AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪರಿಶಿಷ್ಟ ಜಾತಿ ಜನರನ್ನು ಚಿತ್ರರಂಗದಿಂದ ಓಡಿಸಬೇಕು’; ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರಾ ವಿರುದ್ಧ ಕೇಸ್​

ತನ್ನನ್ನು ತಾನು ಸೂಪರ್​ ಮಾಡೆಲ್​ ಎಂದು ಕರೆದುಕೊಳ್ಳುವ ನಟಿ ಮೀರಾ ಮಿಥುನ್ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಚಿತ್ರರಂಗದಲ್ಲಿ ಆಗುತ್ತಿರುವ ಕೆಡುಕುಗಳಿಗೆ ಪರಿಶಿಷ್ಟ ಜಾತಿ ಜನರು ಕಾರಣ ಎಂದು ಅವರು ಹೇಳಿರುವುದು ಆಕ್ರೋಶಕ್ಕೆ ಗುರಿ ಆಗಿದೆ.

‘ಪರಿಶಿಷ್ಟ ಜಾತಿ ಜನರನ್ನು ಚಿತ್ರರಂಗದಿಂದ ಓಡಿಸಬೇಕು’; ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರಾ ವಿರುದ್ಧ ಕೇಸ್​
‘ಪರಿಶಿಷ್ಟ ಜಾತಿ ಜನರನ್ನು ಚಿತ್ರರಂಗದಿಂದ ಓಡಿಸಬೇಕು’; ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರಾ ವಿರುದ್ಧ ಕೇಸ್​
TV9 Web
| Updated By: ಮದನ್​ ಕುಮಾರ್​|

Updated on: Aug 11, 2021 | 9:29 AM

Share

ಕಾಲಿವುಡ್​ ನಟಿ ಮೀರಾ ಮಿಥುನ್ (Meera Mithun)​ ಅವರು ಈಗ ಅನಗತ್ಯವಾಗಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಸಂದರ್ಶನವೊಂದಲ್ಲಿ ಮಾತನಾಡುವ ಭರದಲ್ಲಿ ಅವರು ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡಿದ್ದಾರೆ. ‘ಚಿತ್ರರಂಗದಲ್ಲಿ ಆಗುತ್ತಿರುವ ಅನೇಕ ಅನಾಹುತಗಳಿಗೆ ಪರಿಶಿಷ್ಟ ಜಾತಿಯ (Scheduled Caste) ಜನರೇ ಕಾರಣ. ಅಂಥವರನ್ನು ಚಿತ್ರರಂಗದಿಂದ ತೊಲಗಿಸಬೇಕು’ ಎಂದು ಅವರು ಹೇಳಿಕೆ ನೀಡಿದ್ದು ಈಗ ವಿವಾದಕ್ಕೆ ಕಾರಣ ಆಗಿದೆ. ಮೀರಾ ಮಿಥುನ್​ ಹೀಗೆ ಮನಬಂದಂತೆ ಮಾತನಾಡಿರುವ ವಿಡಿಯೋ ವೈರಲ್​ ಆಗಿದೆ. ಅವರ ಹೇಳಿಕೆಗಳಿಂದ ಆಕ್ರೋಶಗೊಂಡಿರುವ ಜನರು ಪೊಲೀಸರಿಗೆ ದೂರು ನೀಡಿದ್ದಾರೆ. ಚೆನ್ನೈ ಪೊಲೀಸರು ಮೀರಾ ಮಿಥುನ್​ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಅಷ್ಟಕ್ಕೂ ಯಾರು ಈ ಮೀರಾ ಮಿಥುನ್​? ತಮಿಳುನಲ್ಲಿ ಈ ನಟಿ ಮಾಡಿರುವುದು ಮೂರು ಮತ್ತೊಂದು ಸಿನಿಮಾ ಮಾತ್ರ. ಅದರಲ್ಲಿ ಅವರಿಗೆ ಸಿಕ್ಕಿದ್ದು ಕೂಡ ಸಣ್ಣ ಪುಟ್ಟ ಪಾತ್ರಗಳಷ್ಟೇ. ಬಿಗ್​ ಬಾಸ್​ ತಮಿಳು ಸೀಸನ್​ 3ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಅವರಿಗೆ ಸ್ವಲ್ಪ ಜನಪ್ರಿಯತೆ ಸಿಕ್ಕಿತ್ತು. ತನ್ನನ್ನು ತಾನು ಸೂಪರ್​ ಮಾಡೆಲ್​ ಎಂದು ಕರೆದುಕೊಳ್ಳುವ ಈ ನಟಿ ಈಗ ಬಾಯಿಗೆ ಬಂದಂತೆ ಮಾತನಾಡಿದ್ದಾರೆ.

