೆ ಸಾಕಷ್ಟು ಖ್ಯಾತಿ ಬಂತು. ‘ಜಲ್ಸಾ ರಾಯುಡು’ ಹೆಸರಿನ ಯೂಟ್ಯೂಬ್​ ಚಾನೆಲ್​ ಕೂಡ ಅವರು ನಡೆಸುತ್ತಿದ್ದರು. ಅವರಿಗೆ ಈಗಿನ್ನೂ 26 ವರ್ಷ ವಯಸ್ಸಾಗಿತ್ತು. ಇಷ್ಟು ಚಿಕ್ಕ ವಯಸ್ಸಿಗೆ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ.

ಅಪಘಾತ ಆಗಿದ್ದು ಹೇಗೆ?

ಗಾಯತ್ರಿ ಗೆಳೆಯರ ಜತೆ ಹೋಳಿ ಆಚರಣೆಗೆ ತೆರಳಿದ್ದರು. ನಂತರ ಗೆಳೆಯ ರಾಥೋಡ್​ ಜತೆ ಅವರು ಕಾರಿನಲ್ಲಿ ಮನೆಗೆ ಹೊರಟಿದ್ದರು. ರಾಥೋಡ್​ ಕಾರು ಚಲಾಯಿಸುತ್ತಿದ್ದರು. ಕಾರು ವೇಗವಾಗಿ ಚಲಿಸುತ್ತಿತ್ತು. ಹೀಗಾಗಿ, ಕಾರು ನಿಯಂತ್ರಣಕ್ಕೆ ಸಿಗದೆ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರು ಪಲ್ಟಿ ಹೊಡೆದಿದೆ. ಇಬ್ಬರಿಗೂ ತೀವ್ರ ಗಾಯಗಳು ಆಗಿದ್ದವು. ಗಾಯತ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮೊದಲೇ ನಿಧನ ಹೊಂದಿದರು.

ರಾಥೋಡ್​ ಅವರಿಗೂ ಗಂಭೀರ ಗಾಯಗಳು ಆಗಿದ್ದವು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿ ಆಗದೆ ಅವರು ಕೊನೆಯುಸಿರು ಎಳೆದರು. ಇನ್ನು, ಅಲ್ಲಿಯೇ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಮೇಲೆ ಕಾರು ಬಿದ್ದಿದೆ. ಆ ವ್ಯಕ್ತಿ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಮೂಲಕ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಂತಾಗಿದೆ.

ಪೊಲೀಸರಿಂದ ತನಿಖೆ

ಅಪಘಾತಕ್ಕೆ ಅಸಲಿ ಕಾರಣ ಏನು ಎಂಬುದನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ರಾಥೋಡ್​ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರೋ, ಇಲ್ಲವೋ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿದು ಬರಬೇಕಿದೆ. ಸ್ಥಳೀಯ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಮೊದಲಿನಂತಿಲ್ಲ ಸಮಂತಾ?; ನಟಿಯ ನಡವಳಿಕೆ ಕಂಡು ನಿರ್ದೇಶಕರ ಬೇಸರ

ಸಮಂತಾಗೆ ಆ್ಯಕ್ಷನ್​ ಹೇಳಿಕೊಡೋಕೆ ಬಂದ ಹಾಲಿವುಡ್​ ಸ್ಟಂಟ್​ ಮಾಸ್ಟರ್​

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?