AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಅಲ್ಲ, ಕಾಮ; ಖುಷ್ಬೂಗೆ ತಂದೆಯಿಂದಲೇ ಆಗಿತ್ತು ಲೈಂಗಿಕ ದೌರ್ಜನ್ಯ 

ಖುಷ್ಬೂ ಸುಂದರ್ ಅವರ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ ಆಗಿತ್ತು. ಆಗ ಅವರಿಗೆ 8 ವರ್ಷ ವಯಸ್ಸು. ವರ್ಷಗಳು ಕಳೆದಂತೆ ಖುಷ್ಬೂಗೆ ಇದೆಲ್ಲ ತಪ್ಪು ಎಂಬುದು ಅರಿವಾಗಲು ಆರಂಭ ಆಯಿತು. 15 ವರ್ಷ ಆಗುತ್ತಿದ್ದಂತೆ ಬಳಿಕ ತಂದೆಯ ವಿರುದ್ಧ ಮಾತನಾಡುವುದನ್ನು ಅವರು ಕಲಿತರು.

ಪ್ರೀತಿ ಅಲ್ಲ, ಕಾಮ; ಖುಷ್ಬೂಗೆ ತಂದೆಯಿಂದಲೇ ಆಗಿತ್ತು ಲೈಂಗಿಕ ದೌರ್ಜನ್ಯ 
ಖುಷ್ಬೂ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Mar 29, 2024 | 8:06 AM

ನಟಿ, ರಾಜಕಾರಣಿ ಖುಷ್ಬೂ ಸುಂದರ್ (Kushboo Sundar) ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರದಲ್ಲಿ ಯಶಸ್ಸು ಸಿಕ್ಕಿದೆ. ಇಂದು (ಮಾರ್ಚ್ 29) ಹುಟ್ಟುಹಬ್ಬ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಅವರು ಕಳೆದ ವರ್ಷ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ನೇಮಕಗೊಂಡಿದ್ದಾರೆ. ಇದರ ಸದಸ್ಯೆ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಆ ಬಳಿಕ ಮಹಿಳೆಯ ಬಗ್ಗೆ ಮಾತನಾಡುವಾಗ ಒಂದು ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದರು. ಬಹುತೇಕ ತಂದೆಯರಿಗೆ ಮಕ್ಕಳ ಮೇಲೆ ಪ್ರೀತಿ ಇರುತ್ತದೆ. ಆದರೆ, ಖಷ್ಬೂ ತಂದೆಗೆ ಮಗಳ ಮೇಲೆ ಇದ್ದಿದ್ದು ಕಾಮ. ಈ ವಿಚಾರವನ್ನು ಅವರು ರಿವೀಲ್ ಮಾಡಿದ್ದರು.

‘ಸಣ್ಣ ವಯಸ್ಸಿನಲ್ಲಿದ್ದಾಗ ಮಗುವಿನ ಮೇಲೆ ದೌರ್ಜನ್ಯ ನಡೆದರೆ ಆ ಕಹಿ ನೆನಪು ಕೊನೆಯವರೆಗೂ ಇರುತ್ತದೆ. ಅದು ಹುಡುಗನೇ ಆಗಿರಬಹುದು, ಹುಡುಗಿಯೇ ಆಗಿರಬಹುದು. ನನ್ನ ತಂದೆಯಿಂದ ನಾನು ಸಾಕಷ್ಟು ಕಿರುಕುಳ ಅನುಭವಿಸಿದ್ದೇನೆ. ಆತ ನನ್ನ ತಾಯಿಗೆ ಸಾಕಷ್ಟು ಹೊಡೆಯುತ್ತಿದ್ದ. ಹೆಂಡತಿಗೆ ಹಾಗೂ ಮಕ್ಕಳಿಗೆ ಹೊಡೆಯೋದು, ಮಗಳಿಗೆ ಲೈಂಗಿಕ ಕಿರುಕುಳ ನೀಡೋದು ಆತನ ಕೆಲಸ ಆಗಿತ್ತು. ಅದನ್ನು ಅವನು ಜನ್ಮಸಿದ್ಧ ಹಕ್ಕು ಎಂದು ಭಾವಿಸಿದ್ದ’ ಎಂದು ಖುಷ್ಬೂ ಸುಂದರ್ ಹೇಳಿಕೊಂಡಿದ್ದರು.

