AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಪ್ರತಿ ಚಿತ್ರಕ್ಕೆ ಕೋಟಿ ಕೋಟಿ ಪಡೆಯುವ ಕೀರ್ತಿ ಸುರೇಶ್ ಅವರ ಮೊದಲ ಸಂಭಾವನೆ ಎಷ್ಟು?

ಕೀರ್ತಿ ಸುರೇಶ್ ತಂದೆ-ತಾಯಿ ಇಬ್ಬರೂ ಚಿತ್ರರಂಗದ ಹಿನ್ನೆಲೆಯವರೇ ಆಗಿರುವುದರಿಂದ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಡುವುದು ಸುಲಭವಾಯಿತು. ಅವರ ಮೊದಲ ಸಂಭಾವನೆ ಬಗ್ಗೆ ಇಲ್ಲಿದೆ ಮಾಹಿತಿ.

Keerthy Suresh: ಪ್ರತಿ ಚಿತ್ರಕ್ಕೆ ಕೋಟಿ ಕೋಟಿ ಪಡೆಯುವ ಕೀರ್ತಿ ಸುರೇಶ್ ಅವರ ಮೊದಲ ಸಂಭಾವನೆ ಎಷ್ಟು?
ಕೀರ್ತಿ ಸುರೇಶ್
ರಾಜೇಶ್ ದುಗ್ಗುಮನೆ
|

Updated on: Jul 07, 2023 | 9:09 AM

Share

ನಟಿ ಕೀರ್ತಿ ಸುರೇಶ್ (Keerthy Suresh) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ತೆಲುಗು ಮಾತ್ರವಲ್ಲದೆ ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿಯೂ ಅವರು ಜನಪ್ರಿಯತೆ ಪಡೆದಿದ್ದಾರೆ. ಸದ್ಯ ಹಲವು ತಮಿಳು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಕೋಟಿ ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿರುವ ಅವರಿಗೆ ಮೊದಲು ಇಷ್ಟು ದೊಡ್ಡ ಮೊತ್ತದ ಹಣ ಸಿಗುತ್ತಿರಲಿಲ್ಲ. ಆರಂಭದಲ್ಲಿ ಅವರು ತುಂಬಾನೇ ಶ್ರಮವಹಿಸಿದ್ದರು. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಬಾಲ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟ ಕೀರ್ತಿ ಸುರೇಶ್ ಅವರು ಬಳಿಕ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟರು. ‘ನೇನು ಶೈಲಜಾ’ ಚಿತ್ರದ ಮೂಲಕ ಅವರು ಫೇಮಸ್ ಆದರು. ‘ಮಹಾನಟಿ’ ಚಿತ್ರ ಅವರ ವೃತ್ತಿಜೀವನ ಬದಲಿಸಿತು. ಆ ಬಳಿಕ ಸ್ಟಾರ್ ಹೀರೋಗಳ ಎದುರು ಅವರು ತೆರೆ ಹಂಚಿಕೊಂಡರು. ಕೀರ್ತಿ ಸುರೇಶ್ ತಂದೆ-ತಾಯಿ ಇಬ್ಬರೂ ಚಿತ್ರರಂಗದ ಹಿನ್ನೆಲೆಯವರೇ ಆಗಿರುವುದರಿಂದ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಡುವುದು ಸುಲಭವಾಯಿತು.

ಕೀರ್ತಿ ಸುರೇಶ್ ಈಗಿನ ಸಂಭಾವನೆ ಎಷ್ಟು?

ಫ್ಯಾಶನ್ ಡಿಸೈನಿಂಗ್ ಕೋರ್ಸ್​ ಮುಗಿಸಿದ ಬಳಿಕ ಕೀರ್ತಿ ಸಿನಿಮಾಗೆ ಎಂಟ್ರಿ ಕೊಟ್ಟರು. ಸದ್ಯ ಕೀರ್ತಿ ಸುರೇಶ್ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಒಂದು ಚಿತ್ರಕ್ಕೆ ಅವರು ಚಾರ್ಜ್​ ಮಾಡೋದು 1-3 ಕೋಟಿ ರೂಪಾಯಿ ಎನ್ನಲಾಗಿದೆ. ಇತ್ತೀಚಿಗೆ ರಿಲೀಸ್ ಆದ ಬ್ಲಾಕ್‌ಬಸ್ಟರ್ ಹಿಟ್ ಸಿನಿಮಾ ‘ದಸರಾ’ಕ್ಕಾಗಿ ಅವರು 2 ಕೋಟಿ ರೂಪಾಯಿ ತೆಗೆದುಕೊಂಡಿದ್ದರು.

ಇದನ್ನೂ ಓದಿ: ಉದ್ಯಮಿ ಜೊತೆ ಕೀರ್ತಿ ಸುರೇಶ್ ಸುತ್ತಾಟ​; ಮದುವೆ ಬಗ್ಗೆ ಮಾಹಿತಿ ನೀಡಿದ ನಟಿಯ ತಂದೆ

ಮೊದಲ ಸಂಭಾವನೆ ಎಷ್ಟು?

ಕೀರ್ತಿ ಸುರೇಶ್ ಬಾಲ ನಟಿಯಾಗಿ ಗುರುತಿಸಿಕೊಂಡಿದ್ದರು. ಅವರ ಮೊದಲ ಸಂಭಾವನೆ 500 ರೂಪಾಯಿ ಆಗಿತ್ತು. ಈ ಬಗ್ಗೆ ಅವರ ತಂದೆ ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದರು. ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ‘ಭೋಲಾ ಶಂಕರ್’ ಚಿತ್ರದಲ್ಲಿ ಚಿರಂಜೀವಿ ಅವರ ತಂಗಿಯಾಗಿ ಕೀರ್ತಿ ಸುರೇಶ್ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?