AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Gayathri Death: ಭೀಕರ ರಸ್ತೆ ಅಪಘಾತ; ಯುವ ನಟಿಯ ದುರ್ಮರಣ

ಅಪಘಾತಕ್ಕೆ ಅಸಲಿ ಕಾರಣ ಏನು ಎಂಬುದನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ರಾಥೋಡ್​ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರೋ, ಇಲ್ಲವೋ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿದು ಬರಬೇಕಿದೆ.

Actress Gayathri Death: ಭೀಕರ ರಸ್ತೆ ಅಪಘಾತ; ಯುವ ನಟಿಯ ದುರ್ಮರಣ
TV9 Web
| Edited By: |

Updated on: Mar 21, 2022 | 1:57 PM

Share

ಹೈದರಾಬಾದ್​ನಲ್ಲಿ (Hyderabada) ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಯುವ ನಟಿ, ಯೂಟ್ಯೂಬರ್​ ಗಾಯತ್ರಿ ಅಲಿಯಾಸ್​ ಡಾಲಿ ಡಿ ಕ್ರೂಜ್​ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೋಳಿ ಆಚರಣೆ ಮುಗಿಸಿ ಗೆಳೆಯನ ಜೆತೆ ಮನೆಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಚಲಿಸುತ್ತಿದ್ದ ವಾಹನ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿತ್ತು. ಈ ಮೂಲಕ ಮುಂದೆ ಚಿತ್ರರಂಗದಲ್ಲಿ ಹೆಸರು ಮಾಡಬೇಕಿದ್ದ ನಟಿಯನ್ನು ಕಳೆದುಕೊಂಡಂತಾಗಿದೆ. ಅವರನ್ನು ಕಳೆದುಕೊಂಡಿದ್ದಕ್ಕೆ ಗಾಯತ್ರಿ (Gayathri ) ಅವರ ಗೆಳೆಯರು ಹಾಗೂ ಕುಟುಂಬದವರು ದುಃಖದಲ್ಲಿ ಕೈ ತೊಳೆಯುವಂತಾಗಿದೆ.

ಗಾಯತ್ರಿ ಅವರು ಡಾಲಿ ಎಂದೇ ಫೇಮಸ್​. ‘ಮ್ಯಾಡಮ್​ ಸರ್​ ಮ್ಯಾಡಮ್ ಅಂತೆ’ ಹೆಸರಿನ ತೆಲುಗು ವೆಬ್​ ಸರಣಿಯಲ್ಲಿ ಅವರು ನಟಿಸಿದ್ದರು. ಇದರಿಂದ ಅವರಿಗೆ ಸಾಕಷ್ಟು ಖ್ಯಾತಿ ಬಂತು. ‘ಜಲ್ಸಾ ರಾಯುಡು’ ಹೆಸರಿನ ಯೂಟ್ಯೂಬ್​ ಚಾನೆಲ್​ ಕೂಡ ಅವರು ನಡೆಸುತ್ತಿದ್ದರು. ಅವರಿಗೆ ಈಗಿನ್ನೂ 26 ವರ್ಷ ವಯಸ್ಸಾಗಿತ್ತು. ಇಷ್ಟು ಚಿಕ್ಕ ವಯಸ್ಸಿಗೆ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ.

ಅಪಘಾತ ಆಗಿದ್ದು ಹೇಗೆ?

ಗಾಯತ್ರಿ ಗೆಳೆಯರ ಜತೆ ಹೋಳಿ ಆಚರಣೆಗೆ ತೆರಳಿದ್ದರು. ನಂತರ ಗೆಳೆಯ ರಾಥೋಡ್​ ಜತೆ ಅವರು ಕಾರಿನಲ್ಲಿ ಮನೆಗೆ ಹೊರಟಿದ್ದರು. ರಾಥೋಡ್​ ಕಾರು ಚಲಾಯಿಸುತ್ತಿದ್ದರು. ಕಾರು ವೇಗವಾಗಿ ಚಲಿಸುತ್ತಿತ್ತು. ಹೀಗಾಗಿ, ಕಾರು ನಿಯಂತ್ರಣಕ್ಕೆ ಸಿಗದೆ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರು ಪಲ್ಟಿ ಹೊಡೆದಿದೆ. ಇಬ್ಬರಿಗೂ ತೀವ್ರ ಗಾಯಗಳು ಆಗಿದ್ದವು. ಗಾಯತ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮೊದಲೇ ನಿಧನ ಹೊಂದಿದರು.

ರಾಥೋಡ್​ ಅವರಿಗೂ ಗಂಭೀರ ಗಾಯಗಳು ಆಗಿದ್ದವು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿ ಆಗದೆ ಅವರು ಕೊನೆಯುಸಿರು ಎಳೆದರು. ಇನ್ನು, ಅಲ್ಲಿಯೇ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಮೇಲೆ ಕಾರು ಬಿದ್ದಿದೆ. ಆ ವ್ಯಕ್ತಿ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಮೂಲಕ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಂತಾಗಿದೆ.

ಪೊಲೀಸರಿಂದ ತನಿಖೆ

ಅಪಘಾತಕ್ಕೆ ಅಸಲಿ ಕಾರಣ ಏನು ಎಂಬುದನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ರಾಥೋಡ್​ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರೋ, ಇಲ್ಲವೋ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿದು ಬರಬೇಕಿದೆ. ಸ್ಥಳೀಯ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಮೊದಲಿನಂತಿಲ್ಲ ಸಮಂತಾ?; ನಟಿಯ ನಡವಳಿಕೆ ಕಂಡು ನಿರ್ದೇಶಕರ ಬೇಸರ

ಸಮಂತಾಗೆ ಆ್ಯಕ್ಷನ್​ ಹೇಳಿಕೊಡೋಕೆ ಬಂದ ಹಾಲಿವುಡ್​ ಸ್ಟಂಟ್​ ಮಾಸ್ಟರ್​

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್