AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಮೂಲಕ​ ವೋಟ್​ ಮಾಡಿದ್ದೇನೆ ಎಂದ ಜ್ಯೋತಿಕಾ ಬಗ್ಗೆ ಸಖತ್ ಟ್ರೋಲ್

ಇತ್ತೀಚೆಗೆ ಚೆನ್ನೈನಲ್ಲಿ ಲೋಕಸಭಾ ಚುನಾವಣೆ ನಡೆದಿದೆ. ಅನೇಕ ಸೆಲೆಬ್ರಿಟಿಗಳು ಬಂದು ವೋಟ್ ಮಾಡಿದ್ದಾರೆ. ಆದರೆ, ಜ್ಯೋತಿಕಾ ವೋಟ್ ಮಾಡಿಲ್ಲ. ಇದನ್ನು ಅನೇಕರು ಟ್ರೋಲ್ ಮಾಡಿದ್ದರು. ಈ ಬಗ್ಗೆ ಅವರು ಉತ್ತರಿಸಿದ್ದಾರೆ.  ಈ ವೇಳೆ ಅವರು ಆನ್​ಲೈನ್ ವೋಟಿಂಗ್ ಬಗ್ಗೆ ಮಾತನಾಡಿದ್ದಾರೆ.

ಆನ್​ಲೈನ್ ಮೂಲಕ​ ವೋಟ್​ ಮಾಡಿದ್ದೇನೆ ಎಂದ ಜ್ಯೋತಿಕಾ ಬಗ್ಗೆ ಸಖತ್ ಟ್ರೋಲ್
ಜ್ಯೋತಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: May 05, 2024 | 8:00 AM

Share

ನಟಿ ಜ್ಯೋತಿಕಾ (Jyothika) ಅವರು ದಕ್ಷಿಣ ಭಾರತ ಹಾಗೂ ಬಾಲಿವುಡ್ ಎರಡರಲ್ಲೂ ಖ್ಯಾತಿ ಪಡೆದಿದ್ದಾರೆ. ಅವರು ಸದ್ಯ ಹಿಂದಿಯ ‘ಶ್ರೀಕಾಂತ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ತುಶಾರ್ ಹಿರಾನಂದನಿ ಇದನ್ನು ನಿರ್ದೇಶನ ಮಾಡಿದ್ದು, ರಾಜ್​ಕುಮಾರ್ ರಾವ್, ಅಲಾಯ ಎಫ್, ಶರದ್ ಕೇಲ್ಕರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಮಧ್ಯೆ ಆನ್​ಲೈನ್​ನಲ್ಲಿ ವೋಟ್ ಮಾಡಿದ್ದೇನೆ ಎಂದು ಹೇಳುವ ಮೂಲಕ ಜ್ಯೋತಿಕಾ ಟ್ರೋಲ್ ಆಗಿದ್ದಾರೆ.

ಇತ್ತೀಚೆಗೆ ಚೆನ್ನೈನಲ್ಲಿ ಲೋಕಸಭಾ ಚುನಾವಣೆ ನಡೆದಿದೆ. ಅನೇಕ ಸೆಲೆಬ್ರಿಟಿಗಳು ಬಂದು ವೋಟ್ ಮಾಡಿದ್ದಾರೆ. ಆದರೆ, ಜ್ಯೋತಿಕಾ ವೋಟ್ ಮಾಡಿಲ್ಲ. ಇದನ್ನು ಅನೇಕರು ಟ್ರೋಲ್ ಮಾಡಿದ್ದರು. ಈ ಬಗ್ಗೆ ಅವರು ಉತ್ತರಿಸಿದ್ದಾರೆ.  ‘ನಾನು ಪ್ರತಿ ವರ್ಷ ವೋಟ್ ಮಾಡುತ್ತೇನೆ’ ಎಂದಿದ್ದಾರೆ ಜ್ಯೋತಿಕಾ. ನಂತರ ಮತದಾನ ಪ್ರತಿ ವರ್ಷ ನಡೆಯಲ್ಲ ಎಂದು ಸಂದರ್ಶಕರು ಹೇಳಿದರು. ಇದನ್ನು ಜ್ಯೋತಿಕಾ ಒಪ್ಪಿಕೊಂಡಿದ್ದಾರೆ.

