AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಮಂದಿರಾ ಬೇಡಿ ಪತಿ ರಾಜ್​ ಕೌಶಲ್​ ನಿಧನ; 49 ವರ್ಷಕ್ಕೇ ಬದುಕು ಮುಗಿಸಿದ ಬಾಲಿವುಡ್ ಸಿನಿಮಾ ನಿರ್ಮಾಪಕ

Raj Kaushal: ರಾಜ್​ಕೌಶಲ್​​ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಕೆಲಸ ಮಾಡಿದವರು. ಪ್ಯಾರ್​ ಮೇನ್​ ಕಭಿ ಕಭಿ, ಶಾದಿ ಕಾ ಲಡ್ಡೂ ಮತ್ತು ಅಂಥೋನಿ ಕೌನ್​ ಹೈ ಎಂಬ ಮೂರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ನಟಿ ಮಂದಿರಾ ಬೇಡಿ ಪತಿ ರಾಜ್​ ಕೌಶಲ್​ ನಿಧನ; 49 ವರ್ಷಕ್ಕೇ ಬದುಕು ಮುಗಿಸಿದ ಬಾಲಿವುಡ್ ಸಿನಿಮಾ ನಿರ್ಮಾಪಕ
ನಟಿ ಮಂದಿರಾ ಬೇಡಿ ಮತ್ತು ಆಕೆಯ ಪತಿ ರಾಜ್​ ಕೌಶಲ್​
TV9 Web
| Edited By: |

Updated on: Jun 30, 2021 | 1:15 PM

Share

ಬಾಲಿವುಡ್​ ನಟಿ ಮಂದಿರಾ ಬೇಡಿ ಪತಿ, ಸಿನಿಮಾ ನಿರ್ಮಾಪಕ ರಾಜ್​ ಕೌಶಲ್​ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಸುದ್ದಿಯನ್ನು ರಾಜ್​ ಕೌಶಲ್​​ರೊಂದಿಗೆ ಕೆಲಸ ಮಾಡುತ್ತಿದ್ದ ನಿರ್ದೇಶಕ ಒನಿರ್​ ದೃಢಪಡಿಸಿದ್ದಾರೆ. ರಾಜ್​ ಕೌಶಲ್​​ಗೆ 49ವರ್ಷ ವಯಸ್ಸಾಗಿತ್ತು. ನಟನಾಗಿ ವೃತ್ತಿ ಜೀವನ ಶುರು ಮಾಡಿದ್ದ ಇವು, ಮೂರು ಸಿನಿಮಾಗಳನ್ನು ನಿರ್ದೇಶನ ಕೂಡ ಮಾಡಿದ್ದಾರೆ. 1999ರಲ್ಲಿ ಮಂದಿರಾ ಬೇಡಿಯನ್ನು ವಿವಾಹವಾಗಿದ್ದರು. ಈ ದಂಪತಿಗೆ ವೀರ್​ ಮತ್ತು ತಾರಾ ಎಂಬ ಇಬ್ಬರು ಮಕ್ಕಳಿದ್ದಾರೆ.

ಟ್ವೀಟ್ ಮಾಡಿರುವ ನಿರ್ದೇಶಕ ಒನಿರ್​, ನಾವು ಸಿನಿಮಾ ನಿರ್ಮಾಪಕ, ನಿರ್ದೇಶಕ ರಾಜ್​​ಕೌಶಲ್​​ರನ್ನು ಇಂದು ಮುಂಜಾನೆ ಕಳೆದುಕೊಂಡಿದ್ದೇವೆ. ತುಂಬ ಬೇಗನೇ ಹೋಗಿಬಿಟ್ಟರು ಎಂದು ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಮೈ ಬ್ರದರ್​ ನಿಖಿಲ್​ ಸಿನಿಮಾದ ನಿರ್ಮಾಪಕರಲ್ಲಿ ರಾಜ್​ ಕೌಶಲ್​ ಕೂಡ ಒಬ್ಬರಾಗಿದ್ದರು. ನನ್ನನ್ನು ನಂಬಿ, ಬೆಂಬಲಿಸಿದ ಕೆಲವೇ ಮಂದಿಯಲ್ಲಿ ಇವರೂ ಒಬ್ಬರಾಗಿದ್ದರು ಎಂದು ಒನಿರ್​ ಹೇಳಿದ್ದಾರೆ. ಮುಂಜಾನೆ 4.30ರ ಹೊತ್ತಲ್ಲಿ ಮನೆಯಲ್ಲೇ ಇದ್ದಾಗ ಹೃದಯಾಘಾತ ಆಗಿದ್ದಾಗಿ ಅವರ ಕುಟುಂಬದ ಸ್ನೇಹಿತರಾದ ರೋಹಿತ್​ ರಾಯ್ ತಿಳಿಸಿದ್ದಾರೆ.

ರಾಜ್​ಕೌಶಲ್​​ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಕೆಲಸ ಮಾಡಿದವರು. ಪ್ಯಾರ್​ ಮೇನ್​ ಕಭಿ ಕಭಿ, ಶಾದಿ ಕಾ ಲಡ್ಡೂ ಮತ್ತು ಅಂಥೋನಿ ಕೌನ್​ ಹೈ ಎಂಬ ಮೂರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. 2006ರಲ್ಲಿ ಥ್ರಿಲ್ಲರ್​ ಸಿನಿಮಾ ಅಂಥೋನಿ ಕೌನ್​ ಹೈ ನಿರ್ದೇಶನ ಮಾಡಿದ ಬಳಿಕ ಮತ್ತೆ ಯಾವುದೇ ಸಿನಿಮಾವನ್ನೂ ನಿರ್ದೇಶನ ಮಾಡಲಿಲ್ಲ. ನಂತರ ಸಿನಿಮಾ ನಿರ್ಮಾಣ ಶುರು ಮಾಡಿದ್ದರು. ಕೌಶಲ್​ ಮತ್ತು ಮಂದಿರಾ ಬೇಡಿ 1999ರಲ್ಲಿ ಮದುವೆಯಾಗಿದ್ದಾರೆ. 2011ರಲ್ಲಿ ಮೊದಲ ಮಗು ಹುಟ್ಟಿದ್ದು ಅವನಿಗೆ ವೀರ್​ ಎಂದು ನಾಮಕರಣ ಮಾಡಲಾಗಿದೆ. ನಂತರ ಕಳೆದ ವರ್ಷ ಮಗಳನ್ನು ದತ್ತು ತೆಗೆದುಕೊಂಡಿದ್ದು, ಆಕೆಗೆ ತಾರಾ ಬೇಡಿ ಕೌಶಲ್​ ಎಂದು ಹೆಸರಿಟ್ಟಿದ್ದಾರೆ.

ಇದನ್ನೂ ಓದಿ: Dilip Kumar: ಬಾಲಿವುಡ್​ ಖ್ಯಾತ ನಟ ದಿಲೀಪ್​ ಕುಮಾರ್​ ಮತ್ತೆ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ

(Actress Mandira Bedis husband, producer Raj Kaushal dies In Mumbai)

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್