AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಮಂದಿರಾ ಬೇಡಿ ಪತಿ ರಾಜ್​ ಕೌಶಲ್​ ನಿಧನ; 49 ವರ್ಷಕ್ಕೇ ಬದುಕು ಮುಗಿಸಿದ ಬಾಲಿವುಡ್ ಸಿನಿಮಾ ನಿರ್ಮಾಪಕ

Raj Kaushal: ರಾಜ್​ಕೌಶಲ್​​ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಕೆಲಸ ಮಾಡಿದವರು. ಪ್ಯಾರ್​ ಮೇನ್​ ಕಭಿ ಕಭಿ, ಶಾದಿ ಕಾ ಲಡ್ಡೂ ಮತ್ತು ಅಂಥೋನಿ ಕೌನ್​ ಹೈ ಎಂಬ ಮೂರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ನಟಿ ಮಂದಿರಾ ಬೇಡಿ ಪತಿ ರಾಜ್​ ಕೌಶಲ್​ ನಿಧನ; 49 ವರ್ಷಕ್ಕೇ ಬದುಕು ಮುಗಿಸಿದ ಬಾಲಿವುಡ್ ಸಿನಿಮಾ ನಿರ್ಮಾಪಕ
ನಟಿ ಮಂದಿರಾ ಬೇಡಿ ಮತ್ತು ಆಕೆಯ ಪತಿ ರಾಜ್​ ಕೌಶಲ್​
TV9 Web
| Edited By: |

Updated on: Jun 30, 2021 | 1:15 PM

Share

ಬಾಲಿವುಡ್​ ನಟಿ ಮಂದಿರಾ ಬೇಡಿ ಪತಿ, ಸಿನಿಮಾ ನಿರ್ಮಾಪಕ ರಾಜ್​ ಕೌಶಲ್​ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಸುದ್ದಿಯನ್ನು ರಾಜ್​ ಕೌಶಲ್​​ರೊಂದಿಗೆ ಕೆಲಸ ಮಾಡುತ್ತಿದ್ದ ನಿರ್ದೇಶಕ ಒನಿರ್​ ದೃಢಪಡಿಸಿದ್ದಾರೆ. ರಾಜ್​ ಕೌಶಲ್​​ಗೆ 49ವರ್ಷ ವಯಸ್ಸಾಗಿತ್ತು. ನಟನಾಗಿ ವೃತ್ತಿ ಜೀವನ ಶುರು ಮಾಡಿದ್ದ ಇವು, ಮೂರು ಸಿನಿಮಾಗಳನ್ನು ನಿರ್ದೇಶನ ಕೂಡ ಮಾಡಿದ್ದಾರೆ. 1999ರಲ್ಲಿ ಮಂದಿರಾ ಬೇಡಿಯನ್ನು ವಿವಾಹವಾಗಿದ್ದರು. ಈ ದಂಪತಿಗೆ ವೀರ್​ ಮತ್ತು ತಾರಾ ಎಂಬ ಇಬ್ಬರು ಮಕ್ಕಳಿದ್ದಾರೆ.

ಟ್ವೀಟ್ ಮಾಡಿರುವ ನಿರ್ದೇಶಕ ಒನಿರ್​, ನಾವು ಸಿನಿಮಾ ನಿರ್ಮಾಪಕ, ನಿರ್ದೇಶಕ ರಾಜ್​​ಕೌಶಲ್​​ರನ್ನು ಇಂದು ಮುಂಜಾನೆ ಕಳೆದುಕೊಂಡಿದ್ದೇವೆ. ತುಂಬ ಬೇಗನೇ ಹೋಗಿಬಿಟ್ಟರು ಎಂದು ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಮೈ ಬ್ರದರ್​ ನಿಖಿಲ್​ ಸಿನಿಮಾದ ನಿರ್ಮಾಪಕರಲ್ಲಿ ರಾಜ್​ ಕೌಶಲ್​ ಕೂಡ ಒಬ್ಬರಾಗಿದ್ದರು. ನನ್ನನ್ನು ನಂಬಿ, ಬೆಂಬಲಿಸಿದ ಕೆಲವೇ ಮಂದಿಯಲ್ಲಿ ಇವರೂ ಒಬ್ಬರಾಗಿದ್ದರು ಎಂದು ಒನಿರ್​ ಹೇಳಿದ್ದಾರೆ. ಮುಂಜಾನೆ 4.30ರ ಹೊತ್ತಲ್ಲಿ ಮನೆಯಲ್ಲೇ ಇದ್ದಾಗ ಹೃದಯಾಘಾತ ಆಗಿದ್ದಾಗಿ ಅವರ ಕುಟುಂಬದ ಸ್ನೇಹಿತರಾದ ರೋಹಿತ್​ ರಾಯ್ ತಿಳಿಸಿದ್ದಾರೆ.

ರಾಜ್​ಕೌಶಲ್​​ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಕೆಲಸ ಮಾಡಿದವರು. ಪ್ಯಾರ್​ ಮೇನ್​ ಕಭಿ ಕಭಿ, ಶಾದಿ ಕಾ ಲಡ್ಡೂ ಮತ್ತು ಅಂಥೋನಿ ಕೌನ್​ ಹೈ ಎಂಬ ಮೂರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. 2006ರಲ್ಲಿ ಥ್ರಿಲ್ಲರ್​ ಸಿನಿಮಾ ಅಂಥೋನಿ ಕೌನ್​ ಹೈ ನಿರ್ದೇಶನ ಮಾಡಿದ ಬಳಿಕ ಮತ್ತೆ ಯಾವುದೇ ಸಿನಿಮಾವನ್ನೂ ನಿರ್ದೇಶನ ಮಾಡಲಿಲ್ಲ. ನಂತರ ಸಿನಿಮಾ ನಿರ್ಮಾಣ ಶುರು ಮಾಡಿದ್ದರು. ಕೌಶಲ್​ ಮತ್ತು ಮಂದಿರಾ ಬೇಡಿ 1999ರಲ್ಲಿ ಮದುವೆಯಾಗಿದ್ದಾರೆ. 2011ರಲ್ಲಿ ಮೊದಲ ಮಗು ಹುಟ್ಟಿದ್ದು ಅವನಿಗೆ ವೀರ್​ ಎಂದು ನಾಮಕರಣ ಮಾಡಲಾಗಿದೆ. ನಂತರ ಕಳೆದ ವರ್ಷ ಮಗಳನ್ನು ದತ್ತು ತೆಗೆದುಕೊಂಡಿದ್ದು, ಆಕೆಗೆ ತಾರಾ ಬೇಡಿ ಕೌಶಲ್​ ಎಂದು ಹೆಸರಿಟ್ಟಿದ್ದಾರೆ.

ಇದನ್ನೂ ಓದಿ: Dilip Kumar: ಬಾಲಿವುಡ್​ ಖ್ಯಾತ ನಟ ದಿಲೀಪ್​ ಕುಮಾರ್​ ಮತ್ತೆ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ

(Actress Mandira Bedis husband, producer Raj Kaushal dies In Mumbai)

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​