‘ಮತದಾನದ ಸಂದರ್ಭದಲ್ಲಿ ನಾವು ನಮ್ಮ ರಾಜ್ಯದಲ್ಲಿ ಇಲ್ಲದೆ ಇರಬಹುದ, ನಮಗೆ ಅನಾರೋಗ್ಯ ಆಗಿರಬಹುದು. ಅದು ನಮ್ಮ ಖಾಸಗಿ ವಿಚಾರ. ಕೆಲವೊಮ್ಮೆ ಖಾಸಗಿಯಾಗಿ ವೋಟ್ ಮಾಡಿ ಬಂದಿರುತ್ತೇವೆ, ಆನ್​ಲೈನ್​ನಲ್ಲಿ ವೋಟ್ ಮಾಡಿರಬಹುದು. ಎಲ್ಲವೂ ಪಬ್ಲಿಶ್ ಆಗಬೇಕೆಂದಿಲ್ಲ. ಜೀವನಕ್ಕೆ ಒಂದು ಖಾಸಗಿ ಭಾಗವಿದೆ ಮತ್ತು ಅದನ್ನು ನಾವು ಗೌರವಿಸಬೇಕು’ ಎಂದಿದ್ದಾರೆ ಜ್ಯೋತಿಕಾ.

ಆನ್​ಲೈನ್ ವೋಟಿಂಗ್ ವಿಚಾರವನ್ನು ಇಟ್ಟುಕೊಂಡು ಎಲ್ಲರೂ ಟ್ರೋಲ್ ಮಾಡುತ್ತಿದ್ದಾರೆ. ‘ಮೇಡಂ ನೀವು ಸರ್ಕಾರವು ತೆಗೆದುಕೊಂಡ ಹೊಸ ನೀತಿ ನಿರ್ಧಾರದ ಬ್ರಾಂಡ್ ಅಂಬಾಸಿಡರ್ ಆಗಿರುವಂತೆ ತೋರುತ್ತಿದೆ. ಆನ್‌ಲೈನ್ ಮತದಾನ! ನೀವು ದಯವಿಟ್ಟು ಅದರ ಬಗ್ಗೆ ಹೇಳುವಿರೇ? ನನ್ನಂತಹ ಬಡವರಿಗೆ ಸಹಾಯ ಆಗುತ್ತದೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ದಯವಿಟ್ಟು ಸಹಾಯ ಮಾಡಿ, ಜ್ಯೋತಿಕಾ ರೀತಿ ಆನ್​ಲೈನ್​ ವೋಟ್ ಮಾಡೋದು ಹೇಗೆ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

‘ಸಮಾಜ ಸುಧಾರಕಿ ಜ್ಯೋತಿಕಾ, ಅಶಿಕ್ಷಿತರಿಗೂ ಗೊತ್ತು ಚುನಾವಣೆ ಪ್ರತಿ ವರ್ಷಕ್ಕೆ ಅಲ್ಲ, 5 ವರ್ಷಕ್ಕೊಮ್ಮೆ ಎಂದು. ನಾನು ಭಾರತದಲ್ಲಿ ಈವರೆಗೆ ಆನ್‌ಲೈನ್ ಮತದಾನದ ಬಗ್ಗೆ ಕೇಳಿಲ್ಲ’ ಎಂದಿದ್ದಾರೆ ಅವರು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಇದನ್ನೂ ಓದಿ: ಒಂದೇ ಒಂದು ವಿಡಿಯೋದಿಂದ ವಿಚ್ಛೇದನ ವದಂತಿಗೆ ಬ್ರೇಕ್ ಹಾಕಿದ ಜ್ಯೋತಿಕಾ-ಸೂರ್ಯ

ಜ್ಯೋತಿಕಾ ಅವರು ಇತ್ತೀಚೆಗೆ ಮುಂಬೈನಲ್ಲಿ ವಾಸವಾಗಿದ್ದಾರೆ. ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘ಶೈತಾನ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಆರ್ ಮಾಧವನ್ ಹಾಗೂ ಅಜಯ್ ದೇವಗನ್ ಕೂಡ ನಟಿಸಿದ್ದರು. ಈಗ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