AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಬಿಟ್ಟು ಇನ್​ಸ್ಟಾಗ್ರಾಮ್​ ಬಗ್ಗೆ ಕೆಂಡಕಾರಿದ ನಟಿ ಕಂಗನಾ ರಣಾವತ್

ಕಂಗನಾ ರಣಾವತ್(kangana ranaut) ಒಂದಿಲ್ಲೊಂದು ವಿಚಾರಕ್ಕೆ ಕಿರಿಕ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅವರು ಅನೇಕರ ಬಗ್ಗೆ ಟೀಕೆ ಮಾಡಿದ್ದಿದಿದೆ. ಈಗ ​ ಅವರು ಇನ್​ಸ್ಟಾಗ್ರಾಮ್​ ಬಗ್ಗೆ ಕಿಡಿಕಾರಿದ್ದಾರೆ. ಇದೊಂದು ಮೂಕ ಪ್ಲಾಟ್​ಫಾರ್ಮ್​ ಎಂದಿದ್ದಾರೆ. ಇದರಲ್ಲಿ ಹಂಚಿಕೊಂಡ ವಿಚಾರಗಳು ಮರುದಿನ ಕಣ್ಮರೆಯಾಗುತ್ತದೆ ಎಂದು ಟೀಕಿಸಿದ್ದಾರೆ.

ಎಲ್ಲಾ ಬಿಟ್ಟು ಇನ್​ಸ್ಟಾಗ್ರಾಮ್​ ಬಗ್ಗೆ ಕೆಂಡಕಾರಿದ ನಟಿ ಕಂಗನಾ ರಣಾವತ್
ಕಂಗನಾ ರಣಾವತ್​
TV9 Web
| Edited By: |

Updated on: Nov 11, 2022 | 6:41 PM

Share

ಕಂಗನಾ ರಣಾವತ್(kangana ranaut) ಅವರ ಟ್ವಿಟರ್ ಖಾತೆ ಬ್ಲಾಕ್ ಆಗಿದೆ. ಈ ಕಾರಣಕ್ಕೆ ಇನ್​ಸ್ಟಾಗ್ರಾಮ್​ನಲ್ಲಿ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಹಾಕಿದ ಸ್ಟೇಟಸ್​​ಗಳು ನಾಳೆಗೆ ಮಾಯವಾಗುತ್ತದೆ. ಆ ಬಗ್ಗೆ ಅವರು ಅಪಸ್ವರ ತೆಗೆದಿದ್ದಾರೆ. ಟ್ವಿಟರ್​ ಅನ್ನು ಅತ್ಯುತ್ತಮ ಸಾಮಾಜಿಕ ವೇದಿಕೆ ಎಂದು ಕರೆದ ಕೆಲವು ದಿನಗಳ ನಂತರ, ಇದೀಗ ಇನ್​ಸ್ಟಾಗ್ರಾಮ್​ ಕುರಿತು ತಮ್ಮ ಅಭಿಪ್ರಾಯವನ್ನು ಅವರು ಹಂಚಿಕೊಂಡಿದ್ದಾರೆ.

‘ಇನ್​​ಸ್ಟಾಗ್ರಾಮ್ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಬಿಡುವುದಿಲ್ಲ, ಪೋಸ್ಟ್​ಗಳ ಬಗ್ಗೆ ಬರೆದ ಕಮೆಂಟ್​ಗಳು ಮಾರನೇ ದಿನ ಮಾಯವಾಗುತ್ತದೆ. ನನ್ನಂತಹ ಜನರು ತಮ್ಮ ಆಲೋಚನೆಗಳನ್ನು ಸರಿಯಾಗಿ ದಾಖಲಿಸಲು ಬಯಸುತ್ತಾರೆ. ಆದರೆ ಅದಕ್ಕೆ ಇನ್​ಸ್ಟಾಗ್ರಾಮ್​ ಸೂಕ್ತವಲ್ಲ’ ಎಂದಿದ್ದಾರೆ ಅವರು.

ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆಯನ್ನ 2021ರಲ್ಲಿ ಅಮಾನತುಗೊಳಿಸಲಾಗಿದೆ. ‘ಟ್ವಿಟರ್ ಖಾತೆಯನ್ನ ನಿರ್ವಹಿಸಲು ನಿರ್ದಿಷ್ಟ ಮೊತ್ತವನ್ನು ನೀಡಬೇಕು. ಇದರಿಂದ ನಮ್ಮ ಖಾತೆಯು ಸೇಫ್​ ಆಗಿರುತ್ತದೆ. ಜಗತ್ತಿನಲ್ಲಿ ಎಲ್ಲಿಯು ಉಚಿತ ಊಟಗಳಿಲ್ಲ. ನೀವು ಮುಕ್ತವಾಗಿ ಬಳಸುವ ಎಲ್ಲಾ ಪ್ಲಾಟ್​ಫಾರ್ಮ್​ಗಳು ನಿಮ್ಮ ಡಾಟಾವನ್ನು ಕದಿಯುತ್ತವೆ’ ಎಂದಿರುವ ಅವರು ಟ್ವಿಟರ್​ ಕೈಗೊಂಡಿರುವ ಬದಲಾವಣೆಗಳನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:ಕಂಗನಾ ರಣಾವತ್: ‘ಮಾಜಿ ಟ್ವಿಟ್ಟರ್​ ಮುಖ್ಯಸ್ಥನ ವಿನಾಶವನ್ನು ನಾನು ಬಹಳ ಹಿಂದೆಯೇ ಊಹಿಸಿದ್ದೆ’

ಕಂಗನಾ ರಣಾವತ್​ ‘ಎಮರ್ಜೆನ್ಸಿ’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರವನ್ನ ಮಾಡುತ್ತಿದ್ದಾರೆ. ಈ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇನ್ನು ಈ ಸಿನಿಮಾದಲ್ಲಿ ಅನುಪಮ್​ ಖೇರ್​, ಮಹಿಮಾ ಚೌಧರಿ, ವಿಶಾಕ್​ ನಾಯರ್​ ಮತ್ತು ಶ್ರೇಯಸ್​ ತಲ್ಪಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