AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಕೀರ್ತಿ ಸುರೇಶ್​ಗೆ ಕೊವಿಡ್ ಪಾಸಿಟಿವ್; ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡ ನಟಿ

Covid 19: ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್​ಗೆ ಕೊವಿಡ್ ದೃಢಪಟ್ಟಿದೆ. ಈ ಕುರಿತು ಟ್ವಿಟರ್​ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Keerthy Suresh: ಕೀರ್ತಿ ಸುರೇಶ್​ಗೆ ಕೊವಿಡ್ ಪಾಸಿಟಿವ್; ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡ ನಟಿ
ಕೀರ್ತಿ ಸುರೇಶ್
TV9 Web
| Edited By: |

Updated on:Jan 11, 2022 | 5:56 PM

Share

ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್​ಗೆ (Keerthy Suresh) ಕೊವಿಡ್ ದೃಢಪಟ್ಟಿದೆ. ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ‘‘ನನಗೆ ಕೊವಿಡ್ ಕಾಣಿಸಿಕೊಂಡಿದ್ದು, ಸೌಮ್ಯ ಲಕ್ಷಣಗಳಿವೆ’’ ಎಂದಿದ್ದಾರೆ. ದೇಶದಲ್ಲಿ ಕೊವಿಡ್ ತೀವ್ರ ಪ್ರಮಾಣದಲ್ಲಿ ಏರುತ್ತಿದೆ. ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದರೂ ಕೂಡ ಸೋಂಕು ತಗುಲಿದೆ ಎಂದು ನಟಿ ಬರೆದುಕೊಂಡಿದ್ದಾರೆ. ಅಲ್ಲದೇ ಎಲ್ಲಾ ಅಭಿಮಾನಿಗಳಿಗೆ ಸೋಂಕನ್ನು ನಿರ್ಲಕ್ಷಿಸದಂತೆ ಕರೆ ನೀಡಿರುವ ಕೀರ್ತಿ, ‘‘ಎಲ್ಲರೂ ಮುನ್ನೆಚ್ಚರಿಕೆಗಳನ್ನು ಪಾಲಿಸಿ. ಒಂದು ವೇಳೆ ಇನ್ನೂ ಲಸಿಕೆ ಪಡೆದಿಲ್ಲ ಎಂದರೆ, ಆದಷ್ಟು ಶೀಘ್ರವಾಗಿ ಪಡೆದುಕೊಳ್ಳಿ. ಇದರಿಂದ ಸೋಂಕಿನ ಪರಿಣಾಮ ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ. ಇದರಿಂದ ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ತೀವ್ರತರ ಸೋಂಕಿನಿಂದ ಪಾರಾಗಬಹುದು’’ ಎಂದು ನಟಿ ಬರೆದುಕೊಂಡಿದ್ದಾರೆ.

ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಮತ್ತೆ ಕೆಲಸಗಳಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೀರ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಟಿಯ ಪೋಸ್ಟ್​ಗೆ ಅಭಿಮಾನಿಗಳು ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಎಂದು ಪ್ರತಿಕ್ರಿಯಿಸುತ್ತಿದ್ದಾರೆ.

ಕೀರ್ತಿ ಸುರೇಶ್ ಟ್ವೀಟ್ ಇಲ್ಲಿದೆ:

ಕೀರ್ತಿ ಸುರೇಶ್ ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಕೀರ್ತಿ ಅಭಿನಯದ ಚಿತ್ರಗಳು ತೆರೆಕಂಡಿದ್ದವು. ರಜಿನಿಕಾಂತ್ ಅಭಿನಯದ ‘ಅಣ್ಣಾಥೆ’, ಮೋಹನ್​ಲಾಲ್ ಸೇರಿದಂತೆ ಖ್ಯಾತ ತಾರೆಯರು ಕಾಣಿಸಿಕೊಂಡಿದ್ದ ‘ಮರಕ್ಕಾರ್: ಅರಬ್ಬಿ ಕಡಲಿಂಟೆ ಸಿಂಹಮ್’ ಚಿತ್ರಗಳು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದವು.

ಕೀರ್ತಿ ಬತ್ತಳಿಕೆಯಲ್ಲಿ ಸದ್ಯ ಐದು ಚಿತ್ರಗಳಿದ್ದು, ಅದರಲ್ಲಿ ‘ಸಾನಿ ಕಾಯಿಧಾಮ್’ ಚಿತ್ರೀಕರಣ ಮುಗಿಸಿದ್ದಾರೆ. ‘ಸರ್ಕಾರಿ ವಾರು ಪಾಟ’, ‘ಭೋಲಾ ಶಂಕರ್’ ‘ವಾಶಿ’, ‘ದಸರಾ’ ಚಿತ್ರದ ಕೆಲಸಗಳು ನಡೆಯುತ್ತಿವೆ. ಮಹೇಶ್ ಬಾಬು, ಚಿರಂಜೀವಿ ಮೊದಲಾದ ಖ್ಯಾತ ತಾರೆಯರೊಂದಿಗೆ ಈ ಚಿತ್ರಗಳಲ್ಲಿ ಕೀರ್ತಿ ಬಣ್ಣಹಚ್ಚುತ್ತಿದ್ದಾರೆ.

ಇದನ್ನೂ ಓದಿ:

ನಮ್ಮ ಗುರುತನ್ನು ಸಾಬೀತುಪಡಿಸಲು ಬಟ್ಟೆ ಬಿಚ್ಚಿ ಎಂದರು: ತ್ರಿಪುರಾದಲ್ಲಿ ಬಂಧನಕ್ಕೊಳಗಾದ ತೃತೀಯ ಲಿಂಗಿಗಳಿಂದ ದೂರು

Saina Nehwal: ‘ನನ್ನ ಮಗಳು ದೇಶಕ್ಕಾಗಿ ಪದಕ ಗೆದ್ದಿದ್ದಾಳೆ; ನೀವೇನು ಮಾಡಿದ್ದೀರಿ?’ ನಟ ಸಿದ್ಧಾರ್ಥ್​ಗೆ ಸೈನಾ ತಂದೆಯ ನೇರ ಪ್ರಶ್ನೆ

Published On - 5:42 pm, Tue, 11 January 22

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?