AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದೆ ವಂಚನೆ, ನಿರ್ಮಾಪಕನ ವಿರುದ್ಧ ಠಾಣೆ ಮೆಟ್ಟಿಲೇರಿದ ನಟಿ

ಹಿಂದಿ ಟಿವಿ ಜಗತ್ತಿನ ಜನಪ್ರಿಯ ನಟಿ ಮೀರಾ ದೋಸ್ತಲೆ, ‘ವಿದ್ಯಾ’ ಧಾರಾವಾಹಿಯ ನಿರ್ಮಾಪಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಟಿಯ ದೂರಿಗೆ ನಿರ್ಮಾಪಕ ಮಹೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ಹಣ ನೀಡದೆ ವಂಚನೆ, ನಿರ್ಮಾಪಕನ ವಿರುದ್ಧ ಠಾಣೆ ಮೆಟ್ಟಿಲೇರಿದ ನಟಿ
ಮಂಜುನಾಥ ಸಿ.
|

Updated on: Jun 06, 2024 | 12:10 PM

Share

ಹಿಂದಿ ಟಿವಿ ತಾರೆ ಮೀರಾ ದೋಸ್ತಲೆ, ತಾನು ಕೆಲಸ ಮಾಡಿದ ಧಾರಾವಾಹಿಯ (Serial) ನಿರ್ಮಾಪಕರ (Prodecer) ವಿರುದ್ಧ ಠಾಣೆ ಮೆಟ್ಟಿಲೇರಿದ್ದಾರೆ. ಮೀರಾ 2019ರಲ್ಲಿ ಕೆಲಸ ಮಾಡಿದ್ದ ‘ವಿದ್ಯಾ’ ಧಾರಾವಾಹಿಯ ನಿರ್ಮಾಪಕ ಮಹೇಶ್ ಪಾಂಡೆ ವಿರುದ್ಧ ದೂರು ನೀಡಿದ್ದು, ಕೆಲಸ ಮಾಡಿಸಿಕೊಂಡು ಸಂಭಾವನೆಯನ್ನು ಪೂರ್ತಿ ನೀಡಿಲ್ಲವೆಂದು, ಹಣ ವಂಚನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ವಿಚಾರಣೆಯ ಭರವಸೆ ನೀಡಿದ್ದಾರೆ.

ಮೀರಾ ಈ ಹಿಂದೆ ‘ವಿದ್ಯಾ’ ಹೆಸರಿನ ಧಾರಾವಾಹಿಯಲ್ಲಿ ನಟಿಸಿದ್ದರು. ಅವರ ಸಂಭಾವನೆ 8 ಲಕ್ಷ ರೂಪಾಯಿಗಳಾಗಿತ್ತು. ಆದರೆ ನಾಲ್ಕು ಲಕ್ಷ ಮಾತ್ರವೇ ನೀಡಿದ್ದ ನಿರ್ಮಾಪಕ ಮಹೇಶ್ ಪಾಂಡೆ ಬಾಕಿ ಹಣ ನೀಡಿರಲಿಲ್ಲ. ಬಾಕಿ ಹಣ ಕೇಳಿದಾಗ ಸಬೂಬುಗಳನ್ನು ಹೇಳಿದ್ದರು. ತಮ್ಮ ಕರೆಗಳನ್ನು ಸ್ವೀಕರಿಸುವುದನ್ನು ಬಿಟ್ಟಿದ್ದರು. ಹಾಗಾಗಿ ತಾವು ಪೊಲೀಸ್ ಠಾಣೆ ಮೆಟ್ಟಿಲೇರಿರುವುದಾಗಿ ನಟಿ ತಿಳಿಸಿದ್ದಾರೆ. ‘ನಾಲ್ಕು ಲಕ್ಷ ರೂಪಾಯಿ ಮೊತ್ತ ಕೆಲವರಿಗೆ ಚಿಕ್ಕದು ಎನಿಸಬಹುದು ಆದರೆ ನನ್ನ ಕುಟುಂಬವನ್ನು ನಾನೊಬ್ಬಳೆ ಪೋಷಿಸುತ್ತಿದ್ದು, ನಾಲ್ಕು ಲಕ್ಷ ನನಗೆ ದೊಡ್ಡ ಮೊತ್ತ. ಅಲ್ಲದೆ ನಾನು ಕಷ್ಟಪಟ್ಟು ದುಡಿದ ಹಣವನ್ನು ನಾನು ಕೇಳುವುದರಲ್ಲಿ ತಪ್ಪೇನು? ಹಾಗಾಗಿ ನಿರ್ಮಾಪಕನ ವಿರುದ್ಧ ದೂರು ನೀಡಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ:ಉದಯ ಟಿವಿಯಲ್ಲಿ ‘ಶ್ರೀಮದ್ ರಾಮಾಯಣ’ ಧಾರಾವಾಹಿ ನೋಡಿ, ನಗದು ಬಹುಮಾನ ಗೆಲ್ಲಿ

