Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯ ಜೊತೆ ನಟಿಸೋ ಚಾನ್ಸ್ ಮಿಸ್ ಮಾಡಿಕೊಂಡ ಮೃಣಾಲ್​ಗೆ ಮತ್ತೊಂದು ಅವಕಾಶ

ಚಿತ್ರರಂಗದಲ್ಲಿ ನಟಿಯರಿಗೆ ಬಹಳ ಬೇಡಿಕೆ ಇದೆ. ಹಿಟ್ ಸಿನಿಮಾಗಳ ನಂತರ ಅವರ ಜನಪ್ರಿಯತೆ ಹೆಚ್ಚಾಗುತ್ತದೆ ಮತ್ತು ಡೇಟ್ಸ್ ಹೊಂದಾಣಿಕೆ ಕಷ್ಟವಾಗುತ್ತದೆ. ಮೃಣಾಲ್ ಠಾಕೂರ್ ಅವರು 'ಕಂಗುವ' ಚಿತ್ರದಲ್ಲಿ ನಟಿಸಲು ಅವಕಾಶವನ್ನು ಕಳೆದುಕೊಂಡಿದ್ದರು, ಆದರೆ ಈಗ ಸೂರ್ಯ ಅವರ ಮುಂದಿನ ಚಿತ್ರದಲ್ಲಿ ನಟಿಸಲಿದ್ದಾರೆ.

ಸೂರ್ಯ ಜೊತೆ ನಟಿಸೋ ಚಾನ್ಸ್ ಮಿಸ್ ಮಾಡಿಕೊಂಡ ಮೃಣಾಲ್​ಗೆ ಮತ್ತೊಂದು ಅವಕಾಶ
ಮೃಣಾಲ್-ಸೂರ್ಯ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Oct 28, 2024 | 11:03 AM

ಚಿತ್ರರಂಗದಲ್ಲಿ ನಟಿಯರಿಗೆ ಭರ್ಜರಿ ಬೇಡಿಕೆ ಇದೆ. ಅದರಲ್ಲೂ ಒಂದೆರಡು ಹಿಟ್ ಕೊಟ್ಟ ಮೇಲೆ ಅವರ ಖ್ಯಾತಿ ಹೆಚ್ಚುತ್ತದೆ. ಡೇಟ್ಸ್ ಹೊಂದಾಣಿಕೆ ಕೂಡ ಕಷ್ಟ ಆಗಿ ಬಿಡುತ್ತದೆ. ಕೆಲವರು ಕಥೆ ಇಷ್ಟವಾದರೆ ಒಪ್ಪಿಕೊಳ್ಳುತ್ತಾರೆ. ಆದರೆ, ಬೇರೆ ಸಿನಿಮಾ ಕಮಿಟ್​ಮೆಂಟ್​ ಕಾರಣಕ್ಕೆ ಸಿನಿಮಾದಿಂದ ಹಿಂದೆ ಸರಿಯಬೇಕಾದ ಸ್ಥಿತಿ ಬಂದೊದಗುತ್ತದೆ. ಮೃಣಾಲ್ ಠಾಕೂರ್​ಗೂ ಹಾಗೆಯೇ ಆಗಿತ್ತು. ಅವರು ಸೂರ್ಯ ಜೊತೆ ‘ಕಂಗುವ’ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ, ಅದು ಸಾಧ್ಯ ಆಗಿರಲಿಲ್ಲ. ಈಗ ಅವರಿಗೆ ಮತ್ತೊಮ್ಮೆ ಸೂರ್ಯ ಜೊತೆ ನಟಿಸೋ ಅವಕಾಶ ಸಿಕ್ಕಿದೆ.

‘ಕಂಗುವ’ ಸಿನಿಮಾ ಬಿಗ್ ಬಜೆಟ್ ಚಿತ್ರ. ಈ ಸಿನಿಮಾದಲ್ಲಿ ಸೂರ್ಯ ಹೀರೋ ಆಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ದಿಶಾ ಪಟಾಣಿ ನಾಯಕಿ ಆಗಿ ನಟಿಸುತ್ತಿದ್ದಾರೆ. ಈ ಚಿತ್ರದ ಆಫರ್ ಮೊದಲು ಹೋಗಿದ್ದು ಮೃಣಾಲ್​ಗೆ ಆಗಿತ್ತಂತೆ. ಆದರೆ, ಅವರು ಬೇರೆ ಶೆಡ್ಯೂಲ್​ನ ಕಾರಣಕ್ಕೆ ಈ ಆಫರ್​ನ ಬಿಟ್ಟರು. ಈಗ ಅವರಿಗೆ ಸೂರ್ಯ ಜೊತೆ ನಟಿಸೋ ಅವಕಾಶ ಸಿಕ್ಕಿದೆ.

‘ಕಂಗುವ’ ಚಿತ್ರದಲ್ಲಿ ನಾಯಕಿ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇಲ್ಲ ಎನ್ನಲಾಗಿದೆ. ಕೇವಲ 20 ನಿಮಿಷ ಮಾತ್ರ ನಾಯಕಿ ಕಾಣಿಸಿಕೊಳ್ಳುತ್ತಾರೆ. ಹೀಗಾಗಿ, ಮೃಣಾಲ್ ಈ ಆಫರ್ ಬಿಟ್ಟರೂ ಹೆಚ್ಚು ತೊಂದರೆ ಏನಿಲ್ಲ. ಈಗ ಸೂರ್ಯ ಅವರ ಮುಂದಿನ ಚಿತ್ರಕ್ಕೆ ಮೃಣಾಲ್ ನಾಯಕಿ ಆಗಿದ್ದಾರೆ. ಸೂರ್ಯ ಅವರ ಮುಂದಿನ ಚಿತ್ರ ಫ್ಯಾಂಟಸಿ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬರುತ್ತಿದೆ. ಆರ್​ಜೆ ಬಾಲಾಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ‘ಕಂಗುವ’ ಪ್ರಚಾರದಲ್ಲಿ ಗ್ಲಾಮರ್​ನಿಂದ ಗಮನ ಸೆಳೆದ ದಿಶಾ ಪಟಾನಿ: ಚಿತ್ರಗಳು

‘ದಿ ಫ್ಯಾಮಿಲಿ ಸ್ಟಾರ್’ ಸಿನಿಮಾ ಮೂಲಕ ಮೃಣಾಲ್ ಠಾಕೂರ್ ಸೋತರು. ‘ಪೂಜಾ ಮೇರಿ ಜಾನ್’, ‘ಹೇ ಜವಾನಿ ತೋ ಇಷ್ಟ ಹೋನಾ ಹಿ’, ‘ಸನ್ ಆಫ್ ಸರ್ದಾರ್ 2’ ‘ತುಮ್ ಓಹ್ ಹೋ’ ಚಿತ್ರಗಳಲ್ಲಿ ನಟಿಸಯತ್ತಿದ್ದಾರೆ. ಮೃಣಾಲ್ ನಟಿಸುತ್ತಿರುವ ಈ ಸಿನಿಮಾದಲ್ಲಿ ಕನ್ನಡದ ರುಕ್ಮಿಣಿ ವಸಂತ್ ಕೂಡ ನಟಿಸಯತ್ತಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?