AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಬಿಟ್ಟು ಇನ್​ಸ್ಟಾಗ್ರಾಮ್​ ಬಗ್ಗೆ ಕೆಂಡಕಾರಿದ ನಟಿ ಕಂಗನಾ ರಣಾವತ್

ಕಂಗನಾ ರಣಾವತ್(kangana ranaut) ಒಂದಿಲ್ಲೊಂದು ವಿಚಾರಕ್ಕೆ ಕಿರಿಕ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅವರು ಅನೇಕರ ಬಗ್ಗೆ ಟೀಕೆ ಮಾಡಿದ್ದಿದಿದೆ. ಈಗ ​ ಅವರು ಇನ್​ಸ್ಟಾಗ್ರಾಮ್​ ಬಗ್ಗೆ ಕಿಡಿಕಾರಿದ್ದಾರೆ. ಇದೊಂದು ಮೂಕ ಪ್ಲಾಟ್​ಫಾರ್ಮ್​ ಎಂದಿದ್ದಾರೆ. ಇದರಲ್ಲಿ ಹಂಚಿಕೊಂಡ ವಿಚಾರಗಳು ಮರುದಿನ ಕಣ್ಮರೆಯಾಗುತ್ತದೆ ಎಂದು ಟೀಕಿಸಿದ್ದಾರೆ.

ಎಲ್ಲಾ ಬಿಟ್ಟು ಇನ್​ಸ್ಟಾಗ್ರಾಮ್​ ಬಗ್ಗೆ ಕೆಂಡಕಾರಿದ ನಟಿ ಕಂಗನಾ ರಣಾವತ್
ಕಂಗನಾ ರಣಾವತ್​
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 11, 2022 | 6:41 PM

Share

ಕಂಗನಾ ರಣಾವತ್(kangana ranaut) ಅವರ ಟ್ವಿಟರ್ ಖಾತೆ ಬ್ಲಾಕ್ ಆಗಿದೆ. ಈ ಕಾರಣಕ್ಕೆ ಇನ್​ಸ್ಟಾಗ್ರಾಮ್​ನಲ್ಲಿ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಹಾಕಿದ ಸ್ಟೇಟಸ್​​ಗಳು ನಾಳೆಗೆ ಮಾಯವಾಗುತ್ತದೆ. ಆ ಬಗ್ಗೆ ಅವರು ಅಪಸ್ವರ ತೆಗೆದಿದ್ದಾರೆ. ಟ್ವಿಟರ್​ ಅನ್ನು ಅತ್ಯುತ್ತಮ ಸಾಮಾಜಿಕ ವೇದಿಕೆ ಎಂದು ಕರೆದ ಕೆಲವು ದಿನಗಳ ನಂತರ, ಇದೀಗ ಇನ್​ಸ್ಟಾಗ್ರಾಮ್​ ಕುರಿತು ತಮ್ಮ ಅಭಿಪ್ರಾಯವನ್ನು ಅವರು ಹಂಚಿಕೊಂಡಿದ್ದಾರೆ.

‘ಇನ್​​ಸ್ಟಾಗ್ರಾಮ್ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಬಿಡುವುದಿಲ್ಲ, ಪೋಸ್ಟ್​ಗಳ ಬಗ್ಗೆ ಬರೆದ ಕಮೆಂಟ್​ಗಳು ಮಾರನೇ ದಿನ ಮಾಯವಾಗುತ್ತದೆ. ನನ್ನಂತಹ ಜನರು ತಮ್ಮ ಆಲೋಚನೆಗಳನ್ನು ಸರಿಯಾಗಿ ದಾಖಲಿಸಲು ಬಯಸುತ್ತಾರೆ. ಆದರೆ ಅದಕ್ಕೆ ಇನ್​ಸ್ಟಾಗ್ರಾಮ್​ ಸೂಕ್ತವಲ್ಲ’ ಎಂದಿದ್ದಾರೆ ಅವರು.

ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆಯನ್ನ 2021ರಲ್ಲಿ ಅಮಾನತುಗೊಳಿಸಲಾಗಿದೆ. ‘ಟ್ವಿಟರ್ ಖಾತೆಯನ್ನ ನಿರ್ವಹಿಸಲು ನಿರ್ದಿಷ್ಟ ಮೊತ್ತವನ್ನು ನೀಡಬೇಕು. ಇದರಿಂದ ನಮ್ಮ ಖಾತೆಯು ಸೇಫ್​ ಆಗಿರುತ್ತದೆ. ಜಗತ್ತಿನಲ್ಲಿ ಎಲ್ಲಿಯು ಉಚಿತ ಊಟಗಳಿಲ್ಲ. ನೀವು ಮುಕ್ತವಾಗಿ ಬಳಸುವ ಎಲ್ಲಾ ಪ್ಲಾಟ್​ಫಾರ್ಮ್​ಗಳು ನಿಮ್ಮ ಡಾಟಾವನ್ನು ಕದಿಯುತ್ತವೆ’ ಎಂದಿರುವ ಅವರು ಟ್ವಿಟರ್​ ಕೈಗೊಂಡಿರುವ ಬದಲಾವಣೆಗಳನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:ಕಂಗನಾ ರಣಾವತ್: ‘ಮಾಜಿ ಟ್ವಿಟ್ಟರ್​ ಮುಖ್ಯಸ್ಥನ ವಿನಾಶವನ್ನು ನಾನು ಬಹಳ ಹಿಂದೆಯೇ ಊಹಿಸಿದ್ದೆ’

ಕಂಗನಾ ರಣಾವತ್​ ‘ಎಮರ್ಜೆನ್ಸಿ’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರವನ್ನ ಮಾಡುತ್ತಿದ್ದಾರೆ. ಈ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇನ್ನು ಈ ಸಿನಿಮಾದಲ್ಲಿ ಅನುಪಮ್​ ಖೇರ್​, ಮಹಿಮಾ ಚೌಧರಿ, ವಿಶಾಕ್​ ನಾಯರ್​ ಮತ್ತು ಶ್ರೇಯಸ್​ ತಲ್ಪಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!