‘ಅನೈತಿಕ ಚಟುವಟಿಕೆ ಮತ್ತು ಅಪರಾಧ ಕೃತ್ಯಗಳಲ್ಲಿ ಪರಿಶಿಷ್ಟ ಜಾತಿ ಜನರು ಪಾಲ್ಗೊಂಡಿರುವುದರಿಂದ ಅವರು ಸಮಸ್ಯೆ ಎದುರಿಸುತ್ತಾರೆ. ಕಾರಣ ಇಲ್ಲದೇ ಯಾರೂ ಯಾರ ಬಗ್ಗೆಯೂ ಕೆಟ್ಟದ್ದು ಮಾತನಾಡುವುದಿಲ್ಲ. ಚಿತ್ರರಂಗದಲ್ಲಿ ಆಗುತ್ತಿರುವ ಕೆಡುಕುಗಳಿಗೆ ಪರಿಶಿಷ್ಟ ಜಾತಿಯ ನಿರ್ದೇಶಕರು ಕಾರಣ. ಅಂಥವರನ್ನೆಲ್ಲ ಚಿತ್ರರಂಗದಿಂದ ತೊಲಗಿಸಲು ಇದು ಸರಿಯಾದ ಸಮಯ ಅಂತ ನನಗೆ ಅನಿಸುತ್ತದೆ’ ಎಂದು ಅವರು ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ನಟಿ ಮುನ್​ಮುನ್​ ದತ್ತ ಕೂಡ ಜಾತಿ ನಿಂದನೆ ಮಾಡಿ ಜನರ ಆಕ್ರೋಶಕ್ಕೆ ಗುರಿ ಆಗಿದ್ದರು. ಯೂಟ್ಯೂಬ್​ಬಲ್ಲಿ ವಿಡಿಯೋ ಮಾಡಿದ್ದ ಅವರು, ‘ನಾನು ಆ ಜಾತಿಯ ಜನರ ರೀತಿ ಕಾಣಬಾರದು’ ಎಂದು ಒಂದು ನಿರ್ದಿಷ್ಟ ಜಾತಿಯ ಹೆಸರು ಹೇಳಿ ಅವಮಾನ ಮಾಡಿದ್ದರು. ಅವರು ವಿರುದ್ಧವೂ ಕೇಸ್​ ದಾಖಲಾಗಿತ್ತು. ಬಳಿಕ ಕ್ಷಮೆ ಕೇಳಿದ್ದ ಮುನ್​ಮುನ್​ ದತ್ತ, ‘ಯಾರಿಗೂ ನೋವು ಮಾಡಬೇಕು ಎಂಬ ಉದ್ದೇಶದಿಂದ ನಾನು ಆ ಪದ ಬಳಸಿರಲಿಲ್ಲ. ನನ್ನ ಭಾಷೆಯ ಮಿತಿಯಿಂದಾಗಿ ಆ ಪದದ ಸರಿಯಾದ ಅರ್ಥ ನನಗೆ ತಿಳಿದಿರಲಿಲ್ಲ. ಎಲ್ಲರ ಜಾತಿ, ಧರ್ಮ, ಜನಾಂಗದ ಬಗ್ಗೆ ನಾನು ಗೌರವ ಹೊಂದಿದ್ದೇನೆ. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ’ಎಂದು ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ:

ನಾನು ಆತ್ಮಹತ್ಯೆ ಮಾಡಿಕೊಂಡರೆ ತಪ್ಪಿತಸ್ಥರನ್ನು ಜೈಲಿಗೆ ಹಾಕಿ: ಮೋದಿಗೆ ಮನವಿ ಮಾಡಿದ ಬಿಗ್​ ಬಾಸ್ ಮಾಜಿ​ ಸ್ಪರ್ಧಿ

ಜಾತಿ ನಿಂದನೆ ಮಾಡಿದ ಖ್ಯಾತ ಕಿರುತೆರೆ ನಟಿ ಮುನ್​ಮುನ್​ ದತ್ತ ವಿರುದ್ಧ ಎಫ್​ಐಆರ್​ ದಾಖಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!