AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪರಿಶಿಷ್ಟ ಜಾತಿ ಜನರನ್ನು ಚಿತ್ರರಂಗದಿಂದ ಓಡಿಸಬೇಕು’; ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರಾ ವಿರುದ್ಧ ಕೇಸ್​

ತನ್ನನ್ನು ತಾನು ಸೂಪರ್​ ಮಾಡೆಲ್​ ಎಂದು ಕರೆದುಕೊಳ್ಳುವ ನಟಿ ಮೀರಾ ಮಿಥುನ್ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಚಿತ್ರರಂಗದಲ್ಲಿ ಆಗುತ್ತಿರುವ ಕೆಡುಕುಗಳಿಗೆ ಪರಿಶಿಷ್ಟ ಜಾತಿ ಜನರು ಕಾರಣ ಎಂದು ಅವರು ಹೇಳಿರುವುದು ಆಕ್ರೋಶಕ್ಕೆ ಗುರಿ ಆಗಿದೆ.

‘ಪರಿಶಿಷ್ಟ ಜಾತಿ ಜನರನ್ನು ಚಿತ್ರರಂಗದಿಂದ ಓಡಿಸಬೇಕು’; ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರಾ ವಿರುದ್ಧ ಕೇಸ್​
‘ಪರಿಶಿಷ್ಟ ಜಾತಿ ಜನರನ್ನು ಚಿತ್ರರಂಗದಿಂದ ಓಡಿಸಬೇಕು’; ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರಾ ವಿರುದ್ಧ ಕೇಸ್​
TV9 Web
| Edited By: |

Updated on: Aug 11, 2021 | 9:29 AM

Share

ಕಾಲಿವುಡ್​ ನಟಿ ಮೀರಾ ಮಿಥುನ್ (Meera Mithun)​ ಅವರು ಈಗ ಅನಗತ್ಯವಾಗಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಸಂದರ್ಶನವೊಂದಲ್ಲಿ ಮಾತನಾಡುವ ಭರದಲ್ಲಿ ಅವರು ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡಿದ್ದಾರೆ. ‘ಚಿತ್ರರಂಗದಲ್ಲಿ ಆಗುತ್ತಿರುವ ಅನೇಕ ಅನಾಹುತಗಳಿಗೆ ಪರಿಶಿಷ್ಟ ಜಾತಿಯ (Scheduled Caste) ಜನರೇ ಕಾರಣ. ಅಂಥವರನ್ನು ಚಿತ್ರರಂಗದಿಂದ ತೊಲಗಿಸಬೇಕು’ ಎಂದು ಅವರು ಹೇಳಿಕೆ ನೀಡಿದ್ದು ಈಗ ವಿವಾದಕ್ಕೆ ಕಾರಣ ಆಗಿದೆ. ಮೀರಾ ಮಿಥುನ್​ ಹೀಗೆ ಮನಬಂದಂತೆ ಮಾತನಾಡಿರುವ ವಿಡಿಯೋ ವೈರಲ್​ ಆಗಿದೆ. ಅವರ ಹೇಳಿಕೆಗಳಿಂದ ಆಕ್ರೋಶಗೊಂಡಿರುವ ಜನರು ಪೊಲೀಸರಿಗೆ ದೂರು ನೀಡಿದ್ದಾರೆ. ಚೆನ್ನೈ ಪೊಲೀಸರು ಮೀರಾ ಮಿಥುನ್​ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಅಷ್ಟಕ್ಕೂ ಯಾರು ಈ ಮೀರಾ ಮಿಥುನ್​? ತಮಿಳುನಲ್ಲಿ ಈ ನಟಿ ಮಾಡಿರುವುದು ಮೂರು ಮತ್ತೊಂದು ಸಿನಿಮಾ ಮಾತ್ರ. ಅದರಲ್ಲಿ ಅವರಿಗೆ ಸಿಕ್ಕಿದ್ದು ಕೂಡ ಸಣ್ಣ ಪುಟ್ಟ ಪಾತ್ರಗಳಷ್ಟೇ. ಬಿಗ್​ ಬಾಸ್​ ತಮಿಳು ಸೀಸನ್​ 3ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಅವರಿಗೆ ಸ್ವಲ್ಪ ಜನಪ್ರಿಯತೆ ಸಿಕ್ಕಿತ್ತು. ತನ್ನನ್ನು ತಾನು ಸೂಪರ್​ ಮಾಡೆಲ್​ ಎಂದು ಕರೆದುಕೊಳ್ಳುವ ಈ ನಟಿ ಈಗ ಬಾಯಿಗೆ ಬಂದಂತೆ ಮಾತನಾಡಿದ್ದಾರೆ.

