AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯನ್ನು ಕಳೆದುಕೊಂಡ ದುಃಖದಲ್ಲಿ ವಿಶೇಷ ಮನವಿ ಮಾಡಿದ ನಟಿ ಮೀನಾ

ವಿದ್ಯಾ ಸಾಗರ್ ನಿಧನಕ್ಕೆ ಕೊವಿಡ್ ಕಾರಣ ಎಂದೇ ಹೇಳಲಾಗಿತ್ತು. ಈ ಬಗ್ಗೆ ಅನೇಕ ಅಂತೆಕಂತೆಗಳು ಹರಿದಾಡಿದ್ದವು. ಈ ಸಂದರ್ಭದಲ್ಲಿ ವದಂತಿಗಳನ್ನು ಜನರು ನಿಜ ಎಂದು ನಂಬಿಕೊಳ್ಳುತ್ತಾರೆ. ಹಾಗಾಗಬಾರದು ಎಂಬ ಕಾರಣಕ್ಕೆ ಮೀನಾ ವಿಶೇಷ ಮನವಿ ಮಾಡಿದ್ದಾರೆ.

ಪತಿಯನ್ನು ಕಳೆದುಕೊಂಡ ದುಃಖದಲ್ಲಿ ವಿಶೇಷ ಮನವಿ ಮಾಡಿದ ನಟಿ ಮೀನಾ
ಮೀನಾ
TV9 Web
| Edited By: |

Updated on: Jul 01, 2022 | 7:12 PM

Share

ಬಹುಭಾಷಾ ನಟಿ ಮೀನಾ (Actress Meena) ಅವರ ಪತಿ ವಿದ್ಯಾ ಸಾಗರ್ (Vidya Sagar) ಅವರು ಇತ್ತೀಚೆಗೆ ಮೃತಪಟ್ಟರು. ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಅವರು ಮೃತಪಟ್ಟ ವಿಚಾರ ಕೇಳಿ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಪತಿಯನ್ನು ಕಳೆದುಕೊಂಡ ನೋವು ಮೀನಾ ಅವರನ್ನು ಬಹುವಾಗಿ ಕಾಡಿದೆ. ವಿದ್ಯಾ ಸಾಗರ್ ನಿಧನದ ನಂತರದಲ್ಲಿ ಅವರು ಇದೇ ಮೊದಲ ಬಾರಿಗೆ ಮೀನಾ ಪ್ರತಿಕ್ರಿಯೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

‘ನನ್ನ ಪ್ರೀತಿಯ ಪತಿ ವಿದ್ಯಾ ಸಾಗರ್ ಅವರ ಅಗಲಿಕೆಯಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ನಮ್ಮ ಖಾಸಗಿತನವನ್ನು ಗೌರವಿಸಿ ಮತ್ತು ಸ್ವಲ್ಪ ಸಹಾನುಭೂತಿಯನ್ನು ತೋರಿಸಿ ಎಂದು ನಾನು ಎಲ್ಲಾ ಮಾಧ್ಯಮಗಳ ಬಳಿ ಪ್ರಾಮಾಣಿಕವಾಗಿ ವಿನಂತಿಸುತ್ತೇನೆ’ ಎಂದು ಪತ್ರ ಆರಂಭಿಸಿದ್ದಾರೆ ಮೀನಾ.

ಇದನ್ನೂ ಓದಿ
Image
ಹಾಟ್ ಅವತಾರ ತಾಳಿದ ರಾಶಿ ಖನ್ನಾಗೆ ಸಖತ್ ಡಿಮ್ಯಾಂಡ್
Image
Meena: ಮೀನಾ ಪತಿ ವಿದ್ಯಾಸಾಗರ್​ ಸಾವಿಗೆ ಕಾರಣ ಏನು? ಕೊವಿಡ್​ ಕುರಿತ ಅನುಮಾನಕ್ಕೆ ಖುಷ್ಬೂ ಪ್ರತಿಕ್ರಿಯೆ
Image
Meena: ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್​​ ಇನ್ನಿಲ್ಲ; ಶ್ವಾಸಕೋಶದ ಸೋಂಕಿನಿಂದ ನಿಧನ

