AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯ ಜೊತೆ ನಟಿಸೋ ಚಾನ್ಸ್ ಮಿಸ್ ಮಾಡಿಕೊಂಡ ಮೃಣಾಲ್​ಗೆ ಮತ್ತೊಂದು ಅವಕಾಶ

ಚಿತ್ರರಂಗದಲ್ಲಿ ನಟಿಯರಿಗೆ ಬಹಳ ಬೇಡಿಕೆ ಇದೆ. ಹಿಟ್ ಸಿನಿಮಾಗಳ ನಂತರ ಅವರ ಜನಪ್ರಿಯತೆ ಹೆಚ್ಚಾಗುತ್ತದೆ ಮತ್ತು ಡೇಟ್ಸ್ ಹೊಂದಾಣಿಕೆ ಕಷ್ಟವಾಗುತ್ತದೆ. ಮೃಣಾಲ್ ಠಾಕೂರ್ ಅವರು 'ಕಂಗುವ' ಚಿತ್ರದಲ್ಲಿ ನಟಿಸಲು ಅವಕಾಶವನ್ನು ಕಳೆದುಕೊಂಡಿದ್ದರು, ಆದರೆ ಈಗ ಸೂರ್ಯ ಅವರ ಮುಂದಿನ ಚಿತ್ರದಲ್ಲಿ ನಟಿಸಲಿದ್ದಾರೆ.

ಸೂರ್ಯ ಜೊತೆ ನಟಿಸೋ ಚಾನ್ಸ್ ಮಿಸ್ ಮಾಡಿಕೊಂಡ ಮೃಣಾಲ್​ಗೆ ಮತ್ತೊಂದು ಅವಕಾಶ
ಮೃಣಾಲ್-ಸೂರ್ಯ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 28, 2024 | 11:03 AM

Share

ಚಿತ್ರರಂಗದಲ್ಲಿ ನಟಿಯರಿಗೆ ಭರ್ಜರಿ ಬೇಡಿಕೆ ಇದೆ. ಅದರಲ್ಲೂ ಒಂದೆರಡು ಹಿಟ್ ಕೊಟ್ಟ ಮೇಲೆ ಅವರ ಖ್ಯಾತಿ ಹೆಚ್ಚುತ್ತದೆ. ಡೇಟ್ಸ್ ಹೊಂದಾಣಿಕೆ ಕೂಡ ಕಷ್ಟ ಆಗಿ ಬಿಡುತ್ತದೆ. ಕೆಲವರು ಕಥೆ ಇಷ್ಟವಾದರೆ ಒಪ್ಪಿಕೊಳ್ಳುತ್ತಾರೆ. ಆದರೆ, ಬೇರೆ ಸಿನಿಮಾ ಕಮಿಟ್​ಮೆಂಟ್​ ಕಾರಣಕ್ಕೆ ಸಿನಿಮಾದಿಂದ ಹಿಂದೆ ಸರಿಯಬೇಕಾದ ಸ್ಥಿತಿ ಬಂದೊದಗುತ್ತದೆ. ಮೃಣಾಲ್ ಠಾಕೂರ್​ಗೂ ಹಾಗೆಯೇ ಆಗಿತ್ತು. ಅವರು ಸೂರ್ಯ ಜೊತೆ ‘ಕಂಗುವ’ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ, ಅದು ಸಾಧ್ಯ ಆಗಿರಲಿಲ್ಲ. ಈಗ ಅವರಿಗೆ ಮತ್ತೊಮ್ಮೆ ಸೂರ್ಯ ಜೊತೆ ನಟಿಸೋ ಅವಕಾಶ ಸಿಕ್ಕಿದೆ.

‘ಕಂಗುವ’ ಸಿನಿಮಾ ಬಿಗ್ ಬಜೆಟ್ ಚಿತ್ರ. ಈ ಸಿನಿಮಾದಲ್ಲಿ ಸೂರ್ಯ ಹೀರೋ ಆಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ದಿಶಾ ಪಟಾಣಿ ನಾಯಕಿ ಆಗಿ ನಟಿಸುತ್ತಿದ್ದಾರೆ. ಈ ಚಿತ್ರದ ಆಫರ್ ಮೊದಲು ಹೋಗಿದ್ದು ಮೃಣಾಲ್​ಗೆ ಆಗಿತ್ತಂತೆ. ಆದರೆ, ಅವರು ಬೇರೆ ಶೆಡ್ಯೂಲ್​ನ ಕಾರಣಕ್ಕೆ ಈ ಆಫರ್​ನ ಬಿಟ್ಟರು. ಈಗ ಅವರಿಗೆ ಸೂರ್ಯ ಜೊತೆ ನಟಿಸೋ ಅವಕಾಶ ಸಿಕ್ಕಿದೆ.

‘ಕಂಗುವ’ ಚಿತ್ರದಲ್ಲಿ ನಾಯಕಿ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇಲ್ಲ ಎನ್ನಲಾಗಿದೆ. ಕೇವಲ 20 ನಿಮಿಷ ಮಾತ್ರ ನಾಯಕಿ ಕಾಣಿಸಿಕೊಳ್ಳುತ್ತಾರೆ. ಹೀಗಾಗಿ, ಮೃಣಾಲ್ ಈ ಆಫರ್ ಬಿಟ್ಟರೂ ಹೆಚ್ಚು ತೊಂದರೆ ಏನಿಲ್ಲ. ಈಗ ಸೂರ್ಯ ಅವರ ಮುಂದಿನ ಚಿತ್ರಕ್ಕೆ ಮೃಣಾಲ್ ನಾಯಕಿ ಆಗಿದ್ದಾರೆ. ಸೂರ್ಯ ಅವರ ಮುಂದಿನ ಚಿತ್ರ ಫ್ಯಾಂಟಸಿ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬರುತ್ತಿದೆ. ಆರ್​ಜೆ ಬಾಲಾಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ‘ಕಂಗುವ’ ಪ್ರಚಾರದಲ್ಲಿ ಗ್ಲಾಮರ್​ನಿಂದ ಗಮನ ಸೆಳೆದ ದಿಶಾ ಪಟಾನಿ: ಚಿತ್ರಗಳು

‘ದಿ ಫ್ಯಾಮಿಲಿ ಸ್ಟಾರ್’ ಸಿನಿಮಾ ಮೂಲಕ ಮೃಣಾಲ್ ಠಾಕೂರ್ ಸೋತರು. ‘ಪೂಜಾ ಮೇರಿ ಜಾನ್’, ‘ಹೇ ಜವಾನಿ ತೋ ಇಷ್ಟ ಹೋನಾ ಹಿ’, ‘ಸನ್ ಆಫ್ ಸರ್ದಾರ್ 2’ ‘ತುಮ್ ಓಹ್ ಹೋ’ ಚಿತ್ರಗಳಲ್ಲಿ ನಟಿಸಯತ್ತಿದ್ದಾರೆ. ಮೃಣಾಲ್ ನಟಿಸುತ್ತಿರುವ ಈ ಸಿನಿಮಾದಲ್ಲಿ ಕನ್ನಡದ ರುಕ್ಮಿಣಿ ವಸಂತ್ ಕೂಡ ನಟಿಸಯತ್ತಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