‘ಅನೈತಿಕ ಚಟುವಟಿಕೆ ಮತ್ತು ಅಪರಾಧ ಕೃತ್ಯಗಳಲ್ಲಿ ಪರಿಶಿಷ್ಟ ಜಾತಿ ಜನರು ಪಾಲ್ಗೊಂಡಿರುವುದರಿಂದ ಅವರು ಸಮಸ್ಯೆ ಎದುರಿಸುತ್ತಾರೆ. ಕಾರಣ ಇಲ್ಲದೇ ಯಾರೂ ಯಾರ ಬಗ್ಗೆಯೂ ಕೆಟ್ಟದ್ದು ಮಾತನಾಡುವುದಿಲ್ಲ. ಚಿತ್ರರಂಗದಲ್ಲಿ ಆಗುತ್ತಿರುವ ಕೆಡುಕುಗಳಿಗೆ ಪರಿಶಿಷ್ಟ ಜಾತಿಯ ನಿರ್ದೇಶಕರು ಕಾರಣ. ಅಂಥವರನ್ನೆಲ್ಲ ಚಿತ್ರರಂಗದಿಂದ ತೊಲಗಿಸಲು ಇದು ಸರಿಯಾದ ಸಮಯ ಅಂತ ನನಗೆ ಅನಿಸುತ್ತದೆ’ ಎಂದು ಅವರು ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ನಟಿ ಮುನ್​ಮುನ್​ ದತ್ತ ಕೂಡ ಜಾತಿ ನಿಂದನೆ ಮಾಡಿ ಜನರ ಆಕ್ರೋಶಕ್ಕೆ ಗುರಿ ಆಗಿದ್ದರು. ಯೂಟ್ಯೂಬ್​ಬಲ್ಲಿ ವಿಡಿಯೋ ಮಾಡಿದ್ದ ಅವರು, ‘ನಾನು ಆ ಜಾತಿಯ ಜನರ ರೀತಿ ಕಾಣಬಾರದು’ ಎಂದು ಒಂದು ನಿರ್ದಿಷ್ಟ ಜಾತಿಯ ಹೆಸರು ಹೇಳಿ ಅವಮಾನ ಮಾಡಿದ್ದರು. ಅವರು ವಿರುದ್ಧವೂ ಕೇಸ್​ ದಾಖಲಾಗಿತ್ತು. ಬಳಿಕ ಕ್ಷಮೆ ಕೇಳಿದ್ದ ಮುನ್​ಮುನ್​ ದತ್ತ, ‘ಯಾರಿಗೂ ನೋವು ಮಾಡಬೇಕು ಎಂಬ ಉದ್ದೇಶದಿಂದ ನಾನು ಆ ಪದ ಬಳಸಿರಲಿಲ್ಲ. ನನ್ನ ಭಾಷೆಯ ಮಿತಿಯಿಂದಾಗಿ ಆ ಪದದ ಸರಿಯಾದ ಅರ್ಥ ನನಗೆ ತಿಳಿದಿರಲಿಲ್ಲ. ಎಲ್ಲರ ಜಾತಿ, ಧರ್ಮ, ಜನಾಂಗದ ಬಗ್ಗೆ ನಾನು ಗೌರವ ಹೊಂದಿದ್ದೇನೆ. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ’ಎಂದು ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ:

ನಾನು ಆತ್ಮಹತ್ಯೆ ಮಾಡಿಕೊಂಡರೆ ತಪ್ಪಿತಸ್ಥರನ್ನು ಜೈಲಿಗೆ ಹಾಕಿ: ಮೋದಿಗೆ ಮನವಿ ಮಾಡಿದ ಬಿಗ್​ ಬಾಸ್ ಮಾಜಿ​ ಸ್ಪರ್ಧಿ

ಜಾತಿ ನಿಂದನೆ ಮಾಡಿದ ಖ್ಯಾತ ಕಿರುತೆರೆ ನಟಿ ಮುನ್​ಮುನ್​ ದತ್ತ ವಿರುದ್ಧ ಎಫ್​ಐಆರ್​ ದಾಖಲು

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