ವಿದ್ಯಾ ಸಾಗರ್ ನಿಧನಕ್ಕೆ ಕೊವಿಡ್ ಕಾರಣ ಎಂದೇ ಹೇಳಲಾಗಿತ್ತು. ಈ ಬಗ್ಗೆ ಅನೇಕ ಅಂತೆಕಂತೆಗಳು ಹರಿದಾಡಿದ್ದವು. ಈ ಕುರಿತು ನಟಿ ಖುಷ್ಬೂ ಕಡೆಯಿಂದ ಸ್ಪಷ್ಟನೆ ಕೂಡ ಸಿಕ್ಕಿತ್ತು. ಈ ಸಂದರ್ಭದಲ್ಲಿ ವದಂತಿಗಳನ್ನು ಜನರು ನಿಜ ಎಂದು ನಂಬಿಕೊಳ್ಳುತ್ತಾರೆ. ಹಾಗಾಗಬಾರದು ಎಂಬ ಕಾರಣಕ್ಕೆ ಮೀನಾ ವಿಶೇಷ ಮನವಿ ಮಾಡಿದ್ದಾರೆ. ‘ದಯವಿಟ್ಟು ಈ ವಿಷಯದ ಕುರಿತು ಯಾವುದೇ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಬೇಡಿ’ ಎಂದು ಕೋರಿದ್ದಾರೆ.

ಈ ಸಂದರ್ಭದಲ್ಲಿ ಬೆಂಬಲಕ್ಕೆ ನಿಂತ ಎಲ್ಲರಿಗೂ ಮೀನಾ ಧನ್ಯವಾದ ಹೇಳಿದ್ದಾರೆ. ‘ಈ ಕಷ್ಟದ ಸಮಯದಲ್ಲಿ ನಮ್ಮ ಕುಟುಂಬದ ಸಹಾಯಕ್ಕೆ ನಿಂತ ಒಳ್ಳೆಯ ಹೃದಯಗಳಿಗೆ ನನ್ನ ಕೃತಜ್ಞತೆ. ಅತ್ಯುತ್ತಮ ಪ್ರಯತ್ನ ಮಾಡಿದ ಎಲ್ಲಾ ವೈದ್ಯಕೀಯ ತಂಡಕ್ಕೆ, ನಮ್ಮ ಸಿಎಂ, ಆರೋಗ್ಯ ಸಚಿವರು, ಸ್ನೇಹಿತರು, ಕುಟುಂಬ, ಮಾಧ್ಯಮಗಳು ಪ್ರೀತಿ ಕಳುಹಿಸಿದ್ದಕ್ಕಾಗಿ ಧನ್ಯವಾದ ಹೇಳಲು ಬಯಸುತ್ತೇನೆ’ ಎಂದಿದ್ದಾರೆ ಮೀನಾ.

ಖುಷ್ಬೂ ಹೇಳಿದ್ದೇನು?

ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್​ ನಿಧನಕ್ಕೆ ಕೊರೊನಾ ಕಾರಣ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಯಿತು. ಅದು ಖುಷ್ಬೂ ಗಮನಕ್ಕೆ ಬಂದಿದೆ. ಆ ಕುರಿತು ಅವರು ಟ್ವೀಟ್​ ಮಾಡಿದ್ದಾರೆ. ‘ಮಾಧ್ಯಮದವರು ತುಂಬ ಜವಾಬ್ದಾರಿಯುತವಾಗಿ ಇರಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ಮೀನಾ ಪತಿಗೆ ಮೂರು ತಿಂಗಳ ಹಿಂದೆ ಕೊವಿಡ್​ ಆಗಿತ್ತು. ಅದರಿಂದ ಅವರ ಶ್ವಾಸಕೋಶದ ಸ್ಥಿತಿ ಹದಗೆಟ್ಟಿತ್ತು. ಆದರೆ ಕೊವಿಡ್​ನಿಂದಲೇ ಅವರು ಮೃತರಾದರು ಎಂದು ಹೇಳುವ ಮೂಲಕ ತಪ್ಪು ಮಾಹಿತಿ ಮತ್ತು ಭಯವನ್ನು ಹುಟ್ಟುಹಾಕಬೇಡಿ. ನಾವು ಎಚ್ಚರಿಕೆಯಿಂದ ಇರಬೇಕು’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Meena: ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್​​ ಇನ್ನಿಲ್ಲ; ಶ್ವಾಸಕೋಶದ ಸೋಂಕಿನಿಂದ ನಿಧನ

Meena: ಮೀನಾ ಪತಿ ವಿದ್ಯಾಸಾಗರ್​ ಸಾವಿಗೆ ಕಾರಣ ಏನು? ಕೊವಿಡ್​ ಕುರಿತ ಅನುಮಾನಕ್ಕೆ ಖುಷ್ಬೂ ಪ್ರತಿಕ್ರಿಯೆ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?