ಖುಷ್ಬೂ ಸುಂದರ್ ಅವರ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ ಆಗಿತ್ತು. ಆಗ ಅವರಿಗೆ 8 ವರ್ಷ ವಯಸ್ಸು. ವರ್ಷಗಳು ಕಳೆದಂತೆ ಖುಷ್ಬೂಗೆ ಇದೆಲ್ಲ ತಪ್ಪು ಎಂಬುದು ಅರಿವಾಗಲು ಆರಂಭ ಆಯಿತು. 15 ವರ್ಷ ಆಗುತ್ತಿದ್ದಂತೆ ಬಳಿಕ ತಂದೆಯ ವಿರುದ್ಧ ಮಾತನಾಡುವುದನ್ನು ಅವರು ಕಲಿತರು. ಈ ಮೂಲಕ ಎಲ್ಲವನ್ನೂ ಎದುರಿಸಿ ನಿಂತರು.

ಆಗ ಖುಷ್ಬೂ ಸುಂದರ್ ಪರಿಸ್ಥಿತಿ ತುಂಬಾನೇ ಕಷ್ಟದಲ್ಲಿ ಇತ್ತು. ಒಂದೊಮ್ಮೆ ಈ ವಿಚಾರವನ್ನು ಅವರು ಹೇಳಿದ್ದರೆ ಕುಟುಂಬದ ಇತರ ಸದಸ್ಯರು ನಿಂದನೆಗೆ ಒಳಗಾಗಬಹುದು ಎನ್ನುವ ಭಯ ಇತ್ತು. ಇನ್ನು ತಾಯಿ ಗಂಡನೇ ಪರದೈವ ಎಂದು ನಂಬಿದವರು. ಹೀಗಾಗಿ, ಖುಷ್ಬೂ ಈ ವಿಚಾರವನ್ನು ಹೇಳಿದ್ದರೂ ತಾಯಿ ಅದನ್ನು ನಂಬುತ್ತಿರಲಿಲ್ಲ. ಹೀಗಾಗಿ ಅವರೇ ತಂದೆಯ ವಿರುದ್ಧ ತಿರುಗಿಬಿದ್ದರು. ತಪ್ಪಿನ ವಿರುದ್ಧ ಅವರು ಸಿಡಿದೆದ್ದರು.

ಇದನ್ನೂ ಓದಿ: ನಟನಾ ತರಬೇತಿ ಮುಗಿದರೂ ಮಗಳನ್ನು ಸಿನಿಮಾ ರಂಗಕ್ಕೆ ಲಾಂಚ್ ಮಾಡಲ್ಲ ಖುಷ್ಬೂ

ಖುಷ್ಬೂ ಅವರು ಕನ್ನಡದಲ್ಲಿ ಹೆಚ್ಚು ಹೆಸರು ಮಾಡಿದ್ದಾರೆ. ‘ರಣಧೀರ’ ಅವರ ನಟನೆಯ ಮೊದಲ ಕನ್ನಡ ಸಿನಿಮಾ. ರವಿಚಂದ್ರನ್ ಜೊತೆ ನಟಿಸಿ ಅವರು ಫೇಮಸ್ ಆದರು. ಕನ್ನಡ ಮಾತ್ರವಲ್ಲದೆ, ತಮಿಳು, ಹಿಂದಿ ಮೊದಲಾದ ಭಾಷೆಗಳಲ್ಲಿ ನಟಿಸಿದ್ದಾರೆ. 2010ರಲ್ಲಿ ಅವರು ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟು ಯಶಸ್ಸು ಪಡೆದರು. ಕನ್ನಡದ ಮೇಲೆ, ಕನ್ನಡ ಚಿತ್ರರಂಗದ ಬಗ್ಗೆ ಅವರಿಗೆ ಈಗಲೂ ಪ್ರೀತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Fri, 29 March 24

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