ನಟಿಯ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ಮಾಪಕ ಮಹೇಶ್ ಪಾಂಡೆ, ‘ವಿದ್ಯಾ’ ಧಾರಾವಾಹಿಯಿಂದಾಗಿ ನನಗೆ ನಾಲ್ಕು ಕೋಟಿ ರೂಪಾಯಿ ನಷ್ಟವಾಗಿದೆ. ನಟಿ ಮೀರಾಗೆ ನಾನು ಜಿಎಸ್​ಟಿ ಸೇರಿಸಿ 83 ಲಕ್ಷ ರೂಪಾಯಿಗಳನ್ನು ಪಾವತಿ ಮಾಡಿದ್ದೇನೆ. ಆ ಬಗ್ಗೆ ನಟಿ ಏಕೆ ಮಾತನಾಡುತ್ತಿಲ್ಲ, ನಾನು ಬಾಕಿ ಕೊಡಬೇಕಾಗಿರುವುದು ಮೂರು ಲಕ್ಷ ರೂಪಾಯಿಗಳು ಮಾತ್ರ. ನನಗೆ ನಷ್ಟವಾದ ಕಾರಣ ನಾನು ಹಣ ಪಾವತಿ ಮಾಡಲು ಆಗಲಿಲ್ಲ. ‘ವಿದ್ಯಾ’ ಶೋ ಮುಗಿದಿಲ್ಲ ಬದಲಿಗೆ ಅರ್ಧಕ್ಕೆ ನಿಲ್ಲಿಸಲಾಯ್ತು. ಅದರ ಬಗ್ಗೆ ನಟಿ ಮಾತನಾಡಲಿ’ ಎಂದಿದ್ದಾರೆ.

‘ಆಕೆಗೆ ಮೋಸ ಮಾಡುವ ಉದ್ದೇಶ ಹೊಂದಿದ್ದಿದ್ದರೆ ಬರೀ 3 ಲಕ್ಷ ಹಣ ನೀಡಿ ಸುಮ್ಮನಾಗಿರುತ್ತಿದ್ದೆ. ನಾನು ದೊಡ್ಡ ಮೊತ್ತವನ್ನೇ ನಟಿಗೆ ನೀಡಿದ್ದೇನೆ. ಈಗಲೂ ಸಹ ಬಾಕಿ ಹಣವನ್ನು ನೀಡುವ ಉದ್ದೇಶದಲ್ಲಿಯೇ ಇದ್ದೇನೆ. ಆಕೆಯ ಬಾಕಿ ಮೊತ್ತವನ್ನೆಲ್ಲ ಲೆಕ್ಕ ಹಾಕಿದ ಬಳಿಕ ಬಾಕಿ ಹಣ ಪಾವತಿಸುತ್ತೇನೆ’ ಎಂದಿದ್ದಾರೆ.

ನಟಿ ಮೀರಾ ಕೆಲವು ಹಿಂದಿ ಧಾರಾವಾಹಿಗಳು, ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದಾರೆ. ‘ವಿದ್ಯಾ’ ಧಾರಾವಾಹಿ 2019 ರಲ್ಲಿ ಶುರುವಾಗಿ ಕೆಲವೇ ತಿಂಗಳುಗಳ ಬಳಿಕ 2020ರಲ್ಲಿ ಅಂತ್ಯವಾಯ್ತು. ಆ ಬಳಿಕ ಮೀರಾ, ‘ಕುಚ್ ರೀತ್ ಜಗತ್ ಕೀ ಐಸಿ ಹೋ’ ಎಂಬ ಧಾರಾವಾಹಿಯಲ್ಲಿ ನಂದಿನಿ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನೂ ಕೆಲವು ಧಾರಾವಾಹಿಗಳಲ್ಲಿ ಮೀರಾ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!