AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡು ಸಂತ್ರಸ್ತರಿಗೆ 15 ಕೋಟಿ ರೂ., 300 ಮನೆ ನೀಡಲು ಮುಂದಾದ ನಟಿ ಜಾಕ್ವೆಲಿನ್ ಗೆಳೆಯ ಸುಕೇಶ್ 

ಬಾಲಿವುಡ್​​​​ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಗೆಳೆಯ ಹಾಗೂ 200 ಕೋಟಿ ವಂಚನೆ ಆರೋಪದಲ್ಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಅವರು ಕೇರಳದ ವಯನಾಡಿಗೆ ಸಹಾಯ ಮಾಡುವುದಾಗಿ ಪತ್ರದ ಮೂಲಕ ಕೇರಳ ಸಿಎಂ ಅವರಿಗೆ ಮನವಿ ಮಾಡಿದ್ದಾರೆ. ಸಂತ್ರಸ್ತರಿಗೆ 15 ಕೋಟಿ ರೂ., 300 ಮನೆ ನೀಡುವುದಾಗಿ ಹೇಳಿದ್ದಾರೆ. ಇದೀಗ ಇವರ ಈ ಮನವಿಗೆ ಕೇರಳ ಏನು ಹೇಳಿದೆ ಇಲ್ಲಿದೆ ನೋಡಿ ಮಾಹಿತಿ

ವಯನಾಡು ಸಂತ್ರಸ್ತರಿಗೆ 15 ಕೋಟಿ ರೂ., 300 ಮನೆ ನೀಡಲು ಮುಂದಾದ ನಟಿ ಜಾಕ್ವೆಲಿನ್ ಗೆಳೆಯ ಸುಕೇಶ್ 
ಸುಕೇಶ್ ಚಂದ್ರಶೇಖರ್
ಅಕ್ಷಯ್​ ಪಲ್ಲಮಜಲು​​
|

Updated on: Aug 09, 2024 | 12:24 PM

Share

ಬಾಲಿವುಡ್​​​ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಬಾಯ್​​ಫ್ರೆಂಡ್​​ ಸುಕೇಶ್ ಚಂದ್ರಶೇಖರ್ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದು, ವಯನಾಡ್ ಜಿಲ್ಲೆಯಲ್ಲಿ ಉಂಟಾದ ಭೂಕುಸಿತದಿಂದ ಜನರ ಆಶ್ರಯಕ್ಕಾಗಿ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ 15 ಕೋಟಿ ರೂಪಾಯಿಗಳನ್ನು ಸ್ವೀಕರಿಸುವಂತೆ ಮನವಿ ಮಾಡಿದ್ದಾರೆ. ಸುಮಾರು 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಅವರು ಇದೀಗ ವಯನಾಡ್ ಜನರ ಪರ ನಿಂತಿದ್ದಾರೆ.

ಪ್ರಸ್ತುತ ರಾಷ್ಟ್ರ ರಾಜಧಾನಿಯ ಮಂಡೋಲಿ ಜೈಲಿನಲ್ಲಿರುವ ಚಂದ್ರಶೇಖರ್ ಕೇರಳವು ಏನಾಗುತ್ತಿದೆ ಎಂಬುದನ್ನು ನೋಡಲು ನನಗೆ ತುಂಬಾ ನೋವಾಗಿದೆ. ಇದೀಗ ಅಲ್ಲಿ ಜನರಿಗೆ ನಮ್ಮ ಸಹಾಯದ ಅಗತ್ಯ ಇದೆ. ಅಗತ್ಯವಿರುವ ಈ ಸಮಯದಲ್ಲಿ ಬೆಂಬಲ ನೀಡಲು ಬಯಸುತ್ತೇನೆ ಎಂದು ಕೇರಳ ಸಿಎಂಗೆ ಬರೆದ ಪತ್ರದಲ್ಲಿ ಬರೆದಿದ್ದಾರೆ ಎಂದು ಅವರ ಪರ ವಕೀಲ ಅನಂತ್ ಮಲಿಕ್ ಹೇಳಿದ್ದಾರೆ.

ಸಂತ್ರಸ್ತರಿಗೆ 15 ಕೋಟಿ ಸಹಾಯವನ್ನು ಸ್ವೀಕರಿಸಿ: ಸುಕೇಶ್

ಕೇರಳದ ಮುಖ್ಯಮಂತ್ರಿಗಳೇ ನಮ್ಮ ಪ್ರತಿಷ್ಠಾನದಿಂದ ಪರಿಹಾರ ನಿಧಿಗೆ 15 ಕೋಟಿ ರೂಪಾಯಿಗಳನ್ನು ಸ್ವೀಕರಿಸಲು ನಾನು ಈ ಮೂಲಕ ವಿನಂತಿಸುತ್ತಿದ್ದೇನೆ. ಸಂಕಷ್ಟ ಪರಿಹಾರ ನಿಧಿಯನ್ನು ಇದನ್ನು ಬಳಸಿಕೊಳ್ಳಿ. ವಯನಾಡ್ ಪರ ನಾನು ನಿಲ್ಲುತ್ತೇನೆ. ಸಂತ್ರಸ್ತರಿಗೆ ತಕ್ಷಣ 300 ಮನೆಗಳನ್ನು ನಿರ್ಮಿಸಲು ಹೆಚ್ಚಿನ ಸಹಾಯವನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದು ಸುಕೇಶ್ ಚಂದ್ರಶೇಖರ್ ಅವರು ಕಾನೂನು ಬದ್ಧ ಖಾತೆಯಿಂದ ನೀಡಲಾಗುವುದು. ರಾಜ್ಯ ಸರ್ಕಾರವು ಈ ಪ್ರಸ್ತಾಪವನ್ನು ಸ್ವೀಕರಿಸಲು ಮತ್ತು ಭೂಕುಸಿತ ದುರಂತದಲ್ಲಿ ಸಂತ್ರಸ್ತರ ಕಲ್ಯಾಣ ಮತ್ತು ಪುನರ್ವಸತಿಗೆ ಬಳಸಿಕೊಳ್ಳುವಂತೆ ವಿನಂತಿಸಿದರು ಎಂದು ಸುಕೇಶ್ ಚಂದ್ರಶೇಖರ್ ಹೇಳಿದ್ದಾರೆ.

ಇದನ್ನೂ ಓದಿ: ಟಾಲಿವುಡ್ ನಟ ಮಹೇಶ್ ಬಾಬು ಒಟ್ಟೂ ಆಸ್ತಿ, ಸಂಭಾವನೆ ಎಷ್ಟು?

ಚಂದ್ರಶೇಖರ್ ಅವರ ಪತ್ರಕ್ಕೆ ಕೇರಳ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಆರೋಪಿತ ಹಾಗೂ ಅಕ್ರಮ ಹಣ ಸಂಗ್ರಹ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಆ ಕಾರಣ ಕೇರಳ ಸರ್ಕಾರ ಕಾನೂನು ಬದ್ಧವಾಗಿ ಹೆಜ್ಜೆ ಇಡಲು ಮುಂದಾಗಿದೆ. ಇನ್ನು ಸ್ಥಳೀಯ ಆಡಳಿತವು ಬುಧವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಒಂದು ವಾರದ ಹಿಂದೆ ಈ ಉತ್ತರ ಕೇರಳ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದ ನಂತರ 138 ಜನರು ಕಾಣೆಯಾಗಿದ್ದಾರೆ ಎಂದು ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!